<p>ಮಧುಗಿರಿ: ತಿಗಳ ಸಮುದಾಯವು ಶ್ರಮ ಸಂಸ್ಕೃತಿಯ ರೂಪಕವಾಗಿದ್ದು, ಮಾದರಿ ಕೃಷಿ ಕೈಗೊಂಡು ಸ್ವಾವಲಂಬಿಗಳಾಗಿದ್ದಾರೆ. ಬೆಂಗಳೂರು ಕರಗ ವಿಶ್ವ ಪ್ರಸಿದ್ಧಿಯಾಗಲು ಇವರ ಕೊಡುಗೆ ಅಪಾರ ಎಂದು ಶಾಸಕ ಕೆ.ಎನ್ ರಾಜಣ್ಣ ಹೇಳಿದರು.</p>.<p>ತಾಲ್ಲೂಕು ಆಡಳಿತ ಹಾಗೂ ತಿಗಳರ ಸಂಘದಿಂದ ಪಟ್ಟಣದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಅಗ್ನಿಬನ್ನಿರಾಯ ಜಯಂತಿಯಲ್ಲಿ ಮಾತನಾಡಿದರು.</p>.<p>ತಿಗಳ ಸಮುದಾಯದೊಂದಿಗೆ ಬಾಲ್ಯದಿಂದ ಇರುವ ತಮ್ಮ ಬಾಂಧವ್ಯ ಸ್ಮರಿಸಿಕೊಂಡ ಅವರು ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ಈಗಾಗಲೇ ಜಾಗ ಒದಗಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದರು.</p>.<p>ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರಮಣಪ್ಪ ಮಾತನಾಡಿ, ಹಲವು ಜಿಲ್ಲೆಗಳಲ್ಲಿ ನೆಲೆಸಿರುವ ತಿಗಳ ಜನಾಂಗವು ತೋಟಗಾರಿಕೆ, ಪುಷ್ಪ ಕೃಷಿಯಲ್ಲಿ ಸೈ ಎನಿಸಿಕೊಂಡಿದ್ದಾರೆ. ಈ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು, ಸಮುದಾಯದ ಏಳ್ಗೆಗೆ ಸರ್ಕಾರದ ನೆರವು ಅಗತ್ಯವಾಗಿದೆ ಎಂದರು.</p>.<p>ಗೋವಿಂದಪ್ಪ, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ತಿಗಳರ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕ ಹನುಮಯ್ಯ, ಕಾರ್ಯದರ್ಶಿ ರಾಮಕೃಷ್ಣಪ್ಪ, ಎಂ.ಜಿ ಶ್ರೀನಿವಾಸಮೂರ್ತಿ, ಪಾಪಣ್ಣ ಹೇಮಂತ್, ಸುರೇಶ್, ನವೀನ್, ಭಾನುಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-17-882681832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಧುಗಿರಿ: ತಿಗಳ ಸಮುದಾಯವು ಶ್ರಮ ಸಂಸ್ಕೃತಿಯ ರೂಪಕವಾಗಿದ್ದು, ಮಾದರಿ ಕೃಷಿ ಕೈಗೊಂಡು ಸ್ವಾವಲಂಬಿಗಳಾಗಿದ್ದಾರೆ. ಬೆಂಗಳೂರು ಕರಗ ವಿಶ್ವ ಪ್ರಸಿದ್ಧಿಯಾಗಲು ಇವರ ಕೊಡುಗೆ ಅಪಾರ ಎಂದು ಶಾಸಕ ಕೆ.ಎನ್ ರಾಜಣ್ಣ ಹೇಳಿದರು.</p>.<p>ತಾಲ್ಲೂಕು ಆಡಳಿತ ಹಾಗೂ ತಿಗಳರ ಸಂಘದಿಂದ ಪಟ್ಟಣದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಅಗ್ನಿಬನ್ನಿರಾಯ ಜಯಂತಿಯಲ್ಲಿ ಮಾತನಾಡಿದರು.</p>.<p>ತಿಗಳ ಸಮುದಾಯದೊಂದಿಗೆ ಬಾಲ್ಯದಿಂದ ಇರುವ ತಮ್ಮ ಬಾಂಧವ್ಯ ಸ್ಮರಿಸಿಕೊಂಡ ಅವರು ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ಈಗಾಗಲೇ ಜಾಗ ಒದಗಿಸಿದ್ದು, ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದರು.</p>.<p>ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರಮಣಪ್ಪ ಮಾತನಾಡಿ, ಹಲವು ಜಿಲ್ಲೆಗಳಲ್ಲಿ ನೆಲೆಸಿರುವ ತಿಗಳ ಜನಾಂಗವು ತೋಟಗಾರಿಕೆ, ಪುಷ್ಪ ಕೃಷಿಯಲ್ಲಿ ಸೈ ಎನಿಸಿಕೊಂಡಿದ್ದಾರೆ. ಈ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದ್ದು, ಸಮುದಾಯದ ಏಳ್ಗೆಗೆ ಸರ್ಕಾರದ ನೆರವು ಅಗತ್ಯವಾಗಿದೆ ಎಂದರು.</p>.<p>ಗೋವಿಂದಪ್ಪ, ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್ ಶ್ರೀನಿವಾಸ್, ತಿಗಳರ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕ ಹನುಮಯ್ಯ, ಕಾರ್ಯದರ್ಶಿ ರಾಮಕೃಷ್ಣಪ್ಪ, ಎಂ.ಜಿ ಶ್ರೀನಿವಾಸಮೂರ್ತಿ, ಪಾಪಣ್ಣ ಹೇಮಂತ್, ಸುರೇಶ್, ನವೀನ್, ಭಾನುಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-17-882681832</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>