<p>ಕುಂದಾಪುರ: ‘ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯದ ಕನಸು ಹಾಗೂ ಗುರಿಯ ಬಗ್ಗೆ ಸ್ಪಷ್ಟತೆ ಇದ್ದಾಗ ಮಾತ್ರ ಜೀವನದಲ್ಲಿ ನಿಖರವಾದ ಗುರಿ ಸಾಧಿಸಲು ಸಾಧ್ಯ’ ಎಂದು ಶಿವಮೊಗ್ಗದ ವ್ಯಾಲಿವ್ಯೂ ಕಂಪೆನಿಯ ಆಡಳಿತ ನಿರ್ದೇಶಕ ಡಾ.ಎ.ಕೆ. ಶ್ರೀನಿವಾಸಮೂರ್ತಿ ಹೇಳಿದರು.</p>.<p>ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭಾನ್ವಿತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸವಾಲನ್ನು ಮೆಟ್ಟಿ ನಿಲ್ಲುವ ದೃಢತೆ ಇರಬೇಕು. ಗಳಿಕೆಯ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವ ಮನೋಭಾವ ಬೇಕು. ಸ್ವಚ್ಛಂದ ವಾತಾವರಣ ಕಲಿಯುವ ಮನಸ್ಸುಗಳಿಗೆ ಪ್ರೇರಣೆ ನೀಡುತ್ತದೆ. ಅಂತಹ ಪ್ರೇರಣಾದಾಯಕ ವಾತಾವರಣ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಇದೆ’ ಎಂದರು.</p>.<p>ಉಡುಪಿಯ ಜಿ. ಶಂಕರ್ ಕನ್ಸ್ಟ್ರಕ್ಷನ್ ಕಂಪನಿಯ ಆಡಳಿತ ನಿರ್ದೇಶಕಿ ಶ್ಯಾಮಿಲಿ ಶಂಕರ್, ‘ಕಲಿಯುವಿಕೆ ಪಠ್ಯಕ್ಕೆ ಸೀಮಿತವಾಗಬಾರದು. ಬದುಕಿನ ಪಾಠಗಳನ್ನು ಕಲಿಸುವ ಜೀವನ ಕೌಶಲಗಳು ಕರಗತವಾಗಬೇಕು. ವಿದ್ಯಾರ್ಥಿ ಜೀವನ ಭವಿಷ್ಯದ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವ ಪರ್ವಕಾಲ. ಈ ಅವಧಿಯಲ್ಲಿ ಸರಿಯಾದ ತೀರ್ಮಾನ ಹಾಗೂ ಆಯ್ಕೆಯ ತೀರ್ಮಾನಗಳು ವಿದ್ಯಾರ್ಥಿಗಳು ಹಾಗೂ ಪೋಷಕರದ್ದಾಗಿರಬೇಕು. ಪ್ರಸ್ತುತ ಜಗತ್ತೇ ಕೌಶಲಾಧರಿತ ತಂತಿಯ ಮೇಲೆ ನಡಿಗೆ ಮಾಡುತ್ತಿದೆ. ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಕೌಶಲ ಹೆಚ್ಚಿಸಲು ಮಾರ್ಗದರ್ಶನ ನೀಡುವ ಹೊಣೆ ಶಿಕ್ಷಣ ಸಂಸ್ಥೆಗಳದ್ದು’ ಎಂದರು.</p>.<p>ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಕಡಿಮೆ ಅಂಕ ಗಳಿಸಿದ ಮಕ್ಕಳಿಗೂ ಯೋಗ್ಯ ತರಬೇತಿ ನೀಡಿ ಅವರನ್ನು ಪ್ರತಿಭಾನ್ವಿತರನ್ನಾಗಿಸುವ ಕೆಲಸ ನಡೆಯುತ್ತಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜು ಸಾಧನೆ ತೋರಿದೆ. ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಅರ್ಹ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಆರ್ಥಿಕ ಬಡವರಿಗೆ ಹಾಗೂ ಅರ್ಹ ಪ್ರತಿಭಾವಂತ ಮಕ್ಕಳಿಗೆ ಆಡಳಿತ ಮಂಡಳಿ ಸಹಕಾರ ನೀಡುತ್ತಿದೆ ಎಂದರು.</p>.<p>ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಜೊತೆ ಕಾರ್ಯದರ್ಶಿ ಸುಧಾಕರ ಶೆಟ್ಟಿ ಬಾಂಡ್ಯ, ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ಕೆ.ಸಿ., ನೇರಳಕಟ್ಟೆ ನಾರಾಯಣ ನಾಯ್ಕ್ ಹಾಜರಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜು ಪ್ರಾಂಶುಪಾಲ ಕೊತ್ತಾಡಿ ಉಮೇಶ್ ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ವಿದ್ಯಾರ್ಥಿ ಶ್ರೀಶಾಂತ್ ಪ್ರಾರ್ಥಿಸಿದರು. ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ಪ್ರತಿಭಾನ್ವಿತರ ಪಟ್ಟಿ ವಾಚಿಸಿದರು. ಮಹೇಶ್ ಕುಮಾರ್ ವಂದಿಸಿದರ. ಪೂಜಾ ಕುಂದರ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-28-1234213563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ‘ವಿದ್ಯಾರ್ಥಿ ಜೀವನದಲ್ಲಿ ಭವಿಷ್ಯದ ಕನಸು ಹಾಗೂ ಗುರಿಯ ಬಗ್ಗೆ ಸ್ಪಷ್ಟತೆ ಇದ್ದಾಗ ಮಾತ್ರ ಜೀವನದಲ್ಲಿ ನಿಖರವಾದ ಗುರಿ ಸಾಧಿಸಲು ಸಾಧ್ಯ’ ಎಂದು ಶಿವಮೊಗ್ಗದ ವ್ಯಾಲಿವ್ಯೂ ಕಂಪೆನಿಯ ಆಡಳಿತ ನಿರ್ದೇಶಕ ಡಾ.