<p>ಮಳವಳ್ಳಿ: 80ರ ದಶಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ತಾಲ್ಲೂಕಿನಲ್ಲಿ ಸಂಘಟಿಸಿ ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಿದ ಕೀರ್ತಿ ಶೆಟ್ಟಹಳ್ಳಿಯ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ವಿವಿಧ ಸಂಘಟನೆಗಳ ಸದಸ್ಯರು ಆಯೋಜಿಸಿದ್ದ ಕೃಷ್ಣ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಶೆಟ್ಟಹಳ್ಳಿಯ ಕೃಷ್ಣ ನೇರ, ನಿಷ್ಠೆ, ಹೋರಾಟಗಾರರಾಗಿ ಮೈಸೂರು, ಮಂಡ್ಯ, ಬೆಂಗಳೂರು, ಅನ್ಯಾಯಕ್ಕೆ ಒಳಗಾದ ದಲಿತರ ಪರವಾಗಿ ಹೋರಾಟ ನಡೆಸುತ್ತಿದ್ದರುಎಂದರು.</p>.<p>ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, 80ರ ದಶಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸಂಘಟಿಸಿದವರು ಕೃಷ್ಣ ಎಂದರು. ದಲಿತ ಸಂಘರ್ಷ ಸಮಿತಿಯ ಹಾಡ್ಲಿ ಸುರೇಶ್ ಮಾತನಾಡಿ, ಕೃಷ್ಣ ಅವರ ಹೋರಾಟ ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಚಂದ್ರಶೇಖರ್, ಎಂ.ಎನ್.ಜಯರಾಜು, ಮಹದೇವಪ್ಪ, ವೆಂಕಟರಾಮು, ಮುದ್ದಯ್ಯ, ನಾಗಸಿದ್ದಯ್ಯ, ಮಹದೇವು, ಶಂಕರ್ ನಾಗ್, ನಾಗಯ್ಯ, ಅಂದಾನಿ, ರಾಜಶೇಖರ್, ಮಹೇಶ್ ಕುಮಾರ್, ಚುಂಚಣ್ಣ ಹಾಗೂ ಎಸ್.ಎಂ.ಕೃಷ್ಣ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-40-1440642863</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: 80ರ ದಶಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ತಾಲ್ಲೂಕಿನಲ್ಲಿ ಸಂಘಟಿಸಿ ಗ್ರಾಮೀಣ ಪ್ರದೇಶಕ್ಕೆ ವಿಸ್ತರಿಸಿದ ಕೀರ್ತಿ ಶೆಟ್ಟಹಳ್ಳಿಯ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಹೇಳಿದರು.</p>.<p>ಪಟ್ಟಣದಲ್ಲಿ ಭಾನುವಾರ ವಿವಿಧ ಸಂಘಟನೆಗಳ ಸದಸ್ಯರು ಆಯೋಜಿಸಿದ್ದ ಕೃಷ್ಣ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಶೆಟ್ಟಹಳ್ಳಿಯ ಕೃಷ್ಣ ನೇರ, ನಿಷ್ಠೆ, ಹೋರಾಟಗಾರರಾಗಿ ಮೈಸೂರು, ಮಂಡ್ಯ, ಬೆಂಗಳೂರು, ಅನ್ಯಾಯಕ್ಕೆ ಒಳಗಾದ ದಲಿತರ ಪರವಾಗಿ ಹೋರಾಟ ನಡೆಸುತ್ತಿದ್ದರುಎಂದರು.</p>.<p>ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, 80ರ ದಶಕದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸಂಘಟಿಸಿದವರು ಕೃಷ್ಣ ಎಂದರು. ದಲಿತ ಸಂಘರ್ಷ ಸಮಿತಿಯ ಹಾಡ್ಲಿ ಸುರೇಶ್ ಮಾತನಾಡಿ, ಕೃಷ್ಣ ಅವರ ಹೋರಾಟ ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಚಂದ್ರಶೇಖರ್, ಎಂ.ಎನ್.ಜಯರಾಜು, ಮಹದೇವಪ್ಪ, ವೆಂಕಟರಾಮು, ಮುದ್ದಯ್ಯ, ನಾಗಸಿದ್ದಯ್ಯ, ಮಹದೇವು, ಶಂಕರ್ ನಾಗ್, ನಾಗಯ್ಯ, ಅಂದಾನಿ, ರಾಜಶೇಖರ್, ಮಹೇಶ್ ಕುಮಾರ್, ಚುಂಚಣ್ಣ ಹಾಗೂ ಎಸ್.ಎಂ.ಕೃಷ್ಣ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-40-1440642863</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>