<p>ಮೂಡಲಗಿ: ‘ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಸಹಬಾಳ್ವೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ’ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಕನಕಪ್ಪ ಪೂಜಾರ ಹೇಳಿದರು.</p>.<p>ತಾಲ್ಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬರಕ್ಕೆ ಭೇಟಿ ನೀಡಿ ಶಿಬಿರದಲ್ಲಿಯ ಕಾರ್ಯಚಟುವಟಿಕೆ ವೀಕ್ಷಿಸಿ ಮಾತನಾಡಿದರು.</p>.<p>ಬೆಳಗಾವಿ ಜಿಲ್ಲೆಯ ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ. ಸಂಜೀವ ತಳವಾರ, ಚಿಕ್ಕೋಟಿ ಜಿಲ್ಲೆ ಪ್ರಭಾರಿ ಸಂಯೋಜನಾಧಿಕಾರಿ ಶಂಕರ ನಿಂಗನೂರ ಮಾತನಾಡಿ ಎನ್ಎಸ್ಎಸ್ವು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಬದುಕುವ ಕಲೆಯನ್ನು ತಿಳಿಸಿಕೊಡುತ್ತದೆ ಎಂದರು.</p>.<p>ಶಿಬಿರಾಧಿಕಾರಿ ರಾಜೇಂದ್ರ ಆಸಂಗಿ, ಸರಸ್ವತಿ ರಬಕವಿ, ಹನುಮಂತ ಮರಡ್ಡಿ, ಸದಾಶಿವ ಹೊಸಮನಿ, ಕಾಲೇಜು ಸಿಬ್ಬಂದಿ ಹಾಗೂ ಧರ್ಮಟ್ಟಿ ಗ್ರಾಮದ ಗಣ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-21-2075503790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಲಗಿ: ‘ಎನ್ಎಸ್ಎಸ್ ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಸಹಬಾಳ್ವೆ ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸುತ್ತದೆ’ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎನ್ಎಸ್ಎಸ್ ಸಂಯೋಜನಾಧಿಕಾರಿ ಕನಕಪ್ಪ ಪೂಜಾರ ಹೇಳಿದರು.</p>.<p>ತಾಲ್ಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬರಕ್ಕೆ ಭೇಟಿ ನೀಡಿ ಶಿಬಿರದಲ್ಲಿಯ ಕಾರ್ಯಚಟುವಟಿಕೆ ವೀಕ್ಷಿಸಿ ಮಾತನಾಡಿದರು.</p>.<p>ಬೆಳಗಾವಿ ಜಿಲ್ಲೆಯ ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ. ಸಂಜೀವ ತಳವಾರ, ಚಿಕ್ಕೋಟಿ ಜಿಲ್ಲೆ ಪ್ರಭಾರಿ ಸಂಯೋಜನಾಧಿಕಾರಿ ಶಂಕರ ನಿಂಗನೂರ ಮಾತನಾಡಿ ಎನ್ಎಸ್ಎಸ್ವು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಬದುಕುವ ಕಲೆಯನ್ನು ತಿಳಿಸಿಕೊಡುತ್ತದೆ ಎಂದರು.</p>.<p>ಶಿಬಿರಾಧಿಕಾರಿ ರಾಜೇಂದ್ರ ಆಸಂಗಿ, ಸರಸ್ವತಿ ರಬಕವಿ, ಹನುಮಂತ ಮರಡ್ಡಿ, ಸದಾಶಿವ ಹೊಸಮನಿ, ಕಾಲೇಜು ಸಿಬ್ಬಂದಿ ಹಾಗೂ ಧರ್ಮಟ್ಟಿ ಗ್ರಾಮದ ಗಣ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-21-2075503790</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>