<p>ಕೊಟ್ಟೂರು: ‘ಪುಸ್ತಕ ಓದುವುದರಿಂದ ನಮ್ಮ ಕಲ್ಪನಾ ಶಕ್ತಿ ಹೆಚ್ಚುವುದರ ಜೊತೆಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ’ ಎಂದು ಗ್ರಂಥಾಲಯಾಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಹೇಳಿದರು.</p>.<p>‘ಪುಸ್ತಕಗಳು ನಮ್ಮ ಪೂರ್ವಜರ ಅಸ್ತಿತ್ವಕ್ಕೆ ಸಾಕ್ಷಿಯಾಗಿ ಹಲವು ತಲೆಮಾರುಗಳನ್ನು ನಮಗೆ ಪರಿಚಯಿಸಿಕೊಡುತ್ತವೆ. ಇದರಿಂದ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಪುಸ್ತಕಗಳಿಂದ ಆಗುತ್ತದೆ’ ಎಂದರು.</p>.<p>‘ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ, ಪುಸ್ತಕ ಉದ್ಯಮದ ಮೂರು ಪ್ರಮುಖ ಕೊಂಡಿಗಳಾದ ಪ್ರಕಾಶಕರು, ಪುಸ್ತಕ ಮಾರಾಟಗಾರರು ಮತ್ತು ಗ್ರಂಥಾಲಯಗಳನ್ನು ಪ್ರತಿನಿಧಿಸುವ ದಿನವಾಗಿದೆ. ಇಂದಿನ ಆಧುನಿಕ ತಂತ್ರಜ್ಙಾನ ಜಗತ್ತಿನ ನಡುವೆಯೂ ಪುಸ್ತಕಗಳು ಉಳಿಸಿಕೊಂಡಿರುವ ಮಹತ್ವವನ್ನು ಸಾರುವ ದಿನ ಇದಾಗಿದೆ’ ಎಂದರು.</p>.<p>ಎಸ್.ಎಂ.ರವೀಂದ್ರ ಸ್ವಾಮೀಜಿ ಮಾತನಾಡಿ ವೈಜ್ಞಾನಿಕವಾಗಿ ಆಲೋಚಿಸಲು ಪುಸ್ತಕಗಳು ಸಹಾಯವಾಗುತ್ತವೆ. ಪುಸ್ತಕಗಳನ್ನು ಓದುತ್ತಾ ಇದ್ದರೆ ಏಕಾಗ್ರತೆ ಹಾಗೂ ಜ್ಞಾನರ್ಜಾನೆ ವೃದ್ಧಿಯಾಗುತ್ತದೆ ಎಂದರು.</p>.<p>ಗೀತಾ ನಾಗರಾಜ್, ಜಿ.ಮಂಜುನಾಥ್, ವೈ.ಎಂ.ವಿಜಯಕುಮಾರ್,ಬಾರಿ ಮಹಂತೇಶ್, ಬಾಚೇನಹಳ್ಳಿ ಈಶಪ್ಪ ಮಾತನಾಡಿದರು. ಓದುಗರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-601908303</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ‘ಪುಸ್ತಕ ಓದುವುದರಿಂದ ನಮ್ಮ ಕಲ್ಪನಾ ಶಕ್ತಿ ಹೆಚ್ಚುವುದರ ಜೊತೆಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ’ ಎಂದು ಗ್ರಂಥಾಲಯಾಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಹೇಳಿದರು.</p>.<p>‘ಪುಸ್ತಕಗಳು ನಮ್ಮ ಪೂರ್ವಜರ ಅಸ್ತಿತ್ವಕ್ಕೆ ಸಾಕ್ಷಿಯಾಗಿ ಹಲವು ತಲೆಮಾರುಗಳನ್ನು ನಮಗೆ ಪರಿಚಯಿಸಿಕೊಡುತ್ತವೆ. ಇದರಿಂದ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಪುಸ್ತಕಗಳಿಂದ ಆಗುತ್ತದೆ’ ಎಂದರು.</p>.<p>‘ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ, ಪುಸ್ತಕ ಉದ್ಯಮದ ಮೂರು ಪ್ರಮುಖ ಕೊಂಡಿಗಳಾದ ಪ್ರಕಾಶಕರು, ಪುಸ್ತಕ ಮಾರಾಟಗಾರರು ಮತ್ತು ಗ್ರಂಥಾಲಯಗಳನ್ನು ಪ್ರತಿನಿಧಿಸುವ ದಿನವಾಗಿದೆ. ಇಂದಿನ ಆಧುನಿಕ ತಂತ್ರಜ್ಙಾನ ಜಗತ್ತಿನ ನಡುವೆಯೂ ಪುಸ್ತಕಗಳು ಉಳಿಸಿಕೊಂಡಿರುವ ಮಹತ್ವವನ್ನು ಸಾರುವ ದಿನ ಇದಾಗಿದೆ’ ಎಂದರು.</p>.<p>ಎಸ್.ಎಂ.ರವೀಂದ್ರ ಸ್ವಾಮೀಜಿ ಮಾತನಾಡಿ ವೈಜ್ಞಾನಿಕವಾಗಿ ಆಲೋಚಿಸಲು ಪುಸ್ತಕಗಳು ಸಹಾಯವಾಗುತ್ತವೆ. ಪುಸ್ತಕಗಳನ್ನು ಓದುತ್ತಾ ಇದ್ದರೆ ಏಕಾಗ್ರತೆ ಹಾಗೂ ಜ್ಞಾನರ್ಜಾನೆ ವೃದ್ಧಿಯಾಗುತ್ತದೆ ಎಂದರು.</p>.<p>ಗೀತಾ ನಾಗರಾಜ್, ಜಿ.ಮಂಜುನಾಥ್, ವೈ.ಎಂ.ವಿಜಯಕುಮಾರ್,ಬಾರಿ ಮಹಂತೇಶ್, ಬಾಚೇನಹಳ್ಳಿ ಈಶಪ್ಪ ಮಾತನಾಡಿದರು. ಓದುಗರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-25-601908303</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>