<p>ಮೊಳಕಾಲ್ಮುರು: ‘ಎಲ್ಲಾ ಶೋಷಿತ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಮಾತ್ರ ಸಾಮಾಜಿಕವಾಗಿ, ಆರ್ಥಿಕವಾಗಿ ಉನ್ನತಿ ಹೊಂದಲು ಸಾಧ್ಯ’ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಈಚೆಗೆ ಬಿ.ಆರ್. ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಹೆಚ್ಚುತ್ತಿರುವ ಪೈಪೋಟಿಯ ಕಾಲದಲ್ಲಿ ವಿದ್ಯಾಭ್ಯಾಸದ ವಿಚಾರದಲ್ಲಿ ನಿರ್ಲಕ್ಷ್ಯ ಸರಿಯಲ್ಲ. ಗುರಿ ಮುಂದಿಟ್ಟುಕೊಂಡು ಶ್ರಮ ವಹಿಸಿದಲ್ಲಿ ಸಾಧನೆ ಮಾಡಬಹುದು. ಸರ್ಕಾರ ಜಾರಿಗೆ ತಂದಿರುವ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>‘ಜಯಂತಿಗಳು ಆಡಂಬರಕ್ಕೆ ಸೀಮಿತವಾಗದೆ ಸಂಸ್ಕೃತಿ ಹಾಗೂ ದಾರ್ಶನಿಕರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ವೇದಿಕೆಗಳಾಗಬೇಕು. ಸಾಧನೆ ಯಾರೊಬ್ಬರ ಸ್ವತ್ತಲ್ಲ. ಛಲ ಇದ್ದಲ್ಲಿ ಎಲ್ಲರಿಗೂ ಸಾಧ್ಯ ಎಂಬುದನ್ನು ತೋರಿಸಿಕೊಡಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಜಯಂತ್ ಹೇಳಿದರು.</p>.<p>ದಸಂಸ ಜಿಲ್ಲಾ ಸಂಚಾಲಕ ಬಿ.ಟಿ. ನಾಗಭೂಷಣ, ಮುಖಂಡರಾದ ಸಣ್ಣವೀರಣ್ಣ, ಚಂದ್ರಣ್ಣ, ಸಿದ್ದಣ್ಣ, ಉಪ ಪ್ರಾಂಶುಪಾಲ ಷಣ್ಮುಖಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-44-1987299731</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ‘ಎಲ್ಲಾ ಶೋಷಿತ ಸಮಾಜದವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಮಾತ್ರ ಸಾಮಾಜಿಕವಾಗಿ, ಆರ್ಥಿಕವಾಗಿ ಉನ್ನತಿ ಹೊಂದಲು ಸಾಧ್ಯ’ ಎಂದು ಪಿಎಸ್ಐ ಮಹೇಶ್ ಹೊಸಪೇಟೆ ಹೇಳಿದರು.</p>.<p>ತಾಲ್ಲೂಕಿನ ಬಿ.ಜಿ. ಕೆರೆಯಲ್ಲಿ ಈಚೆಗೆ ಬಿ.ಆರ್. ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಹೆಚ್ಚುತ್ತಿರುವ ಪೈಪೋಟಿಯ ಕಾಲದಲ್ಲಿ ವಿದ್ಯಾಭ್ಯಾಸದ ವಿಚಾರದಲ್ಲಿ ನಿರ್ಲಕ್ಷ್ಯ ಸರಿಯಲ್ಲ. ಗುರಿ ಮುಂದಿಟ್ಟುಕೊಂಡು ಶ್ರಮ ವಹಿಸಿದಲ್ಲಿ ಸಾಧನೆ ಮಾಡಬಹುದು. ಸರ್ಕಾರ ಜಾರಿಗೆ ತಂದಿರುವ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.</p>.<p>‘ಜಯಂತಿಗಳು ಆಡಂಬರಕ್ಕೆ ಸೀಮಿತವಾಗದೆ ಸಂಸ್ಕೃತಿ ಹಾಗೂ ದಾರ್ಶನಿಕರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ವೇದಿಕೆಗಳಾಗಬೇಕು. ಸಾಧನೆ ಯಾರೊಬ್ಬರ ಸ್ವತ್ತಲ್ಲ. ಛಲ ಇದ್ದಲ್ಲಿ ಎಲ್ಲರಿಗೂ ಸಾಧ್ಯ ಎಂಬುದನ್ನು ತೋರಿಸಿಕೊಡಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಜಯಂತ್ ಹೇಳಿದರು.</p>.<p>ದಸಂಸ ಜಿಲ್ಲಾ ಸಂಚಾಲಕ ಬಿ.ಟಿ. ನಾಗಭೂಷಣ, ಮುಖಂಡರಾದ ಸಣ್ಣವೀರಣ್ಣ, ಚಂದ್ರಣ್ಣ, ಸಿದ್ದಣ್ಣ, ಉಪ ಪ್ರಾಂಶುಪಾಲ ಷಣ್ಮುಖಪ್ಪ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-44-1987299731</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>