<p>ಲಿಂಗಸುಗೂರು : ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಸಾಧನೆಗೆ ಗುರಿ ಮತ್ತು ಗುರುವಿನೊಂದಿಗೆ ಪ್ರಯತ್ನವೂ ಬೇಕು. ಪ್ರಯತ್ನವಿಲ್ಲದಿದ್ದರೆ ಗುರಿ-ಗುರು ಎರಡೂ ವ್ಯರ್ಥವಾಗುತ್ತವೆ ಎಂದು ಪಿಐ ಹೊಸಕೇರಪ್ಪ ಹೇಳಿದರು.</p>.<p>ಪಟ್ಟಣದ ಶಾರದಾ ವಿದ್ಯಾಮಂದಿರ ಪಿಯು ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಾರದಾ ಜೀನಿಯಸ್ ಹಂಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಿಮ್ಮ ಒಳಿತಿಗೆ ಸದಾ ಶ್ರಮಿಸುವ ತಂದೆ-ತಾಯಿ ಮತ್ತು ಗುರುಗಳನ್ನು ಗೌರವಿಸಬೇಕು, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಕಸ್ಮಾತ್ ಫೇಲಾದರೆ ಆತ್ಮಹತ್ಯೆಯಂಥ ಕೆಟ್ಟ ನಿರ್ಣಯಗಳು ತೆಗೆದುಕೊಳ್ಳಬಾರದು. ಧೃತಿಗೆಡದೇ ನಿರಂತರ ಪ್ರಯತ್ನಿಸಿ ಸಾಫಲ್ಯ ಹೊಂದಬಹುದು’ ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಹನಮಂತಗೌಡ ಪಾಟೀಲ, ಪ್ರಾಚಾರ್ಯ ಮಹೇಶ ತೋಟದ, ಆಡಳಿತಾಧಿಕಾರಿ ರಾಜಾ ವಾಸುದೇವ ನಾಯಕ, ಉಪನ್ಯಾಸಕ ಬಸವರಾಜ ಖೈರವಾಡಗಿ, ದುರ್ಗಾಸಿಂಗ್, ನಿರುಪಾದಿ ಖೈರವಾಡಗಿ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-32-546697320</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಿಂಗಸುಗೂರು : ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಸಾಧನೆಗೆ ಗುರಿ ಮತ್ತು ಗುರುವಿನೊಂದಿಗೆ ಪ್ರಯತ್ನವೂ ಬೇಕು. ಪ್ರಯತ್ನವಿಲ್ಲದಿದ್ದರೆ ಗುರಿ-ಗುರು ಎರಡೂ ವ್ಯರ್ಥವಾಗುತ್ತವೆ ಎಂದು ಪಿಐ ಹೊಸಕೇರಪ್ಪ ಹೇಳಿದರು.</p>.<p>ಪಟ್ಟಣದ ಶಾರದಾ ವಿದ್ಯಾಮಂದಿರ ಪಿಯು ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಾರದಾ ಜೀನಿಯಸ್ ಹಂಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಿಮ್ಮ ಒಳಿತಿಗೆ ಸದಾ ಶ್ರಮಿಸುವ ತಂದೆ-ತಾಯಿ ಮತ್ತು ಗುರುಗಳನ್ನು ಗೌರವಿಸಬೇಕು, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಕಸ್ಮಾತ್ ಫೇಲಾದರೆ ಆತ್ಮಹತ್ಯೆಯಂಥ ಕೆಟ್ಟ ನಿರ್ಣಯಗಳು ತೆಗೆದುಕೊಳ್ಳಬಾರದು. ಧೃತಿಗೆಡದೇ ನಿರಂತರ ಪ್ರಯತ್ನಿಸಿ ಸಾಫಲ್ಯ ಹೊಂದಬಹುದು’ ಎಂದು ಹೇಳಿದರು.</p>.<p>ಸಂಸ್ಥೆಯ ಅಧ್ಯಕ್ಷ ಹನಮಂತಗೌಡ ಪಾಟೀಲ, ಪ್ರಾಚಾರ್ಯ ಮಹೇಶ ತೋಟದ, ಆಡಳಿತಾಧಿಕಾರಿ ರಾಜಾ ವಾಸುದೇವ ನಾಯಕ, ಉಪನ್ಯಾಸಕ ಬಸವರಾಜ ಖೈರವಾಡಗಿ, ದುರ್ಗಾಸಿಂಗ್, ನಿರುಪಾದಿ ಖೈರವಾಡಗಿ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-32-546697320</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>