<p>ಕೆ.ಆರ್.ಪೇಟೆ: ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ತಾಲ್ಲೂಕಿನಾದ್ಯಂತ ಸೋಮವಾರ ಶಾಸಕರು, ಜನಪ್ರತಿನಿಧಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರೂ ಸೇರಿದಂತೆ ಸಾರ್ವಜನಿಕರು ಸಂಭ್ರಮದಿಂದ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಿದರು.</p>.<p>ಪಟ್ಟಣದ ಶತಮಾನದ ಶಾಲೆಯಲ್ಲಿ ಶಾಸಕ ಎಚ್.ಟಿ.ಮಂಜು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳ ಆಗಿದ್ದು ಅವರ ಭವಿಷ್ಯ ನಿರ್ಮಿಸುವ ಶಾಲೆಗಳಲ್ಲಿ ಸರ್ಕಾರಿ ಶಾಲಾ ಮಹತ್ತರವಾದ ಕಾರ್ಯ ನಿರ್ವಹಿಸುತಿದ್ದು, ಪೋಷಕರು ಸಹಕಾರ ನೀಡಬೇಕು. ಸರ್ಕಾರಿ ಶಾಲೆ ಮತ್ತು ಕಾಲೇಜುಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುವ’ ಎಂದು ಮನವಿ ಮಾಡಿದರು.</p>.<p>ಕೆ.ಪಿಎಸ್ ಶಾಲೆ ಪ್ರಾರಂಭೋತ್ಸವ: ತಾಲ್ಲೂಕಿನ ಬೂಕನಕೆರೆಯಲ್ಲಿ ಹೊಸದಾಗಿ ಈ ಸಾಲಿನಿಂದ ಆರಂಭವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭೋತ್ಸವದಲ್ಲಿ ಶಾಸಕ ಎಚ್.ಟಿ.ಮಂಜು ಭಾಗವಹಿಸಿ, ಮಕ್ಕಳೊಂದಿಗೆ ಮೆರವಣಿಗೆಯಲ್ಲಿ ಬಂದು ಶಾಲೆಗೆ ಚಾಲನೆ ನೀಡಿದರು.</p>.<p>ಕತ್ತರಘಟ್ಟ ಗ್ರಾಮದಲ್ಲಿ ಸ್ವಾಗತ: ತಾಲ್ಲೂಕಿನ ಕತ್ತರ ಘಟ್ಟ ಗ್ರಾಮದಲ್ಲಿ ನಿವೃತ್ತ ಮುಖ್ಯ ಎಂಜಿನಿಯರ್ ಕೆ.ಪಿ.ಶಿವಕುಮಾರ್ ತಮ್ಮ ತಾಯಿ ಜಯಮ್ಮ ಮತ್ತು ತಂದೆ ಪುಟ್ಟೇಗೌಡ ಹೆಸರಿನಲ್ಲಿ ದಾನವಾಗಿ ₹1.48 ಕೋಟಿ ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವ ಸರ್ಕಾರಿ ಶಾಲೆಯಲ್ಲೂ ಪ್ರಾರಂಭೋತ್ಸವ ನಡೆಯಿತು.ಶಾಲೆಯ ಹಿರಿಯ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ವಾಹನ ಸೌಲಭ್ಯವನ್ನು ಇಲ್ಲಿ ಆರಂಭಿಸಲಾಗಿದ್ದು ದಾಖಲಾತಿ ದ್ವಿಗುಣಗೊಂಡಿದೆ.</p>.<p>ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ಮೊದಲ ದಿನವಾದ ಇಂದು ಸಂಭ್ರಮ ಸಡಗರ ತುಂಬಿತ್ತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಮತ್ತು ಗ್ರಾಮಸ್ಥರು ಸಂಭ್ರಮದಲ್ಲಿ ಭಾಗವಹಿಸಿದ್ದರು. ತಳೀರು ತೋರಣ ಕಟ್ಟಿ ಎತ್ತಿನ ಗಾಡಿ ಮೂಲಕ ಮಕ್ಕಳನ್ನು ಕರೆತಂದು ಶಾಲೆಯಲ್ಲಿ ಸಿಹಿ ಊಟ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-40-1687547877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪೇಟೆ: ಬೇಸಿಗೆ ರಜೆ ಮುಗಿಸಿಕೊಂಡು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ತಾಲ್ಲೂಕಿನಾದ್ಯಂತ ಸೋಮವಾರ ಶಾಸಕರು, ಜನಪ್ರತಿನಿಧಿಗಳು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರೂ ಸೇರಿದಂತೆ ಸಾರ್ವಜನಿಕರು ಸಂಭ್ರಮದಿಂದ ಹೂ ಮತ್ತು ಸಿಹಿ ನೀಡಿ ಸ್ವಾಗತಿಸಿದರು.