<p>ಬ್ಯಾಡಗಿ: ‘ತಾಂತ್ರಿಕ ಅಧ್ಯಯನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಅವಕಾಶಗಳಿವೆ. ಶಿಕ್ಷಕರೂ ಕಾಲಕ್ಕೆ ಅನುಗುಣವಾಗಿ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಮಾತ್ರ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ’ ಎಂದು ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.</p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳ್ಳಾರಿ ರುದ್ರಪ್ಪ ಸಿಬಿಎಸ್ಇ ವಸತಿ ಶಾಲೆಯಲ್ಲಿ ಎರಡು ದಿನಗಳವರೆಗೆ ಆಯೋಜಿಸಿದ್ದ ಶಿಕ್ಷಕರ ಪ್ರೇರಣಾ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಸಿದ್ಧಲಿಂಗಸ್ವಾಮಿ ನೀರಲಗಿ ಮಾತನಾಡಿ, ‘ಶಾಲೆ ಎಂಬುದು ಕೇವಲ ಅಂಕಗಳಿಕೆಗೆ ಸೀಮಿತಗೊಳ್ಳದೆ ಮಕ್ಕಳ ಆಸಕ್ತಿ, ಸಂತೋಷ ಹಾಗೂ ಕನಸುಗಳನ್ನು ಸಾಕಾರಗೊಳಿಸುವ ತಾಣವಾಗಬೇಕಾಗಿದೆ. ಮಕ್ಕಳಿಗೆ ಸಂತೋಷದ ವಾತಾವರಣ ರೂಪಿಸುವ ಉದ್ದೇಶದಿಂದ ‘ಹ್ಯಾಪಿ ಕ್ಲಾಸ್ರೂಂ’ ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಲಾಗಿದೆ’ ಎಂದರು.</p>.<p>ಪ್ರಾಚಾರ್ಯ ಪ್ರಕಾಶ ಬಿ.ಸಿ ಮಾತನಾಡಿ, ‘ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ. ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಶಿಕ್ಷಣ, ವಿಜ್ಞಾನ ಹಾಗೂ ತಾಂತ್ರಿಕ ಕೌಶಲಗಳ ಕುರಿತು ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿಯೇ ಮಾರ್ಗದರ್ಶನ ನೀಡಬೇಕು’ ಎಂದರು.</p>.<p>ಈ ವೇಳೆ ಸಂಸ್ಥೆಯ ಪದಾಧಿಕಾರಿಗಳಾದ ಚನ್ನವೀರಪ್ಪ ಬಳ್ಳಾರಿ, ಎಸ್.ಆರ್. ಬಳ್ಳಾರಿ, ಪ್ರಾಚಾರ್ಯರಾದ ಸತೀಶ ಹಿರೇಮಠ, ರೋಹಿತ್ ಮಾತಾಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-22-1635240990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ‘ತಾಂತ್ರಿಕ ಅಧ್ಯಯನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಅವಕಾಶಗಳಿವೆ. ಶಿಕ್ಷಕರೂ ಕಾಲಕ್ಕೆ ಅನುಗುಣವಾಗಿ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಮಾತ್ರ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ’ ಎಂದು ಬಿಆರ್ಇ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.</p>.<p>ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಬಳ್ಳಾರಿ ರುದ್ರಪ್ಪ ಸಿಬಿಎಸ್ಇ ವಸತಿ ಶಾಲೆಯಲ್ಲಿ ಎರಡು ದಿನಗಳವರೆಗೆ ಆಯೋಜಿಸಿದ್ದ ಶಿಕ್ಷಕರ ಪ್ರೇರಣಾ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾದ ಸಿದ್ಧಲಿಂಗಸ್ವಾಮಿ ನೀರಲಗಿ ಮಾತನಾಡಿ, ‘ಶಾಲೆ ಎಂಬುದು ಕೇವಲ ಅಂಕಗಳಿಕೆಗೆ ಸೀಮಿತಗೊಳ್ಳದೆ ಮಕ್ಕಳ ಆಸಕ್ತಿ, ಸಂತೋಷ ಹಾಗೂ ಕನಸುಗಳನ್ನು ಸಾಕಾರಗೊಳಿಸುವ ತಾಣವಾಗಬೇಕಾಗಿದೆ. ಮಕ್ಕಳಿಗೆ ಸಂತೋಷದ ವಾತಾವರಣ ರೂಪಿಸುವ ಉದ್ದೇಶದಿಂದ ‘ಹ್ಯಾಪಿ ಕ್ಲಾಸ್ರೂಂ’ ಎಂಬ ಪರಿಕಲ್ಪನೆ ಅಳವಡಿಸಿಕೊಳ್ಳಲಾಗಿದೆ’ ಎಂದರು.</p>.<p>ಪ್ರಾಚಾರ್ಯ ಪ್ರಕಾಶ ಬಿ.ಸಿ ಮಾತನಾಡಿ, ‘ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ತಾಂತ್ರಿಕ ಶಿಕ್ಷಣದ ಅಗತ್ಯತೆ ಹೆಚ್ಚಾಗಿದೆ. ಕೃತಕ ಬುದ್ಧಿಮತ್ತೆ, ಕಂಪ್ಯೂಟರ್ ಶಿಕ್ಷಣ, ವಿಜ್ಞಾನ ಹಾಗೂ ತಾಂತ್ರಿಕ ಕೌಶಲಗಳ ಕುರಿತು ವಿದ್ಯಾರ್ಥಿಗಳಿಗೆ ಆರಂಭಿಕ ಹಂತದಲ್ಲಿಯೇ ಮಾರ್ಗದರ್ಶನ ನೀಡಬೇಕು’ ಎಂದರು.</p>.<p>ಈ ವೇಳೆ ಸಂಸ್ಥೆಯ ಪದಾಧಿಕಾರಿಗಳಾದ ಚನ್ನವೀರಪ್ಪ ಬಳ್ಳಾರಿ, ಎಸ್.ಆರ್. ಬಳ್ಳಾರಿ, ಪ್ರಾಚಾರ್ಯರಾದ ಸತೀಶ ಹಿರೇಮಠ, ರೋಹಿತ್ ಮಾತಾಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-22-1635240990</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>