<p>ಮಂಡ್ಯ: ‘ಮಿದುಳು ಹಾಗೂ ಹೃದಯ ಸಂಬಂಧಿತ ತುರ್ತು ಪರಿಸ್ಥಿತಿಯ ಮೊದಲ ಒಂದು ಗಂಟೆಯೊಳಗೆ (ಗೋಲ್ಡನ್ ಅವರ್) ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ’ ಎಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಬಿ.ಜೆ. ಸಂದೀಪ್ ಪಟೇಲ್ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೈಸೂರಿನ ಮಣಿಪಾಲ್ ಆಸ್ಪತ್ರೆಯನ್ನು ಅರಸಿ ಮಂಡ್ಯದಿಂದ ಹೆಚ್ಚು ರೋಗಿಗಳು ಭೇಟಿ ನೀಡುತ್ತಾರೆ. ಆದ ಕಾರಣ ಮಿದುಳಿನ ತುರ್ತು ಪರಿಸ್ಥಿತಿ ಹಾಗೂ ಹಠಾತ್ ಹೃದಯ ಸಂಬಂಧಿತ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ ಎಂದರು.</p>.<p>ನ್ಯೂರೋಸರ್ಜನ್ ಡಾ.ಎ.ಆರ್. ಮಕ್ಸೂದ್ ಅಹ್ಮದ್ ಮಾತನಾಡಿ, ‘ಮಿದುಳು ಮತ್ತು ಹೃದಯ ಸಂಬಂಧಿತ ಅಟ್ಯಾಕ್ಗಳು ಒಂದೇ ಮಾದರಿಯವಾಗಿವೆ. ಎರಡಕ್ಕೂ ರಕ್ತನಾಳಗಳಲ್ಲಿ ರಕ್ತ ಸಂಚಾರಕ್ಕೆ ಅಡ್ಡಿ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ‘ಬ್ರೈನ್ ಅಟ್ಯಾಕ್’ ಲಕ್ಷಣಗಳನ್ನು ಕಡೆಗಣಿಸಬಾರದು. ಕೂಡಲೇ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.</p>.<p>ತಲೆಗೆ ಪೆಟ್ಟಾದಾಗ ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಅಗತ್ಯ. ಮೊದಲ ಎರಡು ಗಂಟೆಯಲ್ಲಿ ರೋಗಿಗೆ ಏನಾಗಿದೆ ಎಂಬುದನ್ನು ಪತ್ತೆ ಹಚ್ಚಲು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಇಲ್ಲವಾದಲ್ಲಿ ಎರಡನೇ ಹಂತದ ಬ್ರೈನ್ ಡ್ಯಾಮೆಜ್ ಆಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಕೆ ನೀಡಿದರು.</p>.<p>ಮಿದುಳಿಗೆ ಸಂಬಂಧಿಸದಂತೆ ‘ಬಿ ಫಾಸ್ಟ್’ ಸೂತ್ರ (ಬ್ಯಾಲೆನ್ಸ್ ತಪ್ಪುವುದು, ದೃಷ್ಟಿ ಮಂಜಾಗುವುದು, ಮುಖ ವಾಲುವಿಕೆ, ತೋಳಿನ ದೌರ್ಬಲ್ಯ, ಮಾತಿನ ತೊಂದರೆ ಮತ್ತು ತಕ್ಷಣದ ಪ್ರತಿಕ್ರಿಯೆಯ ಸಮಯ) ನೆನಪಿಟ್ಟುಕೊಳ್ಳುವಂತೆ ಸಲಹೆ ನೀಡಿದರು.</p>.<p>ಮಣಪಾಲ್ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಅಥವಾ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಣಿಪಾಲ್ ಫೌಂಡೇಷನ್ನಿಂದ ಸಂಸ್ಥೆ ಸಿಆರ್ಎಸ್ ನಿಧಿಯಿಂದ ₹1.5 ಲಕ್ಷದವರೆಗೆ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಂದೀಪ್ ಪಟೇಲ್ ಉತ್ತರಿಸಿದರು.</p>.<p>ಗೋಷ್ಠಿಯಲ್ಲಿ ವೈದ್ಯರಾದ ಡಾ.ಸಿ.ಬಿ. ಕೇಶವಮೂರ್ತಿ, ಡಾ.ಕುಪೇಂದ್ರ ಶಣೈ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-1133367101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಮಿದುಳು ಹಾಗೂ ಹೃದಯ ಸಂಬಂಧಿತ ತುರ್ತು ಪರಿಸ್ಥಿತಿಯ ಮೊದಲ ಒಂದು ಗಂಟೆಯೊಳಗೆ (ಗೋಲ್ಡನ್ ಅವರ್) ಚಿಕಿತ್ಸೆ ಪಡೆಯುವುದು ಅತ್ಯಗತ್ಯ. ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬೇಡಿ’ ಎಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಬಿ.ಜೆ. ಸಂದೀಪ್ ಪಟೇಲ್ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೈಸೂರಿನ ಮಣಿಪಾಲ್ ಆಸ್ಪತ್ರೆಯನ್ನು ಅರಸಿ ಮಂಡ್ಯದಿಂದ ಹೆಚ್ಚು ರೋಗಿಗಳು ಭೇಟಿ ನೀಡುತ್ತಾರೆ. ಆದ ಕಾರಣ ಮಿದುಳಿನ ತುರ್ತು ಪರಿಸ್ಥಿತಿ ಹಾಗೂ ಹಠಾತ್ ಹೃದಯ ಸಂಬಂಧಿತ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ ಎಂದರು.</p>.<p>ನ್ಯೂರೋಸರ್ಜನ್ ಡಾ.ಎ.ಆರ್. ಮಕ್ಸೂದ್ ಅಹ್ಮದ್ ಮಾತನಾಡಿ, ‘ಮಿದುಳು ಮತ್ತು ಹೃದಯ ಸಂಬಂಧಿತ ಅಟ್ಯಾಕ್ಗಳು ಒಂದೇ ಮಾದರಿಯವಾಗಿವೆ. ಎರಡಕ್ಕೂ ರಕ್ತನಾಳಗಳಲ್ಲಿ ರಕ್ತ ಸಂಚಾರಕ್ಕೆ ಅಡ್ಡಿ ಉಂಟಾದಾಗ ಸಮಸ್ಯೆ ಎದುರಾಗುತ್ತದೆ. ‘ಬ್ರೈನ್ ಅಟ್ಯಾಕ್’ ಲಕ್ಷಣಗಳನ್ನು ಕಡೆಗಣಿಸಬಾರದು. ಕೂಡಲೇ ತಜ್ಞ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.</p>.<p>ತಲೆಗೆ ಪೆಟ್ಟಾದಾಗ ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಅಗತ್ಯ. ಮೊದಲ ಎರಡು ಗಂಟೆಯಲ್ಲಿ ರೋಗಿಗೆ ಏನಾಗಿದೆ ಎಂಬುದನ್ನು ಪತ್ತೆ ಹಚ್ಚಲು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಇಲ್ಲವಾದಲ್ಲಿ ಎರಡನೇ ಹಂತದ ಬ್ರೈನ್ ಡ್ಯಾಮೆಜ್ ಆಗುವ ಸಾಧ್ಯತೆಗಳಿರುತ್ತವೆ ಎಂದು ಎಚ್ಚರಿಕೆ ನೀಡಿದರು.</p>.<p>ಮಿದುಳಿಗೆ ಸಂಬಂಧಿಸದಂತೆ ‘ಬಿ ಫಾಸ್ಟ್’ ಸೂತ್ರ (ಬ್ಯಾಲೆನ್ಸ್ ತಪ್ಪುವುದು, ದೃಷ್ಟಿ ಮಂಜಾಗುವುದು, ಮುಖ ವಾಲುವಿಕೆ, ತೋಳಿನ ದೌರ್ಬಲ್ಯ, ಮಾತಿನ ತೊಂದರೆ ಮತ್ತು ತಕ್ಷಣದ ಪ್ರತಿಕ್ರಿಯೆಯ ಸಮಯ) ನೆನಪಿಟ್ಟುಕೊಳ್ಳುವಂತೆ ಸಲಹೆ ನೀಡಿದರು.</p>.<p>ಮಣಪಾಲ್ ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಅಥವಾ ಬಡತನ ರೇಖೆಗಿಂತ ಕೆಳಗಿರುವವರಿಗೆ ಮಣಿಪಾಲ್ ಫೌಂಡೇಷನ್ನಿಂದ ಸಂಸ್ಥೆ ಸಿಆರ್ಎಸ್ ನಿಧಿಯಿಂದ ₹1.5 ಲಕ್ಷದವರೆಗೆ ಚಿಕಿತ್ಸಾ ವೆಚ್ಚಕ್ಕೆ ನೆರವು ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಸಂದೀಪ್ ಪಟೇಲ್ ಉತ್ತರಿಸಿದರು.</p>.<p>ಗೋಷ್ಠಿಯಲ್ಲಿ ವೈದ್ಯರಾದ ಡಾ.ಸಿ.ಬಿ. ಕೇಶವಮೂರ್ತಿ, ಡಾ.ಕುಪೇಂದ್ರ ಶಣೈ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-1133367101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>