<p>ಮಾನ್ವಿ: ‘ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಅವರಿಗೆ ನೈತಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ’ ಎಂದು ಯೋಗ ಶಿಕ್ಷಣ ತರಬೇತುದಾರ ಅನ್ನದಾನಯ್ಯ ಸ್ವಾಮಿ ಚೀಕಲಪರ್ವಿ ಹೇಳಿದರು.</p>.<p>ಮಂಗಳವಾರ ಪಟ್ಟಣದ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಒಂದು ತಿಂಗಳು ನಡೆದ ಶಿಬಿರದಲ್ಲಿ ನಿತ್ಯ ಬೆಳಿಗ್ಗೆ ಯೋಗಾಸನಗಳ ಅಭ್ಯಾಸ, ಭಗವದ್ಗೀತೆ ಪಠಣ, ಭಜನೆ, ಆಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳಲ್ಲಿ ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮತ್ತು ಆರೋಗ್ಯ ಪೂರ್ಣ ಜೀವನದ ಕುರಿತು ಅರಿವು ಮೂಡಿಸಲಾಗಿದೆ' ಎಂದು ತಿಳಿಸಿದರು.</p>.<p>ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ ಕುಮಾರ್ ಚಿಂಚೋಳಿ, 'ಆರೋಗ್ಯದ ರಕ್ಷಣೆಗೆ ಮತ್ತು ಬುದ್ಧಿ ಶಕ್ತಿಯ ಬೆಳವಣಿಗೆಗೆ ಯೋಗಾಭ್ಯಾಸ ಅಗತ್ಯ' ಎಂದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವ ಬಿವಿಆರ್ ಶಾಲೆಯ ವಿದ್ಯಾರ್ಥಿ ಸುಖದೇವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂಜೀವ್ ಸುಧಾಕರ್, ಶಿಕ್ಷಕರಾದ ಎಚ್.ಟಿ. ಪ್ರಕಾಶ್ ಬಾಬು. ಅರುಣಕುಮಾರ. ಮಲ್ಲೇಶ ನಾಯಕ, ಸಿ.ಡಿ.ವಿಜಯಕುಮಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-32-1393198821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ‘ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಅವರಿಗೆ ನೈತಿಕ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ’ ಎಂದು ಯೋಗ ಶಿಕ್ಷಣ ತರಬೇತುದಾರ ಅನ್ನದಾನಯ್ಯ ಸ್ವಾಮಿ ಚೀಕಲಪರ್ವಿ ಹೇಳಿದರು.</p>.<p>ಮಂಗಳವಾರ ಪಟ್ಟಣದ ನೀಲಕಂಠೇಶ್ವರ ಕಲ್ಯಾಣ ಮಂಟಪದಲ್ಲಿ ಯೋಗ ಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಒಂದು ತಿಂಗಳು ನಡೆದ ಶಿಬಿರದಲ್ಲಿ ನಿತ್ಯ ಬೆಳಿಗ್ಗೆ ಯೋಗಾಸನಗಳ ಅಭ್ಯಾಸ, ಭಗವದ್ಗೀತೆ ಪಠಣ, ಭಜನೆ, ಆಟಗಳನ್ನು ಆಯೋಜಿಸಲಾಗಿದ್ದು, ಮಕ್ಕಳಲ್ಲಿ ನೈತಿಕ ಮೌಲ್ಯಗಳ ಬಗ್ಗೆ ಜಾಗೃತಿ ಮತ್ತು ಆರೋಗ್ಯ ಪೂರ್ಣ ಜೀವನದ ಕುರಿತು ಅರಿವು ಮೂಡಿಸಲಾಗಿದೆ' ಎಂದು ತಿಳಿಸಿದರು.</p>.<p>ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕ ಅಶೋಕ ಕುಮಾರ್ ಚಿಂಚೋಳಿ, 'ಆರೋಗ್ಯದ ರಕ್ಷಣೆಗೆ ಮತ್ತು ಬುದ್ಧಿ ಶಕ್ತಿಯ ಬೆಳವಣಿಗೆಗೆ ಯೋಗಾಭ್ಯಾಸ ಅಗತ್ಯ' ಎಂದರು.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವ ಬಿವಿಆರ್ ಶಾಲೆಯ ವಿದ್ಯಾರ್ಥಿ ಸುಖದೇವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂಜೀವ್ ಸುಧಾಕರ್, ಶಿಕ್ಷಕರಾದ ಎಚ್.ಟಿ. ಪ್ರಕಾಶ್ ಬಾಬು. ಅರುಣಕುಮಾರ. ಮಲ್ಲೇಶ ನಾಯಕ, ಸಿ.ಡಿ.ವಿಜಯಕುಮಾರ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-32-1393198821</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>