<p>ಲಕ್ಷ್ಮೇಶ್ವರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ತಾಲ್ಲೂಕಿನ ರಾಮಗೇರಿ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಏಕಲವ್ಯ ಆರ್ಟ್ ಆಫ್ ಲಿವಿಂಗ್ ಸೆಂಟರ್ ವತಿಯಿಂದ ಏಕಲವ್ಯ ಅವಾರ್ಡ್ 2026-27ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 10 ಮಕ್ಕಳಿಗೆ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ವಿತರಿಸಲಾಯಿತು.</p>.<p>ಗ್ರಾಮದ ಶಿಕ್ಷಕ ಜಿ.ಬಿ.ಗಳಗನಾಥ ಅವರ ನಿವಾಸದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಯಲ್ಲಪ್ಪ ತಳವಾರ ಅವರ ನೇತೃತ್ವದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನೆರವೇರಿತು.</p>.<p>ಗ್ರಾಮದ ಹಿರಿಯರಾದ ಬಸಣ್ಣ ಬೆಟಗೇರಿ ಮಾತನಾಡಿ ‘ಈಚಿನ ದಿನಗಳಲ್ಲಿ ಮಾನವನ ಸಂಬಂಧಗಳೇ ಕೆಡುತ್ತಿವೆ. ಮನುಷ್ಯತ್ವ ನಾಶವಾಗಿ ಪಶುತ್ವ ಬೆಳೆಯುತ್ತಿರುವುದು ವಿಷಾದನೀಯ. ಸಮಾಜದಲ್ಲಿ ಮೂಢನಂಬಿಕೆಗಳನ್ನು ತೊಡೆದು ಹಾಕಿ ಮಾನವೀಯತೆ ಬೆಳೆಸುವ ಸಲುವಾಗಿ ಮಾನದ ಬಂಧುತ್ವ ವೇದಿಕೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ರಾಮಣ್ಣ ಲಮಾಣಿ, ಭೀಮಣ್ಣ ಯಂಗಾಡಿ, ರಾಜು ಓಲೇಕಾರ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-578312649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ತಾಲ್ಲೂಕಿನ ರಾಮಗೇರಿ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಏಕಲವ್ಯ ಆರ್ಟ್ ಆಫ್ ಲಿವಿಂಗ್ ಸೆಂಟರ್ ವತಿಯಿಂದ ಏಕಲವ್ಯ ಅವಾರ್ಡ್ 2026-27ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 10 ಮಕ್ಕಳಿಗೆ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಏಕಲವ್ಯ ಪ್ರಶಸ್ತಿ ವಿತರಿಸಲಾಯಿತು.</p>.<p>ಗ್ರಾಮದ ಶಿಕ್ಷಕ ಜಿ.ಬಿ.ಗಳಗನಾಥ ಅವರ ನಿವಾಸದಲ್ಲಿ ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕರಾದ ಯಲ್ಲಪ್ಪ ತಳವಾರ ಅವರ ನೇತೃತ್ವದಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನೆರವೇರಿತು.</p>.<p>ಗ್ರಾಮದ ಹಿರಿಯರಾದ ಬಸಣ್ಣ ಬೆಟಗೇರಿ ಮಾತನಾಡಿ ‘ಈಚಿನ ದಿನಗಳಲ್ಲಿ ಮಾನವನ ಸಂಬಂಧಗಳೇ ಕೆಡುತ್ತಿವೆ. ಮನುಷ್ಯತ್ವ ನಾಶವಾಗಿ ಪಶುತ್ವ ಬೆಳೆಯುತ್ತಿರುವುದು ವಿಷಾದನೀಯ. ಸಮಾಜದಲ್ಲಿ ಮೂಢನಂಬಿಕೆಗಳನ್ನು ತೊಡೆದು ಹಾಕಿ ಮಾನವೀಯತೆ ಬೆಳೆಸುವ ಸಲುವಾಗಿ ಮಾನದ ಬಂಧುತ್ವ ವೇದಿಕೆ ಕೆಲಸ ಮಾಡುತ್ತಿರುವುದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ರಾಮಣ್ಣ ಲಮಾಣಿ, ಭೀಮಣ್ಣ ಯಂಗಾಡಿ, ರಾಜು ಓಲೇಕಾರ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-23-578312649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>