<p>ಮೊಳಕಾಲ್ಮುರು: ‘ಶಾಲೆಗಳು ಸಮಗ್ರವಾಗಿ ಅಭಿವೃದ್ಧಿ ಹೊಂದಲು ಸಾರ್ವಜನಿಕರು ಮತ್ತು ಪೋಷಕರ ಸಹಕಾರ ಅಗತ್ಯ’ ಎಂದು ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್ ಹೇಳಿದರು.</p>.<p>ಇಲ್ಲಿನ ಆದರ್ಶ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.</p>.<p>‘ಹಳೆಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಿದರೆ ಶಾಲೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬಹುದು. ಈ ನಿಟ್ಟಿನಲ್ಲಿ ಸರ್ಕಾರವೂ ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಹೆಸರಿನಲ್ಲಿ ಯೋಜನೆ ಆರಂಭಿಸಿದೆ. ನಮ್ಮ ಶಾಲೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿರುವ ಎಸ್.ಆರ್. ಚೈತನ್ಯ, ಟಿ.ಜಿ. ನಿತಿನ್, ಬಿ.ತೇಜಶ್ರೀ, ಕೆ.ವಿ. ಸಂಜನಾ, ಎಸ್.ಕವನಾ, ಶ್ರೀಶಾಂತ್, ಸೂರ್ಯ ಅವರನ್ನು ಅಭಿನಂದಿಸಿ, ಗುಂಡ್ಲೂರು ಟೆಲಿಪೋನ್ ಸಿದ್ದಯ್ಯ ಸ್ಮರಣಾರ್ಥ ನಗದು ಬಹುಮಾನ ವಿತರಿಸಲಾಯಿತು.</p>.<p>ವಿಜಯಮ್ಮ ವೆಂಕಟರಮಣಪ್ಪ ಅವರು 200 ತಟ್ಟೆ, ಎಸ್ಡಿಎಂಸಿ ಅಧ್ಯಕ್ಷ ಎಸ್. ನಾಗರಾಜ್ ಅವರು 200 ಲೋಟ, ಉಪಾಧ್ಯಕ್ಷೆ ಎಸ್. ನಾಗವೇಣಿ 50 ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.</p>.<p>ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಯೋಜನೆ ವೈದ್ಯ ಗೋವಿಂದರಾಜು ಅವರು ಎಚ್ಪಿವಿ ವ್ಯಾಕ್ಸಿನ್ ಹಾಕಿಸುವುದರಿಂದ ಆಗುವ ಪ್ರಯೋಜನದ ಕುರಿತು ಜಾಗೃತಿ ಮೂಡಿಸಿದರು.</p>.<p>ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸವಿತಾ, ಶಿಕ್ಷಕರಾದ ಎಂ.ರೂಪಾ, ಮುಜಾಮಿಲ್, ಡಿ.ಎನ್. ನಂದೀಶ್, ಬಿ.ಎಸ್. ವಿಜಯಲಕ್ಷ್ಮಿ, ಸಿ. ಮೋಹನ್ ಕುಮಾರ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-780882452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ‘ಶಾಲೆಗಳು ಸಮಗ್ರವಾಗಿ ಅಭಿವೃದ್ಧಿ ಹೊಂದಲು ಸಾರ್ವಜನಿಕರು ಮತ್ತು ಪೋಷಕರ ಸಹಕಾರ ಅಗತ್ಯ’ ಎಂದು ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್ ಹೇಳಿದರು.</p>.<p>ಇಲ್ಲಿನ ಆದರ್ಶ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು.</p>.<p>‘ಹಳೆಯ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಿದರೆ ಶಾಲೆಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬಹುದು. ಈ ನಿಟ್ಟಿನಲ್ಲಿ ಸರ್ಕಾರವೂ ‘ನಮ್ಮ ಶಾಲೆ ನಮ್ಮ ಹೆಮ್ಮೆ’ ಹೆಸರಿನಲ್ಲಿ ಯೋಜನೆ ಆರಂಭಿಸಿದೆ. ನಮ್ಮ ಶಾಲೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಇದೇ ವೇಳೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕ ಗಳಿಸಿರುವ ಎಸ್.ಆರ್. ಚೈತನ್ಯ, ಟಿ.ಜಿ. ನಿತಿನ್, ಬಿ.ತೇಜಶ್ರೀ, ಕೆ.ವಿ. ಸಂಜನಾ, ಎಸ್.ಕವನಾ, ಶ್ರೀಶಾಂತ್, ಸೂರ್ಯ ಅವರನ್ನು ಅಭಿನಂದಿಸಿ, ಗುಂಡ್ಲೂರು ಟೆಲಿಪೋನ್ ಸಿದ್ದಯ್ಯ ಸ್ಮರಣಾರ್ಥ ನಗದು ಬಹುಮಾನ ವಿತರಿಸಲಾಯಿತು.</p>.<p>ವಿಜಯಮ್ಮ ವೆಂಕಟರಮಣಪ್ಪ ಅವರು 200 ತಟ್ಟೆ, ಎಸ್ಡಿಎಂಸಿ ಅಧ್ಯಕ್ಷ ಎಸ್. ನಾಗರಾಜ್ ಅವರು 200 ಲೋಟ, ಉಪಾಧ್ಯಕ್ಷೆ ಎಸ್. ನಾಗವೇಣಿ 50 ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.</p>.<p>ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಯೋಜನೆ ವೈದ್ಯ ಗೋವಿಂದರಾಜು ಅವರು ಎಚ್ಪಿವಿ ವ್ಯಾಕ್ಸಿನ್ ಹಾಕಿಸುವುದರಿಂದ ಆಗುವ ಪ್ರಯೋಜನದ ಕುರಿತು ಜಾಗೃತಿ ಮೂಡಿಸಿದರು.</p>.<p>ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಸವಿತಾ, ಶಿಕ್ಷಕರಾದ ಎಂ.ರೂಪಾ, ಮುಜಾಮಿಲ್, ಡಿ.ಎನ್. ನಂದೀಶ್, ಬಿ.ಎಸ್. ವಿಜಯಲಕ್ಷ್ಮಿ, ಸಿ. ಮೋಹನ್ ಕುಮಾರ್ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-780882452</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>