<p>ಮೂಡುಬಿದಿರೆ: ‘ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಾರ ಮನೋಭಾವ ಹೆಚ್ಚಾಗುತ್ತಿದ್ದು, ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿವೆ. ಅನುದಾನಿತ ಶಾಲೆಗಳು, ಸರ್ಕಾರಿ ಶಾಲೆಗಳು ಸೊರಗುತ್ತಿವೆ’ ಎಂದು ಬಾಬುರಾಜೇಂದ್ರ ಪ್ರಸಾದ್ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಹೇಳಿದರು.</p>.<p>ಬಾಬುರಾಜೇಂದ್ರ ಪ್ರೌಢಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>60 ವರ್ಷದ ಇತಿಹಾಸ ಇರುವ ಬಾಬುರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ. ದಾನಿಗಳ ಸಹಕಾರದಿಂದ ಈ ಶಾಲೆ ನಡೆಯುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳು ದುರ್ಬಲಗೊಳ್ಳಬಾರದು. ಶಾಲೆಯ ಅಭಿವೃದ್ಧಿಗೆ ವೈಯುಕ್ತಿಕ ನೆಲೆಯಲ್ಲಿ ಈ ವರ್ಷವೂ ₹1 ಲಕ್ಷ ಆರ್ಥಿಕ ಸಹಕಾರ ನೀಡಿದ್ದೇನೆ ಎಂದರು.</p>.<p>ಪ್ರೌಢಶಾಲೆ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳೂ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.</p>.<p>ದಾನಿಗಳಾದ ಪುಷ್ಪರಾಜ್ ಜೈನ್, ಸುಮಾ ರವೀಂದ್ರ ಪರಾಡ್ಕರ್, ಮೂಕಾಂಬಿಕ ಶ್ರೀಧರ್ ಭಟ್, ನಿವೃತ್ತ ಕಚೇರಿ ಸಹಾಯಕ ದಾಮೋದರ ಆಚಾರ್ ಭಾಗವಹಿಸಿದ್ದರು. ಭರತ್ ನಾಯಕ್ ನಿರೂಪಿಸಿದರು. ಮುಖ್ಯ ಶಿಕ್ಷಕಿ ತೆರೆಸಾ ಕಾರ್ಡೋಜಾ ಸ್ವಾಗತಿಸಿ, ಕಿರಣ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-536068060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡುಬಿದಿರೆ: ‘ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಪಾರ ಮನೋಭಾವ ಹೆಚ್ಚಾಗುತ್ತಿದ್ದು, ಆಂಗ್ಲಮಾಧ್ಯಮ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿವೆ. ಅನುದಾನಿತ ಶಾಲೆಗಳು, ಸರ್ಕಾರಿ ಶಾಲೆಗಳು ಸೊರಗುತ್ತಿವೆ’ ಎಂದು ಬಾಬುರಾಜೇಂದ್ರ ಪ್ರಸಾದ್ ಅನುದಾನಿತ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಹೇಳಿದರು.</p>.<p>ಬಾಬುರಾಜೇಂದ್ರ ಪ್ರೌಢಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>60 ವರ್ಷದ ಇತಿಹಾಸ ಇರುವ ಬಾಬುರಾಜೇಂದ್ರ ಪ್ರಸಾದ್ ಪ್ರೌಢಶಾಲೆಯಲ್ಲಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ. ದಾನಿಗಳ ಸಹಕಾರದಿಂದ ಈ ಶಾಲೆ ನಡೆಯುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳು ದುರ್ಬಲಗೊಳ್ಳಬಾರದು. ಶಾಲೆಯ ಅಭಿವೃದ್ಧಿಗೆ ವೈಯುಕ್ತಿಕ ನೆಲೆಯಲ್ಲಿ ಈ ವರ್ಷವೂ ₹1 ಲಕ್ಷ ಆರ್ಥಿಕ ಸಹಕಾರ ನೀಡಿದ್ದೇನೆ ಎಂದರು.</p>.<p>ಪ್ರೌಢಶಾಲೆ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳೂ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.</p>.<p>ದಾನಿಗಳಾದ ಪುಷ್ಪರಾಜ್ ಜೈನ್, ಸುಮಾ ರವೀಂದ್ರ ಪರಾಡ್ಕರ್, ಮೂಕಾಂಬಿಕ ಶ್ರೀಧರ್ ಭಟ್, ನಿವೃತ್ತ ಕಚೇರಿ ಸಹಾಯಕ ದಾಮೋದರ ಆಚಾರ್ ಭಾಗವಹಿಸಿದ್ದರು. ಭರತ್ ನಾಯಕ್ ನಿರೂಪಿಸಿದರು. ಮುಖ್ಯ ಶಿಕ್ಷಕಿ ತೆರೆಸಾ ಕಾರ್ಡೋಜಾ ಸ್ವಾಗತಿಸಿ, ಕಿರಣ್ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-29-536068060</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>