<p>ಉಳ್ಳಾಲ: ವಿಶ್ವವಿದ್ಯಾನಿಲಯಗಳು ಕೇವಲ ಪದವಿ ನೀಡುವ ಕೇಂದ್ರಗ ಳಾಗದೆ, ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸುವ ವೇದಿಕೆಗಳಾಗಬೇಕು. ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಬಿ.ಆರ್.ಅಂಬೇಡ್ಕರ್ ಸಂಶೋಧನಾ, ತರಬೇತಿ ಮತ್ತು ವಿಸ್ತರಣ ಕೇಂದ್ರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತದ ಸಂವಿಧಾನವು ಕೇವಲ ಅಸ್ಪೃಶ್ಯರಿಗಲ್ಲ, ಅದು ಎಲ್ಲರಿಗಾಗಿ ರಚಿಸಲಾದ ಮಹಾನ್ ದಾಖಲೆ. ಆದರೆ, ನಾವು ಅದರ ಮೌಲ್ಯವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದೇವೆ. ಅವರ ಚಿಂತನೆಗಳು ಇನ್ನಷ್ಟು ಪ್ರಭಾವಶೀಲವಾಗಿವೆ. ಅಂಬೇಡ್ಕರ್ ಅವರ ಚಿಂತನೆಗಳು ಇಂದು ವಿದೇಶಗಳಲ್ಲಿಯೂ ಪ್ರತಿಧ್ವನಿಸುತ್ತಿವೆ ಎಂದರು.</p>.<p>ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ, ಸಮಾಜದಲ್ಲಿ ಆತ್ಮಪರಿಶೀಲನೆ ಮತ್ತು ಜಾಗೃತಿ ಮುಖ್ಯವಾಗಿದ್ದು, ಅಂಬೇಡ್ಕರ್ ಅವರನ್ನು ಸೀಮಿತ ದೃಷ್ಟಿಕೋನದಿಂದ ಓದದೆ, ವಿಶಾಲ ಪರಿಧಿಯಲ್ಲಿ ಅರ್ಥೈಸಿಕೊಳ್ಳಬೇಕು. ಅವರ ಚಿಂತನೆಗಳು ಸಮಗ್ರ ಸಮಾಜದ ಉನ್ನತಿಗಾಗಿವೆ ಎಂದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸರ್ಕಾರದಿಂದ ಸುಮಾರು ₹ 3 ಕೋಟಿ ವೆಚ್ಚದಲ್ಲಿ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಯೋಜನೆ ಜಾರಿಯಾಗುತ್ತಿದ್ದು, ಸಂಶೋಧನಾ ಚಟು ವಟಿಕೆ, ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳೊಂದಿಗೆ ಭವಿಷ್ಯ ರೂಪಿಸುವ ಕಾರ್ಯಕ್ರಮಗಳಿಗೆ ಉತ್ತೇಜಿಸುವ ಕೇಂದ್ರವಾಗಿ ಹೊರಹೊಮ್ಮಲಿ ಎಂದರು.</p>.<p>ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಪರೀಕ್ಷಾಂಗ ಕುಲಸಚಿವ ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಎಸ್. ಇದ್ದರು.</p>.<p>ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ರಾಜು ಕೃಷ್ಣ ಚಲನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಮುನಾ ಎಸ್.ಎಂ. ಅತಿಥಿ ಪರಿಚಯ ನೀಡಿದರು. ಪ್ರಶಾಂತ್ ನಾಯ್ಕ್ ನಿರೂಪಿಸಿದರು. ಎಂ.ಎಸ್.ಮುಷ್ತಾಕ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-29-1253853977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಳ್ಳಾಲ: ವಿಶ್ವವಿದ್ಯಾನಿಲಯಗಳು ಕೇವಲ ಪದವಿ ನೀಡುವ ಕೇಂದ್ರಗ ಳಾಗದೆ, ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸುವ ವೇದಿಕೆಗಳಾಗಬೇಕು. ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಹೇಳಿದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಬಿ.ಆರ್.ಅಂಬೇಡ್ಕರ್ ಸಂಶೋಧನಾ, ತರಬೇತಿ ಮತ್ತು ವಿಸ್ತರಣ ಕೇಂದ್ರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಭಾರತದ ಸಂವಿಧಾನವು ಕೇವಲ ಅಸ್ಪೃಶ್ಯರಿಗಲ್ಲ, ಅದು ಎಲ್ಲರಿಗಾಗಿ ರಚಿಸಲಾದ ಮಹಾನ್ ದಾಖಲೆ. ಆದರೆ, ನಾವು ಅದರ ಮೌಲ್ಯವನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದೇವೆ. ಅವರ ಚಿಂತನೆಗಳು ಇನ್ನಷ್ಟು ಪ್ರಭಾವಶೀಲವಾಗಿವೆ. ಅಂಬೇಡ್ಕರ್ ಅವರ ಚಿಂತನೆಗಳು ಇಂದು ವಿದೇಶಗಳಲ್ಲಿಯೂ ಪ್ರತಿಧ್ವನಿಸುತ್ತಿವೆ ಎಂದರು.</p>.<p>ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಮಾತನಾಡಿ, ಸಮಾಜದಲ್ಲಿ ಆತ್ಮಪರಿಶೀಲನೆ ಮತ್ತು ಜಾಗೃತಿ ಮುಖ್ಯವಾಗಿದ್ದು, ಅಂಬೇಡ್ಕರ್ ಅವರನ್ನು ಸೀಮಿತ ದೃಷ್ಟಿಕೋನದಿಂದ ಓದದೆ, ವಿಶಾಲ ಪರಿಧಿಯಲ್ಲಿ ಅರ್ಥೈಸಿಕೊಳ್ಳಬೇಕು. ಅವರ ಚಿಂತನೆಗಳು ಸಮಗ್ರ ಸಮಾಜದ ಉನ್ನತಿಗಾಗಿವೆ ಎಂದರು.</p>.<p>ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸರ್ಕಾರದಿಂದ ಸುಮಾರು ₹ 3 ಕೋಟಿ ವೆಚ್ಚದಲ್ಲಿ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಯೋಜನೆ ಜಾರಿಯಾಗುತ್ತಿದ್ದು, ಸಂಶೋಧನಾ ಚಟು ವಟಿಕೆ, ವಿದ್ಯಾರ್ಥಿಗಳು ಅಂಬೇಡ್ಕರ್ ಆದರ್ಶಗಳೊಂದಿಗೆ ಭವಿಷ್ಯ ರೂಪಿಸುವ ಕಾರ್ಯಕ್ರಮಗಳಿಗೆ ಉತ್ತೇಜಿಸುವ ಕೇಂದ್ರವಾಗಿ ಹೊರಹೊಮ್ಮಲಿ ಎಂದರು.</p>.<p>ಕುಲಸಚಿವ ಪ್ರೊ.ಗಣೇಶ್ ಸಂಜೀವ್, ಪರೀಕ್ಷಾಂಗ ಕುಲಸಚಿವ ಎಚ್.ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಎಸ್. ಇದ್ದರು.</p>.<p>ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ರಾಜು ಕೃಷ್ಣ ಚಲನ್ನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಯಮುನಾ ಎಸ್.ಎಂ. ಅತಿಥಿ ಪರಿಚಯ ನೀಡಿದರು. ಪ್ರಶಾಂತ್ ನಾಯ್ಕ್ ನಿರೂಪಿಸಿದರು. ಎಂ.ಎಸ್.ಮುಷ್ತಾಕ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-29-1253853977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>