<p>ಲಕ್ಷ್ಮೇಶ್ವರ: ಬಾಲ್ಯದಲ್ಲಿ ದೊರೆಯುವ ಶಿಕ್ಷಣ ಮತ್ತು ಸಂಸ್ಕೃತಿಯ ಮೌಲ್ಯಗಳು ಜೀವನಪೂರ್ತಿ ಉಳಿಯುತ್ತವೆ. ಆದ್ದರಿಂದ ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಮತ್ತು ಸಂಪ್ರದಾಯ ಕಲಿಸಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.</p>.<p>ಗುರುವಾರ ಪಟ್ಟಣದ 15 ವಾರ್ಡಿನಲ್ಲಿನ ತಾಯಿ ಪಾರ್ವತಿ ಮಕ್ಕಳ ಬಳಗದ ಹತ್ತಿರದ ದ್ಯಾಮವ್ವ ದೇವಿ ದೇವಸ್ಥಾನ ಪಕ್ಕದಲ್ಲಿ 194 ನೇ ಅಂಗನವಾಡಿ ಕೇಂದ್ರ ಸಂಖ್ಯೆ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ನೇರವೇರಿಸಿ ಅವರು ಮಾತನಾಡಿದರು.</p>.<p>ನಗರ ಯೋಜನೆ ಅಡಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಬಾಡಿಗೆ ಕಟ್ಟಡದಲ್ಲಿ ಇರುವ ಅಂಗನವಾಡಿ ಕೇಂದ್ರಗಳೆಲ್ಲಕ್ಕೂ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನ ಮಾಡುತ್ತೇನೆ ಎಂದರು</p>.<p>ಪುರಸಭೆ ಮಾಜಿ ಸದಸ್ಯ ರಾಜೀವ್ ಕುಂಬಿ ವಾರ್ಡನಲ್ಲಿ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರವಿತ್ತು ಈ ಬಗ್ಗೆ ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಗಮನ ತಂದು ಪುರಸಭೆಯಿಂದ ಜಾಗ ಕಲ್ಪಿಸಲಾಗಿತ್ತು. ಇದೀಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದರು.</p>.<p>ಈ ವೇಳೆ ಪುರಸಭೆ ಮಾಜಿ ಸದಸ್ಯ ಶಂಕ್ರಪ್ಪ ಗುರಿಕಾರ. ಸಂಜೀವ ದೇಸಾಯಿ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಸಿಡಿಪಿಓ ಮೃತ್ಯುಂಜಯ ಗುಡ್ಡದಾನ್ವೇರಿ, ಅಂಗನವಾಡಿ ಮೇಲ್ವಿಚಾರಕಿ ನಂದಾ ನವಲೆ, ಪ್ರವೀಣ ಬೋಮಲೆ , ಭೀಮಣ್ಣ ಯಂಗಾಡಿ, ವಿಜಯ ಕುಂಬಾರ, ಗಿರೀಶ ಚೌರಡ್ಡಿ, ವಿಶಾಲ ಬಟಗುರ್ಕಿ, ಅಂಗನವಾಡಿ ಕಾರ್ಯಕರ್ತೆಯರಾದ ಡಿ.ವಿ.ಕೊಟ್ಟೂರ, ನಾಗಲಕ್ಷ್ಮಿ ಕುಲಕರ್ಣಿ, ರೂಪಾ ಕಟ್ಟಿಮನಿ, ಎಂ.ಎನ್.ಚತ್ರದ, ಆರ್.ಎಸ್.ಚಂಗಾಪೂರ ಸಹಾಯಕಿಯರಾದ ನೀಲವ್ವ ಪೂಜಾರ, ಸಂಗೀತ ಸರ್ವೆದೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-23-1628666393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ಬಾಲ್ಯದಲ್ಲಿ ದೊರೆಯುವ ಶಿಕ್ಷಣ ಮತ್ತು ಸಂಸ್ಕೃತಿಯ ಮೌಲ್ಯಗಳು ಜೀವನಪೂರ್ತಿ ಉಳಿಯುತ್ತವೆ. ಆದ್ದರಿಂದ ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಮತ್ತು ಸಂಪ್ರದಾಯ ಕಲಿಸಬೇಕು ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.</p>.<p>ಗುರುವಾರ ಪಟ್ಟಣದ 15 ವಾರ್ಡಿನಲ್ಲಿನ ತಾಯಿ ಪಾರ್ವತಿ ಮಕ್ಕಳ ಬಳಗದ ಹತ್ತಿರದ ದ್ಯಾಮವ್ವ ದೇವಿ ದೇವಸ್ಥಾನ ಪಕ್ಕದಲ್ಲಿ 194 ನೇ ಅಂಗನವಾಡಿ ಕೇಂದ್ರ ಸಂಖ್ಯೆ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ನೇರವೇರಿಸಿ ಅವರು ಮಾತನಾಡಿದರು.</p>.<p>ನಗರ ಯೋಜನೆ ಅಡಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಬಾಡಿಗೆ ಕಟ್ಟಡದಲ್ಲಿ ಇರುವ ಅಂಗನವಾಡಿ ಕೇಂದ್ರಗಳೆಲ್ಲಕ್ಕೂ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನ ಮಾಡುತ್ತೇನೆ ಎಂದರು</p>.<p>ಪುರಸಭೆ ಮಾಜಿ ಸದಸ್ಯ ರಾಜೀವ್ ಕುಂಬಿ ವಾರ್ಡನಲ್ಲಿ ಹಲವಾರು ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರವಿತ್ತು ಈ ಬಗ್ಗೆ ಹಲವಾರು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಗಮನ ತಂದು ಪುರಸಭೆಯಿಂದ ಜಾಗ ಕಲ್ಪಿಸಲಾಗಿತ್ತು. ಇದೀಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದರು.</p>.<p>ಈ ವೇಳೆ ಪುರಸಭೆ ಮಾಜಿ ಸದಸ್ಯ ಶಂಕ್ರಪ್ಪ ಗುರಿಕಾರ. ಸಂಜೀವ ದೇಸಾಯಿ, ಗಂಗಾಧರ ಮೆಣಸಿನಕಾಯಿ, ಬಸವರಾಜ ಚಕ್ರಸಾಲಿ, ಸಿಡಿಪಿಓ ಮೃತ್ಯುಂಜಯ ಗುಡ್ಡದಾನ್ವೇರಿ, ಅಂಗನವಾಡಿ ಮೇಲ್ವಿಚಾರಕಿ ನಂದಾ ನವಲೆ, ಪ್ರವೀಣ ಬೋಮಲೆ , ಭೀಮಣ್ಣ ಯಂಗಾಡಿ, ವಿಜಯ ಕುಂಬಾರ, ಗಿರೀಶ ಚೌರಡ್ಡಿ, ವಿಶಾಲ ಬಟಗುರ್ಕಿ, ಅಂಗನವಾಡಿ ಕಾರ್ಯಕರ್ತೆಯರಾದ ಡಿ.ವಿ.ಕೊಟ್ಟೂರ, ನಾಗಲಕ್ಷ್ಮಿ ಕುಲಕರ್ಣಿ, ರೂಪಾ ಕಟ್ಟಿಮನಿ, ಎಂ.ಎನ್.ಚತ್ರದ, ಆರ್.ಎಸ್.ಚಂಗಾಪೂರ ಸಹಾಯಕಿಯರಾದ ನೀಲವ್ವ ಪೂಜಾರ, ಸಂಗೀತ ಸರ್ವೆದೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-23-1628666393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>