<p>ಮಧುಗಿರಿ: ಎಲ್ಲೆಡೆ ಸ್ಪರ್ಧಾತ್ಮಕ ಸನ್ನಿವೇಶ ಸೃಷ್ಟಿಯಾಗಿರುವುದರಿಂದ ಜೀವನದಲ್ಲಿ ಯಶಸ್ವಿಯಾಗಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಈ ವಿಶಿಷ್ಟ ಶಕ್ತಿ ಗಳಿಸುವ ಕಡೆ ಎಲ್ಲರ ಚಿತ್ತವಿರಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಮಾಧವ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವೇಮನರೆಡ್ಡಿ ಸಮುದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.</p>.<p>ಉದ್ಯೋಗಕ್ಕಾಗಿ ಶಿಕ್ಷಣ ಬೇಕು. ಆದರೆ ಮೂಲ ಗುರಿ ಜ್ಞಾನದ ಶಿಖರ ಏರುವ ಕಡೆಯಿರಬೇಕು. ಶಿಕ್ಷಣವನ್ನು ಉದ್ಯೋಗ ಗಳಿಸುವುದಕ್ಕೆ ಸೀಮಿತವಾಗಿರಿಸಿಕೊಳ್ಳದೆ, ಉದ್ಯೋಗ ಸೃಷ್ಟಿ ಮಾಡುವ ಮಟ್ಟಕ್ಕೆ ಬೆಳೆಯಬೇಕು. ಸಾಮಾಜಿಕ ಆಸ್ತಿಯಾಗುವ ವ್ಯಕ್ತಿತ್ವ ಹೊಂದಬೇಕು ಎಂದು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ. ಎಸ್. ಪಾಂಡುರಂಗರೆಡ್ಡಿ ಮಾತನಾಡಿ, ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಘದ ಜವಾಬ್ದಾರಿ. ಈ ಕಾರ್ಯವನ್ನು ಎರಡು ವರ್ಷಗಳಿಂದ ಎಲ್ಲರ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದಲ್ಲಿ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ. ಸಿ. ಕೃಷ್ಣಾರೆಡ್ಡಿ, ಬಿಆರ್ ಸಿ ಪವನ್ ಕುಮಾರ್ ರೆಡ್ಡಿ, ಅಶ್ವಥ್ ನಾರಾಯಣರೆಡ್ಡಿ, ಮೋಹನ್ ಕುಮಾರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ವೆಂಕಟಕೃಷ್ಣಾರೆಡ್ಡಿ, ನಾರಾಯಣರೆಡ್ಡಿ, ಸುರೇಶ್ ರೆಡ್ಡಿ, ಚಿನ್ನಪ್ಪ ರೆಡ್ಡಿ, ಶನಿವಾರಂರೆಡ್ಡಿ, ಜಯರಾಮ್ ರೆಡ್ಡಿ, ತಿಮ್ಮಾರೆಡ್ಡಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-621555905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಎಲ್ಲೆಡೆ ಸ್ಪರ್ಧಾತ್ಮಕ ಸನ್ನಿವೇಶ ಸೃಷ್ಟಿಯಾಗಿರುವುದರಿಂದ ಜೀವನದಲ್ಲಿ ಯಶಸ್ವಿಯಾಗಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಈ ವಿಶಿಷ್ಟ ಶಕ್ತಿ ಗಳಿಸುವ ಕಡೆ ಎಲ್ಲರ ಚಿತ್ತವಿರಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕ ಮಾಧವ ರೆಡ್ಡಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ವೇಮನರೆಡ್ಡಿ ಸಮುದಾಯ ಭವನದಲ್ಲಿ ತಾಲ್ಲೂಕು ರೆಡ್ಡಿ ಜನ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.</p>.<p>ಉದ್ಯೋಗಕ್ಕಾಗಿ ಶಿಕ್ಷಣ ಬೇಕು. ಆದರೆ ಮೂಲ ಗುರಿ ಜ್ಞಾನದ ಶಿಖರ ಏರುವ ಕಡೆಯಿರಬೇಕು. ಶಿಕ್ಷಣವನ್ನು ಉದ್ಯೋಗ ಗಳಿಸುವುದಕ್ಕೆ ಸೀಮಿತವಾಗಿರಿಸಿಕೊಳ್ಳದೆ, ಉದ್ಯೋಗ ಸೃಷ್ಟಿ ಮಾಡುವ ಮಟ್ಟಕ್ಕೆ ಬೆಳೆಯಬೇಕು. ಸಾಮಾಜಿಕ ಆಸ್ತಿಯಾಗುವ ವ್ಯಕ್ತಿತ್ವ ಹೊಂದಬೇಕು ಎಂದು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ರೆಡ್ಡಿ ಜನ ಸಂಘದ ಅಧ್ಯಕ್ಷ ಕೆ. ಎಸ್. ಪಾಂಡುರಂಗರೆಡ್ಡಿ ಮಾತನಾಡಿ, ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಂಘದ ಜವಾಬ್ದಾರಿ. ಈ ಕಾರ್ಯವನ್ನು ಎರಡು ವರ್ಷಗಳಿಂದ ಎಲ್ಲರ ಸಹಕಾರದೊಂದಿಗೆ ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದಲ್ಲಿ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಪಿ. ಸಿ. ಕೃಷ್ಣಾರೆಡ್ಡಿ, ಬಿಆರ್ ಸಿ ಪವನ್ ಕುಮಾರ್ ರೆಡ್ಡಿ, ಅಶ್ವಥ್ ನಾರಾಯಣರೆಡ್ಡಿ, ಮೋಹನ್ ಕುಮಾರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ವೆಂಕಟಕೃಷ್ಣಾರೆಡ್ಡಿ, ನಾರಾಯಣರೆಡ್ಡಿ, ಸುರೇಶ್ ರೆಡ್ಡಿ, ಚಿನ್ನಪ್ಪ ರೆಡ್ಡಿ, ಶನಿವಾರಂರೆಡ್ಡಿ, ಜಯರಾಮ್ ರೆಡ್ಡಿ, ತಿಮ್ಮಾರೆಡ್ಡಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-17-621555905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>