<p>ಮಧುಗಿರಿ: ಅಂಬೇಡ್ಕರ್ ಜನರಲ್ಲಿನ ಮೌಢ್ಯ, ಅಜ್ಞಾನ ನೀಗಿಸಿದರೆ, ಬಾಬೂಜಿ ಜನರ ಹಸಿವು ನೀಗಿಸಿದರು ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಹೇಳಿದರು.</p>.<p>ಪಟ್ಟಣದ ಕನ್ನಡ ಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳಿಂದ ನಡೆದ ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಹಾಗೂ ಬಾಬೂಜಿ ಅವರ ಆರ್ಥಿಕ ಜ್ಞಾನವನ್ನು ಎಲ್ಲರೂ ಅರಿಯಬೇಕಿದೆ ಎಂದರು.</p>.<p>ಐ.ಡಿ. ಹಳ್ಳಿ ನರಸಿಂಹಮೂರ್ತಿ ಮಾತನಾಡಿ, ದೇಶದ ಮಹಾನ್ ದಾರ್ಶನಿಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಜ್ಞಾನಿಗಳಾಗಬಹುದೇ ಹೊರತು ಪುರಾಣಗಳಿಂದಲ್ಲ ಎಂದರು.</p>.<p>ಉಪನ್ಯಾಸಕ ರಂಗಧಾಮಯ್ಯ ಮಾತನಾಡಿ, ಮಹಿಳೆಯರಿಗೆ ಮತದಾನದ ಹಕ್ಕು, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಪ್ರತಿಯೊಬ್ಬರಿಗೂ ರಾಜಕೀಯ ಸ್ಥಾನಮಾನ ಪಡೆಯುವಂತಹ ಸಂವಿಧಾನ ನೀಡಿದವರು ಅಂಬೇಡ್ಕರ್ ಎಂದರು.</p>.<p>ತಹಶೀಲ್ದಾರ್ ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಅವರನ್ನು ಆರಾಧಿಸುವ ಬದಲು ಅವರ ಆಶಯಗಳನ್ನು ಅರಿಯಬೇಕು ಎಂದು ಹೇಳಿದರು.</p>.<p>ಡಿಡಿಪಿಐ ಮಾಧವರೆಡ್ಡಿ, ಬಿಇಒ ಹನುಮಂತರಾಯಪ್ಪ, ತಾಲ್ಲೂಕು ಮಾದಾರ ಮಹಾಸಭಾ ಅಧ್ಯಕ್ಷ ಗೋಪಾಲಯ್ಯ, ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಜೀವಿಕಾ ಮಂಜುನಾಥ್, ತೊಂಡೋಟಿ ರಾಮಾಂಜಿ, ಎಸ್.ಕೆ. ರಂಗನಾಥ್, ಮ.ಹ.ರಾಜು, ದಾಸಪ್ಪ, ಅರುಣ್, ನಿವೇದಿತಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-1637094961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ಅಂಬೇಡ್ಕರ್ ಜನರಲ್ಲಿನ ಮೌಢ್ಯ, ಅಜ್ಞಾನ ನೀಗಿಸಿದರೆ, ಬಾಬೂಜಿ ಜನರ ಹಸಿವು ನೀಗಿಸಿದರು ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಹೇಳಿದರು.</p>.<p>ಪಟ್ಟಣದ ಕನ್ನಡ ಭವನದಲ್ಲಿ ತಾಲ್ಲೂಕು ಆಡಳಿತ ಹಾಗೂ ದಲಿತ ಸಂಘಟನೆಗಳಿಂದ ನಡೆದ ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಹಾಗೂ ಬಾಬೂಜಿ ಅವರ ಆರ್ಥಿಕ ಜ್ಞಾನವನ್ನು ಎಲ್ಲರೂ ಅರಿಯಬೇಕಿದೆ ಎಂದರು.</p>.<p>ಐ.ಡಿ. ಹಳ್ಳಿ ನರಸಿಂಹಮೂರ್ತಿ ಮಾತನಾಡಿ, ದೇಶದ ಮಹಾನ್ ದಾರ್ಶನಿಕರ ಜೀವನ ಚರಿತ್ರೆಗಳನ್ನು ಓದುವ ಮೂಲಕ ಜ್ಞಾನಿಗಳಾಗಬಹುದೇ ಹೊರತು ಪುರಾಣಗಳಿಂದಲ್ಲ ಎಂದರು.</p>.<p>ಉಪನ್ಯಾಸಕ ರಂಗಧಾಮಯ್ಯ ಮಾತನಾಡಿ, ಮಹಿಳೆಯರಿಗೆ ಮತದಾನದ ಹಕ್ಕು, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಪ್ರತಿಯೊಬ್ಬರಿಗೂ ರಾಜಕೀಯ ಸ್ಥಾನಮಾನ ಪಡೆಯುವಂತಹ ಸಂವಿಧಾನ ನೀಡಿದವರು ಅಂಬೇಡ್ಕರ್ ಎಂದರು.</p>.<p>ತಹಶೀಲ್ದಾರ್ ಶ್ರೀನಿವಾಸ್ ಮಾತನಾಡಿ, ಅಂಬೇಡ್ಕರ್ ಅವರನ್ನು ಆರಾಧಿಸುವ ಬದಲು ಅವರ ಆಶಯಗಳನ್ನು ಅರಿಯಬೇಕು ಎಂದು ಹೇಳಿದರು.</p>.<p>ಡಿಡಿಪಿಐ ಮಾಧವರೆಡ್ಡಿ, ಬಿಇಒ ಹನುಮಂತರಾಯಪ್ಪ, ತಾಲ್ಲೂಕು ಮಾದಾರ ಮಹಾಸಭಾ ಅಧ್ಯಕ್ಷ ಗೋಪಾಲಯ್ಯ, ನೌಕರರ ಸಂಘದ ಜಿಲ್ಲಾಧ್ಯಕ್ಷ ರಂಗಪ್ಪ, ಜೀವಿಕಾ ಮಂಜುನಾಥ್, ತೊಂಡೋಟಿ ರಾಮಾಂಜಿ, ಎಸ್.ಕೆ. ರಂಗನಾಥ್, ಮ.ಹ.ರಾಜು, ದಾಸಪ್ಪ, ಅರುಣ್, ನಿವೇದಿತಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-17-1637094961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>