<p>ಕೊಟ್ಟೂರು: ಮಹಿಳೆಯರು ವಿದ್ಯಾವಂತರಾದಾಗ ಮಾತ್ರ ಸಮಾಜಕ್ಕೆ ದಾರಿ ದೀಪವಾಗುತ್ತಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನೀಕೇರಿ ಹೇಳಿದರು.</p>.<p>ಪಟ್ಟಣದ ಡೋಣೂರ ಚಾನುಕೋಟಿ ಮಠದ ಆವರಣದಲ್ಲಿ ಜಿ.ಪಂ., ತಾ.ಪಂ. ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದೊಂದಿಗೆ ಭಾನುವಾರ ನಡೆದ ಮಹಿಳಾ ಸಬಲೀಕರಣ ಹಾಗೂ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಬಾರದು, ಈ ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕಾದ ಹೊಣೆಗಾರಿಕೆ ಇದೆ ಎಂದರು. ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಹಾಗಾಗಿ ಮಹಿಳೆ ಜ್ಞಾನವಂತರಾದರೆ ಕುಟುಂಬದ ನಿರ್ವಹಣೆ ಉತ್ತಮವಾಗಿರುತ್ತದೆ ಎಂದರು.</p>.<p>ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು, ತಹಸಿಲ್ದಾರ ಜಿ.ಕೆ.ಅಮರೇಶ್ ಬಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ.ದಾರುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ವೀಣಾ ವಿವೇಕಾನಂದಗೌಡ, ಅಡಿಕೆ ಮಂಜುನಾಥ, ಪಾರ್ವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-35024239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಮಹಿಳೆಯರು ವಿದ್ಯಾವಂತರಾದಾಗ ಮಾತ್ರ ಸಮಾಜಕ್ಕೆ ದಾರಿ ದೀಪವಾಗುತ್ತಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನೀಕೇರಿ ಹೇಳಿದರು.</p>.<p>ಪಟ್ಟಣದ ಡೋಣೂರ ಚಾನುಕೋಟಿ ಮಠದ ಆವರಣದಲ್ಲಿ ಜಿ.ಪಂ., ತಾ.ಪಂ. ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಹಯೋಗದೊಂದಿಗೆ ಭಾನುವಾರ ನಡೆದ ಮಹಿಳಾ ಸಬಲೀಕರಣ ಹಾಗೂ ಕರಕುಶಲ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಬಾರದು, ಈ ಸಮಾಜವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕಾದ ಹೊಣೆಗಾರಿಕೆ ಇದೆ ಎಂದರು. ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಹಾಗಾಗಿ ಮಹಿಳೆ ಜ್ಞಾನವಂತರಾದರೆ ಕುಟುಂಬದ ನಿರ್ವಹಣೆ ಉತ್ತಮವಾಗಿರುತ್ತದೆ ಎಂದರು.</p>.<p>ಚಾನುಕೋಟಿ ಮಠಾಧೀಶ ಸಿದ್ಧಲಿಂಗ ಶಿವಾಚಾರ್ಯರು, ತಹಸಿಲ್ದಾರ ಜಿ.ಕೆ.ಅಮರೇಶ್ ಬಿ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ.ದಾರುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ವೀಣಾ ವಿವೇಕಾನಂದಗೌಡ, ಅಡಿಕೆ ಮಂಜುನಾಥ, ಪಾರ್ವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-35024239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>