<p>ಕೊಪ್ಪಳ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಹಾಗೂ ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ಶುಕ್ರವಾರ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು</p>.<p>ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯ ಮುಖಂಡ ತುಳಜರಾಮ್ ಎನ್. ಕೆ ಮಾತನಾಡಿ ‘ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ’ ಎಂದು ಆರೋಪಿಸಿದರು.</p>.<p>‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕೋಚಿಂಗ್ ಮಾಫಿಯಾದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಸಂಪೂರ್ಣ ವ್ಯವಸ್ಥೆ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆ ಮೂಡಿಸಿದೆ. ಕೇವಲ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದು ಖಂಡನೀಯ ಎಂದರು.</p>.<p>್ರವೇಶ ಪರೀಕ್ಷಾ ಪದ್ಧತಿಯನ್ನು ಅಮೂಲಾಗ್ರವಾಗಿ ಬದಲಿಸಿ ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅನ್ಯಾಯದ ವಿರುದ್ಧ ಹೋರಾಡಲು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಸಂಘಟನಾಕಾರರಾದ ಪ್ರದೀಪ್, ಶಾರದ, ಪೋಷಕರಾದ ಸಿದ್ದಲಿಂಗರೆಡ್ಡಿ, ಶರಣು ಗಡ್ಡಿ, ವಿದ್ಯಾರ್ಥಿಗಳಾದ ಅಭಿಷೇಕ್, ಪಲ್ಲವಿ, ಪ್ರತಿಭಾ, ಸ್ಫೂರ್ತಿ, ಸ್ನೇಹಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-35-73043358</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಈ ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಹಾಗೂ ಎನ್ಟಿಎ (ರಾಷ್ಟ್ರೀಯ ಪರೀಕ್ಷಾ ಸಂಸ್ಥೆ) ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ಶುಕ್ರವಾರ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು</p>.<p>ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಒ ರಾಜ್ಯ ಮುಖಂಡ ತುಳಜರಾಮ್ ಎನ್. ಕೆ ಮಾತನಾಡಿ ‘ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ; ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ಎಸಗುತ್ತಿರುವ ಘೋರ ದೌರ್ಜನ್ಯವಾಗಿದೆ. ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳನ್ನು ಅತಿ ಹೆಚ್ಚು ಹಣ ನೀಡುವವರಿಗೆ ಹರಾಜು ಹಾಕಲಾಗಿದೆ’ ಎಂದು ಆರೋಪಿಸಿದರು.</p>.<p>‘ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕೋಚಿಂಗ್ ಮಾಫಿಯಾದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಸಂಪೂರ್ಣ ವ್ಯವಸ್ಥೆ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆ ಮೂಡಿಸಿದೆ. ಕೇವಲ ಲಾಭಕ್ಕಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿರುವುದು ಖಂಡನೀಯ ಎಂದರು.</p>.<p>್ರವೇಶ ಪರೀಕ್ಷಾ ಪದ್ಧತಿಯನ್ನು ಅಮೂಲಾಗ್ರವಾಗಿ ಬದಲಿಸಿ ಅದು ಸಾಮಾನ್ಯರಿಗೂ ಲಭ್ಯವಿರುವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅನ್ಯಾಯದ ವಿರುದ್ಧ ಹೋರಾಡಲು ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಶಿಕ್ಷಣ ಪ್ರೇಮಿ ಸಮುದಾಯ ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಸಂಘಟನಾಕಾರರಾದ ಪ್ರದೀಪ್, ಶಾರದ, ಪೋಷಕರಾದ ಸಿದ್ದಲಿಂಗರೆಡ್ಡಿ, ಶರಣು ಗಡ್ಡಿ, ವಿದ್ಯಾರ್ಥಿಗಳಾದ ಅಭಿಷೇಕ್, ಪಲ್ಲವಿ, ಪ್ರತಿಭಾ, ಸ್ಫೂರ್ತಿ, ಸ್ನೇಹಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-35-73043358</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>