</p>.<p>ಪಟ್ಟಣದ ಶತಮಾನದ ಶಾಲೆಯಲ್ಲಿ ಶಾಸಕ ಎಚ್.ಟಿ.ಮಂಜು ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳ ಆಗಿದ್ದು ಅವರ ಭವಿಷ್ಯ ನಿರ್ಮಿಸುವ ಶಾಲೆಗಳಲ್ಲಿ ಸರ್ಕಾರಿ ಶಾಲಾ ಮಹತ್ತರವಾದ ಕಾರ್ಯ ನಿರ್ವಹಿಸುತಿದ್ದು, ಪೋಷಕರು ಸಹಕಾರ ನೀಡಬೇಕು. ಸರ್ಕಾರಿ ಶಾಲೆ ಮತ್ತು ಕಾಲೇಜುಗಳನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುವ’ ಎಂದು ಮನವಿ ಮಾಡಿದರು.</p>.<p>ಕೆ.ಪಿಎಸ್ ಶಾಲೆ ಪ್ರಾರಂಭೋತ್ಸವ: ತಾಲ್ಲೂಕಿನ ಬೂಕನಕೆರೆಯಲ್ಲಿ ಹೊಸದಾಗಿ ಈ ಸಾಲಿನಿಂದ ಆರಂಭವಾಗಿರುವ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭೋತ್ಸವದಲ್ಲಿ ಶಾಸಕ ಎಚ್.ಟಿ.ಮಂಜು ಭಾಗವಹಿಸಿ, ಮಕ್ಕಳೊಂದಿಗೆ ಮೆರವಣಿಗೆಯಲ್ಲಿ ಬಂದು ಶಾಲೆಗೆ ಚಾಲನೆ ನೀಡಿದರು.</p>.<p>ಕತ್ತರಘಟ್ಟ ಗ್ರಾಮದಲ್ಲಿ ಸ್ವಾಗತ: ತಾಲ್ಲೂಕಿನ ಕತ್ತರ ಘಟ್ಟ ಗ್ರಾಮದಲ್ಲಿ ನಿವೃತ್ತ ಮುಖ್ಯ ಎಂಜಿನಿಯರ್ ಕೆ.ಪಿ.ಶಿವಕುಮಾರ್ ತಮ್ಮ ತಾಯಿ ಜಯಮ್ಮ ಮತ್ತು ತಂದೆ ಪುಟ್ಟೇಗೌಡ ಹೆಸರಿನಲ್ಲಿ ದಾನವಾಗಿ ₹1.48 ಕೋಟಿ ವೆಚ್ಚದಲ್ಲಿ ನಿರ್ಮಿಸಿಕೊಟ್ಟಿರುವ ಸರ್ಕಾರಿ ಶಾಲೆಯಲ್ಲೂ ಪ್ರಾರಂಭೋತ್ಸವ ನಡೆಯಿತು.ಶಾಲೆಯ ಹಿರಿಯ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರದಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ವಾಹನ ಸೌಲಭ್ಯವನ್ನು ಇಲ್ಲಿ ಆರಂಭಿಸಲಾಗಿದ್ದು ದಾಖಲಾತಿ ದ್ವಿಗುಣಗೊಂಡಿದೆ.</p>.<p>ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ಮೊದಲ ದಿನವಾದ ಇಂದು ಸಂಭ್ರಮ ಸಡಗರ ತುಂಬಿತ್ತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಪೋಷಕರು ಮತ್ತು ಗ್ರಾಮಸ್ಥರು ಸಂಭ್ರಮದಲ್ಲಿ ಭಾಗವಹಿಸಿದ್ದರು. ತಳೀರು ತೋರಣ ಕಟ್ಟಿ ಎತ್ತಿನ ಗಾಡಿ ಮೂಲಕ ಮಕ್ಕಳನ್ನು ಕರೆತಂದು ಶಾಲೆಯಲ್ಲಿ ಸಿಹಿ ಊಟ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-40-1687547877</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>