<p>ಮಂಗಳೂರು: ಜಿಲ್ಲಾ ರೋಟರ್ಯಾಕ್ಟ್ ಮತ್ತು ರೋಟರ್ಯಾಕ್ಟ್ ಮಂಗಳೂರು ಸಿಟಿ ಆಶ್ರಯದಲ್ಲಿ ರೋಟರ್ಯಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ.ಶಾಂತಾರಾಮ್ ವಾಮಂಜೂರು ಸ್ಮಾರಕ 20 ವಾರ್ಷಿಕ ರಾಜ್ಯ ಮಟ್ಟದ ಅಂತರ್ಕ್ಲಬ್ ರೋಟರ್ಯಾಕ್ಟ್ ರಸಪ್ರಶ್ನೆ ಸ್ಪರ್ಧೆಯು ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು.</p>.<p>ರೋಟರ್ಯಾಕ್ಟ್ ಕ್ಲಬ್, ಮಣೇಲ್ ಶ್ರೀನಿವಾಸ ನಾಯಕ್ ಉದ್ಯಮ ಆಡಳಿತ ಕಾಲೇಜನ್ನು ಪ್ರತಿನಿಧಿಸಿದ ಕಾವ್ಯ ಮತ್ತು ಶ್ರೀನಿಧಿ ಅವರ ತಂಡವು ಪ್ರಥಮ ಸ್ಥಾನ ಗೆದ್ದುಕೊಂಡಿತು. ರೋಟರ್ಯಾಕ್ಟ್ ಕ್ಲಬ್ ಮೈಸೂರನ್ನು ಪ್ರತಿನಿಧಿಸಿದ ಪ್ರಜ್ವಲ್ ದ್ವಿತೀಯ ಸ್ಥಾನವನ್ನು ಪಡೆದರು.</p>.<p>ಜಿಲ್ಲಾ ಮಟ್ಟದ 7 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಆಯ್ಕೆಯಾಗಿದ್ದವು.</p>.<p>ಅತಿಥಿಯಾಗಿದ್ದ ರಂಗಭೂಮಿ ನಟ ಭೋಜರಾಜ ವಾಮಂಜೂರು ಮಾತನಾಡಿ, ಸಹೋದರ, ದಿ.ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ಪ್ರತಿ ವರ್ಷ ಸ್ಪರ್ಧೆ ಏರ್ಪಡಿಸುವ ರೋಟರ್ಯಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಮಾಣ ಪತ್ರ ಪ್ರದಾನ ಮಾಡಿದರು.</p>.<p>ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಮಾತನಾಡಿ, ರೋಟರ್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧ್ಯೇಯ, ನೀತಿ, ಉದ್ದೇಶ ಅರಿತುಕೊಂಡು ಜ್ಞಾನವನ್ನು ವೃದ್ಧಿಸಬೇಕು. ಸಂಸ್ಥೆಯ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.</p>.<p>ರೋಟರ್ಯಾಕ್ಟ್ ದಕ್ಷಿಣ ಏಷ್ಯಾ ಸಂಸ್ಥೆಯ ಅಧ್ಯಕ್ಷ ಸ್ಟೀವನ್ ಡೇರಿಲ್ ಡಿಸೋಜ ಭಾಗವಹಿಸಿದ್ದರು.</p>.<p>ರೋಟರ್ಯಾಕ್ಟ್ ಮಂಗಳೂರು ಸಿಟಿ ಅಧ್ಯಕ್ಷ ಅಕ್ಷಯ್ ರೈ ಸ್ವಾಗತಿಸಿದರು. ರೋಟರ್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನಿರೂಪಿಸಿ, ವಲಯ ಪ್ರತಿನಿಧಿ ಚಮನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-29-513261569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಜಿಲ್ಲಾ ರೋಟರ್ಯಾಕ್ಟ್ ಮತ್ತು ರೋಟರ್ಯಾಕ್ಟ್ ಮಂಗಳೂರು ಸಿಟಿ ಆಶ್ರಯದಲ್ಲಿ ರೋಟರ್ಯಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ.ಶಾಂತಾರಾಮ್ ವಾಮಂಜೂರು ಸ್ಮಾರಕ 20 ವಾರ್ಷಿಕ ರಾಜ್ಯ ಮಟ್ಟದ ಅಂತರ್ಕ್ಲಬ್ ರೋಟರ್ಯಾಕ್ಟ್ ರಸಪ್ರಶ್ನೆ ಸ್ಪರ್ಧೆಯು ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು.</p>.<p>ರೋಟರ್ಯಾಕ್ಟ್ ಕ್ಲಬ್, ಮಣೇಲ್ ಶ್ರೀನಿವಾಸ ನಾಯಕ್ ಉದ್ಯಮ ಆಡಳಿತ ಕಾಲೇಜನ್ನು ಪ್ರತಿನಿಧಿಸಿದ ಕಾವ್ಯ ಮತ್ತು ಶ್ರೀನಿಧಿ ಅವರ ತಂಡವು ಪ್ರಥಮ ಸ್ಥಾನ ಗೆದ್ದುಕೊಂಡಿತು. ರೋಟರ್ಯಾಕ್ಟ್ ಕ್ಲಬ್ ಮೈಸೂರನ್ನು ಪ್ರತಿನಿಧಿಸಿದ ಪ್ರಜ್ವಲ್ ದ್ವಿತೀಯ ಸ್ಥಾನವನ್ನು ಪಡೆದರು.</p>.<p>ಜಿಲ್ಲಾ ಮಟ್ಟದ 7 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಆಯ್ಕೆಯಾಗಿದ್ದವು.</p>.<p>ಅತಿಥಿಯಾಗಿದ್ದ ರಂಗಭೂಮಿ ನಟ ಭೋಜರಾಜ ವಾಮಂಜೂರು ಮಾತನಾಡಿ, ಸಹೋದರ, ದಿ.ಶಾಂತಾರಾಮ್ ವಾಮಂಜೂರು ಸ್ಮರಣಾರ್ಥ ಪ್ರತಿ ವರ್ಷ ಸ್ಪರ್ಧೆ ಏರ್ಪಡಿಸುವ ರೋಟರ್ಯಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಮಾಣ ಪತ್ರ ಪ್ರದಾನ ಮಾಡಿದರು.</p>.<p>ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಮಾತನಾಡಿ, ರೋಟರ್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧ್ಯೇಯ, ನೀತಿ, ಉದ್ದೇಶ ಅರಿತುಕೊಂಡು ಜ್ಞಾನವನ್ನು ವೃದ್ಧಿಸಬೇಕು. ಸಂಸ್ಥೆಯ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.</p>.<p>ರೋಟರ್ಯಾಕ್ಟ್ ದಕ್ಷಿಣ ಏಷ್ಯಾ ಸಂಸ್ಥೆಯ ಅಧ್ಯಕ್ಷ ಸ್ಟೀವನ್ ಡೇರಿಲ್ ಡಿಸೋಜ ಭಾಗವಹಿಸಿದ್ದರು.</p>.<p>ರೋಟರ್ಯಾಕ್ಟ್ ಮಂಗಳೂರು ಸಿಟಿ ಅಧ್ಯಕ್ಷ ಅಕ್ಷಯ್ ರೈ ಸ್ವಾಗತಿಸಿದರು. ರೋಟರ್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನಿರೂಪಿಸಿ, ವಲಯ ಪ್ರತಿನಿಧಿ ಚಮನ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-29-513261569</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>