<p>ಮಂಗಳೂರು: ಮಕ್ಕಳ ಬೇಸಿಗೆ ಶಿಬಿರವು ಆನಂದಮಯ ಹಾಗೂ ಉಲ್ಲಾಸದಾಯಕವಾಗಿರಬೇಕು. ಮಕ್ಕಳ ಪಾಲಿಗೆ ಅದು ಮತ್ತೊಂದು ತರಗತಿ ಕೊಠಡಿಯಾಗಬಾರದು ಎಂದು ಮೈಮ್ ರಾಮದಾಸ್ ಹೇಳಿದರು.</p>.<p>ಇಲ್ಲಿನ ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ಒಂದು ವಾರದ ‘ತೆಲಿಕೆ – ನಲಿಕೆ’ ಮಕ್ಕಳ ಬೇಸಿಗೆ ಶಿಬಿರವನ್ನು ಸೋಮವಾರ ಮಕ್ಕಳ ಜೊತೆಗೆ ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಕಾಡೆಮಿಯು ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ಮಕ್ಕಳ ಬೇಸಿಗೆ ಶಿಬಿರದ ಪರಿಕಲ್ಪನೆಯು ಇತರ ಶಿಬಿರಗಳಿಗಿಂತ ಭಿನ್ನವಾಗಿದೆ. ತುಳು ಹಾಗೂ ತುಳುನಾಡಿನ ಅಸ್ಮಿತೆಯ ಈ ಶಿಬಿರವು ಮಕ್ಕಳಿಗೆ ವಿಶಿಷ್ಟ ಅನುಭವ ನೀಡಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ‘ತುಳು ಮಣ್ಣಿನ ಕಂಪನ್ನು ಮಕ್ಕಳಿಗೆ ಪರಿಚಯಿಸುವುದು ಈ ಶಿಬಿರದ ಉದ್ದೇಶ. ತುಳುನಾಡಿನ ಸೊಗಡಿನ ಕಲೆ, ಕಥೆ, ಆಟ ಕೂಟಗಳನ್ನು ಈ ಶಿಬಿರದಲ್ಲಿ ಚಿಣ್ಣರಿಗೆ ಹೇಳಿಕೊಡಲಿದ್ದೇವೆ. ವಿವಿಧ ಕ್ಷೇತ್ರಗಳ ಯುವ ಕಲಾವಿದರು, ತರಬೇತುದಾರರು, ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳಾಗಿ ಭಾವಗಹಿಸಲಿದ್ದಾರೆ’ ಎಂದು ಹೇಳಿದರು.</p>.<p>ಶಿಬಿರದಲ್ಲಿ 60 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶಿಬಿರದ ಸಹ ನಿರ್ದೇಶಕ, ರಂಗ ಕಲಾವಿದ ವಿನೋದ್ ಶೆಟ್ಟಿ, ಕೊರಲ್ ಕಲಾ ತಂಡದ ಕಲಾವಿದ ರಮೇಶ್ ಮಂಚಕಲ್ ಭಾಗವಹಿಸಿದರು.</p>.<p>ಅಕಾಡೆಮಿಯ ಸದಸ್ಯೆ ಸಂಚಾಲಕಿ ಅಕ್ಷಯ ಆರ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-871848296</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಮಕ್ಕಳ ಬೇಸಿಗೆ ಶಿಬಿರವು ಆನಂದಮಯ ಹಾಗೂ ಉಲ್ಲಾಸದಾಯಕವಾಗಿರಬೇಕು. ಮಕ್ಕಳ ಪಾಲಿಗೆ ಅದು ಮತ್ತೊಂದು ತರಗತಿ ಕೊಠಡಿಯಾಗಬಾರದು ಎಂದು ಮೈಮ್ ರಾಮದಾಸ್ ಹೇಳಿದರು.</p>.<p>ಇಲ್ಲಿನ ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ಒಂದು ವಾರದ ‘ತೆಲಿಕೆ – ನಲಿಕೆ’ ಮಕ್ಕಳ ಬೇಸಿಗೆ ಶಿಬಿರವನ್ನು ಸೋಮವಾರ ಮಕ್ಕಳ ಜೊತೆಗೆ ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಕಾಡೆಮಿಯು ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ಮಕ್ಕಳ ಬೇಸಿಗೆ ಶಿಬಿರದ ಪರಿಕಲ್ಪನೆಯು ಇತರ ಶಿಬಿರಗಳಿಗಿಂತ ಭಿನ್ನವಾಗಿದೆ. ತುಳು ಹಾಗೂ ತುಳುನಾಡಿನ ಅಸ್ಮಿತೆಯ ಈ ಶಿಬಿರವು ಮಕ್ಕಳಿಗೆ ವಿಶಿಷ್ಟ ಅನುಭವ ನೀಡಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ‘ತುಳು ಮಣ್ಣಿನ ಕಂಪನ್ನು ಮಕ್ಕಳಿಗೆ ಪರಿಚಯಿಸುವುದು ಈ ಶಿಬಿರದ ಉದ್ದೇಶ. ತುಳುನಾಡಿನ ಸೊಗಡಿನ ಕಲೆ, ಕಥೆ, ಆಟ ಕೂಟಗಳನ್ನು ಈ ಶಿಬಿರದಲ್ಲಿ ಚಿಣ್ಣರಿಗೆ ಹೇಳಿಕೊಡಲಿದ್ದೇವೆ. ವಿವಿಧ ಕ್ಷೇತ್ರಗಳ ಯುವ ಕಲಾವಿದರು, ತರಬೇತುದಾರರು, ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳಾಗಿ ಭಾವಗಹಿಸಲಿದ್ದಾರೆ’ ಎಂದು ಹೇಳಿದರು.</p>.<p>ಶಿಬಿರದಲ್ಲಿ 60 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶಿಬಿರದ ಸಹ ನಿರ್ದೇಶಕ, ರಂಗ ಕಲಾವಿದ ವಿನೋದ್ ಶೆಟ್ಟಿ, ಕೊರಲ್ ಕಲಾ ತಂಡದ ಕಲಾವಿದ ರಮೇಶ್ ಮಂಚಕಲ್ ಭಾಗವಹಿಸಿದರು.</p>.<p>ಅಕಾಡೆಮಿಯ ಸದಸ್ಯೆ ಸಂಚಾಲಕಿ ಅಕ್ಷಯ ಆರ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-29-871848296</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>