<p>ಮಹಾಲಿಂಗಪುರ: ‘ಆರೋಗ್ಯಕ್ಕಿಂತ ಮಿಗಿಲಾದ ಭಾಗ್ಯ ಮತ್ತೊಂದಿಲ್ಲ. ಆರೋಗ್ಯವಂತ ಮನುಷ್ಯರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ದೈಹಿಕ ಅನಾರೋಗ್ಯಕ್ಕೆ ನಮ್ಮ ಮಾನಸಿಕ ಆರೋಗ್ಯ ಅಥವಾ ಮನಸ್ಥಿತಿಯೇ ಕಾರಣ’ ಎಂದು ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಶಿಕ್ಷಕ ಅರುಣಕುಮಾರ ಗುರೂಜಿ ಹೇಳಿದರು.</p>.<p>ಪಟ್ಟಣದ ಟೊಣಪಿನಾಥ ಸಮುದಾಯ ಭವನದಲ್ಲಿ ಈಚೆಗೆ ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 10 ದಿನದ ಸಿದ್ಧ ಸಮಾಧಿ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನೈಸರ್ಗಿಕ ಪರಿಪೂರ್ಣ ಆಹಾರ ಸೇವನೆ, ನಿರಂತರ ಧ್ಯಾನ, ಪ್ರಾಣಾಯಾಮ ಮತ್ತು ಶುದ್ಧ ಮನಸ್ಸಿನ ಆರೋಗ್ಯಕರ ಚಿಂತನೆಗಳಿಂದ ನಮ್ಮನ್ನು ನಾವು ಸುಧಾರಿಸಿಕೊಂಡು ಸಮಾಜಕ್ಕೆ ಮಾದರಿಯಾಗೋಣ. ಸ್ವಸ್ಥ ಸಮಾಜದಿಂದ ಸುಭದ್ರ ಮತ್ತು ಸಮೃದ್ಧ ರಾಷ್ಟ್ರ ನಿರ್ಮಾಣ ಸಾಧ್ಯ’ ಎಂದರು.</p>.<p>40ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-61003060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ಆರೋಗ್ಯಕ್ಕಿಂತ ಮಿಗಿಲಾದ ಭಾಗ್ಯ ಮತ್ತೊಂದಿಲ್ಲ. ಆರೋಗ್ಯವಂತ ಮನುಷ್ಯರಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ದೈಹಿಕ ಅನಾರೋಗ್ಯಕ್ಕೆ ನಮ್ಮ ಮಾನಸಿಕ ಆರೋಗ್ಯ ಅಥವಾ ಮನಸ್ಥಿತಿಯೇ ಕಾರಣ’ ಎಂದು ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಶಿಕ್ಷಕ ಅರುಣಕುಮಾರ ಗುರೂಜಿ ಹೇಳಿದರು.</p>.<p>ಪಟ್ಟಣದ ಟೊಣಪಿನಾಥ ಸಮುದಾಯ ಭವನದಲ್ಲಿ ಈಚೆಗೆ ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 10 ದಿನದ ಸಿದ್ಧ ಸಮಾಧಿ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ನೈಸರ್ಗಿಕ ಪರಿಪೂರ್ಣ ಆಹಾರ ಸೇವನೆ, ನಿರಂತರ ಧ್ಯಾನ, ಪ್ರಾಣಾಯಾಮ ಮತ್ತು ಶುದ್ಧ ಮನಸ್ಸಿನ ಆರೋಗ್ಯಕರ ಚಿಂತನೆಗಳಿಂದ ನಮ್ಮನ್ನು ನಾವು ಸುಧಾರಿಸಿಕೊಂಡು ಸಮಾಜಕ್ಕೆ ಮಾದರಿಯಾಗೋಣ. ಸ್ವಸ್ಥ ಸಮಾಜದಿಂದ ಸುಭದ್ರ ಮತ್ತು ಸಮೃದ್ಧ ರಾಷ್ಟ್ರ ನಿರ್ಮಾಣ ಸಾಧ್ಯ’ ಎಂದರು.</p>.<p>40ಕ್ಕೂ ಅಧಿಕ ಶಿಬಿರಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-61003060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>