<p>ಮೊಳಕಾಲ್ಮುರು: ‘ಉತ್ತಮ ಶಿಕ್ಷಣ ಪಡೆಯುವ ಮೂಲಕ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ, ಆದ್ದರಿಂದ ಪೋಷಕರು ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಒತ್ತು ನೀಡಬೇಕು’ ಎಂದು ಪಟ್ಟಸಾಲಿ ನೇಕಾರರ ಜನಾಂಗದ ರಾಜ್ಯ ಘಟಕದ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಭಾನುವಾರ ಪಟ್ಟಸಾಲಿ ನೇಕಾರ ಜನಾಂಗದ ಮಕ್ಕಳಿಗೆ ಪಟ್ಟಸಾಲೆ ನೇಕಾರ ನೌಕರರ ಸಂಘವು ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೇಕಾರ ಜನಾಂಗವು ಜಾಗತೀಕರಣದ ಪ್ರಭಾವಕ್ಕೆ ಒಳಗಾಗಿ ನಿರುದ್ಯೋಗ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿದೆ. ಇದನ್ನು ಮೆಟ್ಟಿ ನಿಲ್ಲಲು ಜನಾಂಗವು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅನಾದಿ ಕಾಲದ ಕುಲಕಸುಬು ಎಂದು ನೆಚ್ಚಿಕೊಂಡು ಕೂತಲ್ಲಿ ಮಕ್ಕಳ ಭವಿಷ್ಯ ಕಷ್ಟಕರವಾಗಲಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿಭೆ ಎನ್ನುವುದು ಎಲ್ಲಾ ಮಕ್ಕಳಲ್ಲಿಯೂ ಇರುತ್ತದೆ. ಇದನ್ನು ಹುಡುಕಿ ಹೊರತರುವ ಜೊತೆಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಲು ಸಮುದಾಯ ಸಹಕಾರ ನೀಡಬೇಕು’ ಎಂದು ಸಮಾಜದ ಸ್ಥಳೀಯ ಘಟಕದ ಅಧ್ಯಕ್ಷ ಎನ್. ಅಪ್ಪಳ್ಳಿ ಮನವಿ ಮಾಡಿದರು.</p>.<p>ಈ ವೇಳೆ ಎಸ್ಎಸ್ಎಲ್ಸಿ, ಪಿಯಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಕಿಜ್ ಕಾರ್ಯಕ್ರಮ, ದೇವರ ದಾಸಿಮಯ್ಯ ವಚನಗಳ ಕಂಠಪಾಠ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಂಘದ ಅಧ್ಯಕ್ಷ ಸಿ.ಎಸ್. ತಿಪ್ಪೇಶ್, ಕಾರ್ಯದರ್ಶಿ ಜೆ.ಬಿ. ರಾಜು, ಸದಸ್ಯರಾದ ಎಸ್.ಟಿ. ನಾಗರಾಜ್, ಬಿ.ಆರ್. ತಿಪ್ಪೇಶ್, ಒ.ಟಿ. ನಾಗರಾಜ್, ಎಚ್. ಶ್ರೀನಿವಾಸ್, ಪುಷ್ಪಲತಾ, ರುದ್ರಮುನಿ, ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ, ನಿವೃತ್ತ ಶಿಕ್ಷಕ ಆರ್.ಕೆ. ತಿಪ್ಪೇರುದ್ರಪ್ಪ, ಎಂ.ಎಲ್. ತಿಮ್ಮರಾಜ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-44-395313633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ‘ಉತ್ತಮ ಶಿಕ್ಷಣ ಪಡೆಯುವ ಮೂಲಕ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ, ಆದ್ದರಿಂದ ಪೋಷಕರು ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲು ಒತ್ತು ನೀಡಬೇಕು’ ಎಂದು ಪಟ್ಟಸಾಲಿ ನೇಕಾರರ ಜನಾಂಗದ ರಾಜ್ಯ ಘಟಕದ ಅಧ್ಯಕ್ಷ ಎಚ್. ತಿಪ್ಪೇಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಭಾನುವಾರ ಪಟ್ಟಸಾಲಿ ನೇಕಾರ ಜನಾಂಗದ ಮಕ್ಕಳಿಗೆ ಪಟ್ಟಸಾಲೆ ನೇಕಾರ ನೌಕರರ ಸಂಘವು ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನೇಕಾರ ಜನಾಂಗವು ಜಾಗತೀಕರಣದ ಪ್ರಭಾವಕ್ಕೆ ಒಳಗಾಗಿ ನಿರುದ್ಯೋಗ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿದೆ. ಇದನ್ನು ಮೆಟ್ಟಿ ನಿಲ್ಲಲು ಜನಾಂಗವು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಅನಾದಿ ಕಾಲದ ಕುಲಕಸುಬು ಎಂದು ನೆಚ್ಚಿಕೊಂಡು ಕೂತಲ್ಲಿ ಮಕ್ಕಳ ಭವಿಷ್ಯ ಕಷ್ಟಕರವಾಗಲಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿಭೆ ಎನ್ನುವುದು ಎಲ್ಲಾ ಮಕ್ಕಳಲ್ಲಿಯೂ ಇರುತ್ತದೆ. ಇದನ್ನು ಹುಡುಕಿ ಹೊರತರುವ ಜೊತೆಗೆ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಲು ಸಮುದಾಯ ಸಹಕಾರ ನೀಡಬೇಕು’ ಎಂದು ಸಮಾಜದ ಸ್ಥಳೀಯ ಘಟಕದ ಅಧ್ಯಕ್ಷ ಎನ್. ಅಪ್ಪಳ್ಳಿ ಮನವಿ ಮಾಡಿದರು.</p>.<p>ಈ ವೇಳೆ ಎಸ್ಎಸ್ಎಲ್ಸಿ, ಪಿಯಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಕಿಜ್ ಕಾರ್ಯಕ್ರಮ, ದೇವರ ದಾಸಿಮಯ್ಯ ವಚನಗಳ ಕಂಠಪಾಠ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ಸಂಘದ ಅಧ್ಯಕ್ಷ ಸಿ.ಎಸ್. ತಿಪ್ಪೇಶ್, ಕಾರ್ಯದರ್ಶಿ ಜೆ.ಬಿ. ರಾಜು, ಸದಸ್ಯರಾದ ಎಸ್.ಟಿ. ನಾಗರಾಜ್, ಬಿ.ಆರ್. ತಿಪ್ಪೇಶ್, ಒ.ಟಿ. ನಾಗರಾಜ್, ಎಚ್. ಶ್ರೀನಿವಾಸ್, ಪುಷ್ಪಲತಾ, ರುದ್ರಮುನಿ, ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ, ನಿವೃತ್ತ ಶಿಕ್ಷಕ ಆರ್.ಕೆ. ತಿಪ್ಪೇರುದ್ರಪ್ಪ, ಎಂ.ಎಲ್. ತಿಮ್ಮರಾಜ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-44-395313633</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>