ಎ.ಕೆ. ಶ್ರೀನಿವಾಸಮೂರ್ತಿ ಹೇಳಿದರು.</p>.<p>ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭಾನ್ವಿತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸವಾಲನ್ನು ಮೆಟ್ಟಿ ನಿಲ್ಲುವ ದೃಢತೆ ಇರಬೇಕು. ಗಳಿಕೆಯ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವ ಮನೋಭಾವ ಬೇಕು. ಸ್ವಚ್ಛಂದ ವಾತಾವರಣ ಕಲಿಯುವ ಮನಸ್ಸುಗಳಿಗೆ ಪ್ರೇರಣೆ ನೀಡುತ್ತದೆ. ಅಂತಹ ಪ್ರೇರಣಾದಾಯಕ ವಾತಾವರಣ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಇದೆ’ ಎಂದರು.</p>.<p>ಉಡುಪಿಯ ಜಿ. ಶಂಕರ್ ಕನ್ಸ್ಟ್ರಕ್ಷನ್ ಕಂಪನಿಯ ಆಡಳಿತ ನಿರ್ದೇಶಕಿ ಶ್ಯಾಮಿಲಿ ಶಂಕರ್, ‘ಕಲಿಯುವಿಕೆ ಪಠ್ಯಕ್ಕೆ ಸೀಮಿತವಾಗಬಾರದು. ಬದುಕಿನ ಪಾಠಗಳನ್ನು ಕಲಿಸುವ ಜೀವನ ಕೌಶಲಗಳು ಕರಗತವಾಗಬೇಕು. ವಿದ್ಯಾರ್ಥಿ ಜೀವನ ಭವಿಷ್ಯದ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳುವ ಪರ್ವಕಾಲ. ಈ ಅವಧಿಯಲ್ಲಿ ಸರಿಯಾದ ತೀರ್ಮಾನ ಹಾಗೂ ಆಯ್ಕೆಯ ತೀರ್ಮಾನಗಳು ವಿದ್ಯಾರ್ಥಿಗಳು ಹಾಗೂ ಪೋಷಕರದ್ದಾಗಿರಬೇಕು. ಪ್ರಸ್ತುತ ಜಗತ್ತೇ ಕೌಶಲಾಧರಿತ ತಂತಿಯ ಮೇಲೆ ನಡಿಗೆ ಮಾಡುತ್ತಿದೆ. ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಕೌಶಲ ಹೆಚ್ಚಿಸಲು ಮಾರ್ಗದರ್ಶನ ನೀಡುವ ಹೊಣೆ ಶಿಕ್ಷಣ ಸಂಸ್ಥೆಗಳದ್ದು’ ಎಂದರು.</p>.<p>ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಕಡಿಮೆ ಅಂಕ ಗಳಿಸಿದ ಮಕ್ಕಳಿಗೂ ಯೋಗ್ಯ ತರಬೇತಿ ನೀಡಿ ಅವರನ್ನು ಪ್ರತಿಭಾನ್ವಿತರನ್ನಾಗಿಸುವ ಕೆಲಸ ನಡೆಯುತ್ತಿದೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಕಾಲೇಜು ಸಾಧನೆ ತೋರಿದೆ. ಸಮಾಜದ ಎಲ್ಲಾ ವರ್ಗದ ಮಕ್ಕಳಿಗೂ ಅರ್ಹ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಆರ್ಥಿಕ ಬಡವರಿಗೆ ಹಾಗೂ ಅರ್ಹ ಪ್ರತಿಭಾವಂತ ಮಕ್ಕಳಿಗೆ ಆಡಳಿತ ಮಂಡಳಿ ಸಹಕಾರ ನೀಡುತ್ತಿದೆ ಎಂದರು.</p>.<p>ಕುಂದಾಪುರ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಜೊತೆ ಕಾರ್ಯದರ್ಶಿ ಸುಧಾಕರ ಶೆಟ್ಟಿ ಬಾಂಡ್ಯ, ಆಡಳಿತ ಮಂಡಳಿ ಸದಸ್ಯರಾದ ರಾಜೇಶ್ ಕೆ.ಸಿ., ನೇರಳಕಟ್ಟೆ ನಾರಾಯಣ ನಾಯ್ಕ್ ಹಾಜರಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕಾಲೇಜು ಪ್ರಾಂಶುಪಾಲ ಕೊತ್ತಾಡಿ ಉಮೇಶ್ ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು. ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ವಿದ್ಯಾರ್ಥಿ ಶ್ರೀಶಾಂತ್ ಪ್ರಾರ್ಥಿಸಿದರು. ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ಪ್ರತಿಭಾನ್ವಿತರ ಪಟ್ಟಿ ವಾಚಿಸಿದರು. ಮಹೇಶ್ ಕುಮಾರ್ ವಂದಿಸಿದರ. ಪೂಜಾ ಕುಂದರ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-28-1234213563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>