<p>ಮಹಾಲಿಂಗಪುರ: ‘ಇತ್ತೀಚಿನ ಶಿಕ್ಷಣದಿಂದ ಮಕ್ಕಳ ಜ್ಞಾನಕೋಶ ಹೆಚ್ಚುತ್ತಿದ್ದರೂ ಭಾವಕೋಶ ಬಡವಾಗುತ್ತಿದೆ. ಶಿಕ್ಷಕರು ವಿವೇಕವಂತರಾದರೆ ಮಕ್ಕಳು ಸಂಸ್ಕಾರವಂತರಾಗುತ್ತಾರೆ’ ಎಂದು ಕೆಎಲ್ಇ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸಪ್ನಾ ಅನಿಗೋಳ ಹೇಳಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೋತ್ಥಾನ ಪರಿಷತ್ನ ವಿಭಾಗೀಯ ಸಂಚಾಲಕ ಶ್ರೀನಿವಾಸ ಪಾಟೀಲ ಮಾತನಾಡಿ, ಪಂಚಮುಖಿ ಶಿಕ್ಷಣದ ಮೂಲಕ ಸರ್ವಾಂಗೀಣ ಕಲಿಕಾ ತಂತ್ರಗಳನ್ನು ಶಿಕ್ಷಕರಿಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಡಿ.ವಿ.ಹಿರೇಮಠ, ಉಪನ್ಯಾಸಕ ಶಿವಲಿಂಗ ಸಿದ್ನಾಳ, ಶಿಕ್ಷಕ ನಾರನಗೌಡ ಉತ್ತಂಗಿ ಮಾತನಾಡಿದರು.</p>.<p>ಶಿಕ್ಷಕ ಎಸ್.ಜಿ.ಜುಟನಟ್ಟಿ ಉದ್ಘಾಟಿಸಿದರು. ಶಾಲೆ ಅಧ್ಯಕ್ಷ ರಮೇಶ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯಶಿಕ್ಷಕ ರಾಮಸ್ವಾಮಿ ಕೋಲ್ಕರ, ಬಸವರಾಜ ನಿಂಗನೂರ, ಮಹೇಶ ಕಾಂಬಳೆ, ಶ್ರೀಮಂತ ಶಿರೋಳ, ಎಂ.ಡಿ.ನರಗಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1553937757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾಲಿಂಗಪುರ: ‘ಇತ್ತೀಚಿನ ಶಿಕ್ಷಣದಿಂದ ಮಕ್ಕಳ ಜ್ಞಾನಕೋಶ ಹೆಚ್ಚುತ್ತಿದ್ದರೂ ಭಾವಕೋಶ ಬಡವಾಗುತ್ತಿದೆ. ಶಿಕ್ಷಕರು ವಿವೇಕವಂತರಾದರೆ ಮಕ್ಕಳು ಸಂಸ್ಕಾರವಂತರಾಗುತ್ತಾರೆ’ ಎಂದು ಕೆಎಲ್ಇ ಪ್ರೌಢಶಾಲೆ ವಿಜ್ಞಾನ ಶಿಕ್ಷಕಿ ಸಪ್ನಾ ಅನಿಗೋಳ ಹೇಳಿದರು.</p>.<p>ಪಟ್ಟಣದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೋತ್ಥಾನ ಪರಿಷತ್ನ ವಿಭಾಗೀಯ ಸಂಚಾಲಕ ಶ್ರೀನಿವಾಸ ಪಾಟೀಲ ಮಾತನಾಡಿ, ಪಂಚಮುಖಿ ಶಿಕ್ಷಣದ ಮೂಲಕ ಸರ್ವಾಂಗೀಣ ಕಲಿಕಾ ತಂತ್ರಗಳನ್ನು ಶಿಕ್ಷಕರಿಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಡಿ.ವಿ.ಹಿರೇಮಠ, ಉಪನ್ಯಾಸಕ ಶಿವಲಿಂಗ ಸಿದ್ನಾಳ, ಶಿಕ್ಷಕ ನಾರನಗೌಡ ಉತ್ತಂಗಿ ಮಾತನಾಡಿದರು.</p>.<p>ಶಿಕ್ಷಕ ಎಸ್.ಜಿ.ಜುಟನಟ್ಟಿ ಉದ್ಘಾಟಿಸಿದರು. ಶಾಲೆ ಅಧ್ಯಕ್ಷ ರಮೇಶ ಶೆಕ್ಕಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯಶಿಕ್ಷಕ ರಾಮಸ್ವಾಮಿ ಕೋಲ್ಕರ, ಬಸವರಾಜ ನಿಂಗನೂರ, ಮಹೇಶ ಕಾಂಬಳೆ, ಶ್ರೀಮಂತ ಶಿರೋಳ, ಎಂ.ಡಿ.ನರಗಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-19-1553937757</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>