<p>ಮೂಡಿಗೆರೆ: ‘ಸಮಾಜದ ಏಳಿಗೆಗೆ ಶಿಕ್ಷಣವೇ ದಾರಿಯಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಕೊರತೆ ಉಂಟಾಗಬಾರದು’ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.</p>.<p>ಪಟ್ಟಣದ ಕೆ.ಎಂ. ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿನಿಲಯಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವು 4 ದಶಕಗಳ ಹಿಂದೆ ನಿರ್ಮಾಣವಾಗಿದ್ದು, ಶಿಥಿಲಾವಸ್ಥೆಗೆ ತಲುಪಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ₹5 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ತಾಲ್ಲೂಕಿನ ಎಲ್ಲ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿ ನಿಲಯದಲ್ಲಿ ದಾಖಲಾಗುವ ವಿದ್ಯಾರ್ಥಿಳ ಎಲ್ಲ ವೆಚ್ಚವನ್ನು ಸರ್ಕಾರ ಭರಿಸುವುದರಿಂದ, ಪೋಷಕರು ಇದರ ಸದುಪಯೋಗ ಪಡೆದು ಮಕ್ಕಳು ಸುಶಿಕ್ಷಿತರಾಗುವಂತೆ ಮಾಡಬೇಕು’ ಎಂದರು.</p>.<p>ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಕೆ. ವೆಂಕಟೇಶ್, ಹಜ್ಜು, ಸಂಪತ್ ಬಿಳಗುಳ, ಜಯಮ್ಮ, ಸಿ.ಬಿ. ಶಂಕರ್, ಸುರೇಂದ್ರ ಉಗ್ಗೇಹಳ್ಳಿ, ಸಬ್ಲಿ ದೇವರಾಜ್, ಹೊಸ್ಕೆರೆ ರಮೇಶ್, ಅಣ್ಣೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-136629795</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡಿಗೆರೆ: ‘ಸಮಾಜದ ಏಳಿಗೆಗೆ ಶಿಕ್ಷಣವೇ ದಾರಿಯಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಕೊರತೆ ಉಂಟಾಗಬಾರದು’ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.</p>.<p>ಪಟ್ಟಣದ ಕೆ.ಎಂ. ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿವೇಶನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿದ್ಯಾರ್ಥಿನಿಲಯಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವು 4 ದಶಕಗಳ ಹಿಂದೆ ನಿರ್ಮಾಣವಾಗಿದ್ದು, ಶಿಥಿಲಾವಸ್ಥೆಗೆ ತಲುಪಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ₹5 ಕೋಟಿ ವೆಚ್ಚದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವನ್ನು ನಿರ್ಮಿಸಲಾಗುತ್ತಿದೆ. ಇದರಿಂದ ತಾಲ್ಲೂಕಿನ ಎಲ್ಲ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಿದ್ಯಾರ್ಥಿ ನಿಲಯದಲ್ಲಿ ದಾಖಲಾಗುವ ವಿದ್ಯಾರ್ಥಿಳ ಎಲ್ಲ ವೆಚ್ಚವನ್ನು ಸರ್ಕಾರ ಭರಿಸುವುದರಿಂದ, ಪೋಷಕರು ಇದರ ಸದುಪಯೋಗ ಪಡೆದು ಮಕ್ಕಳು ಸುಶಿಕ್ಷಿತರಾಗುವಂತೆ ಮಾಡಬೇಕು’ ಎಂದರು.</p>.<p>ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸೋಮಶೇಖರ್, ಕೆ. ವೆಂಕಟೇಶ್, ಹಜ್ಜು, ಸಂಪತ್ ಬಿಳಗುಳ, ಜಯಮ್ಮ, ಸಿ.ಬಿ. ಶಂಕರ್, ಸುರೇಂದ್ರ ಉಗ್ಗೇಹಳ್ಳಿ, ಸಬ್ಲಿ ದೇವರಾಜ್, ಹೊಸ್ಕೆರೆ ರಮೇಶ್, ಅಣ್ಣೇಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-136629795</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>