<p>ಮುದ್ದೇಬಿಹಾಳ: ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದಿಂದ ಪ್ರತಿ ವರ್ಷ ಹಮ್ಮಿಕೊಳ್ಳಲಾಗುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ ‘ಪರಿಸರ ರಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.</p>.<p>ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3ರೊಳಗೆ, ಅಧ್ಯಕ್ಷರು, ಹಸಿರು ತೋರಣ ಗೆಳೆಯರ ಬಳಗ, 10ನೇ ಕ್ರಾಸ್, ಹುಡ್ಕೋ ಬಡಾವಣೆ, ಮುದ್ದೇಬಿಹಾಳ- 586212 ಈ ವಿಳಾಸಕ್ಕೆ ಸಲ್ಲಿಸಬೇಕು.</p>.<p>ಪರಿಸರ ಕ್ಷೇತ್ರದಲ್ಲಿ ಎಲೆಮರೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರೂ ಶಿಫಾರಸು ಮಾಡಬಹುದು. ಜೂನ್ 7ರಂದು ವಿಶ್ವ ಪರಿಸರ ದಿನಾಚರಣೆಯಲ್ಲಿ ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449431022, 94810 81588 ಸಂಪರ್ಕಿಸಬೇಕು ಎಂದು ಬಳಗದ ಅಧ್ಯಕ್ಷ ಅಮರೇಶ ಗೂಳಿ ಕಾರ್ಯದರ್ಶಿ ಬಸವರಾಜ ಬಿಜ್ಜೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-26-186343158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದ್ದೇಬಿಹಾಳ: ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದಿಂದ ಪ್ರತಿ ವರ್ಷ ಹಮ್ಮಿಕೊಳ್ಳಲಾಗುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ ‘ಪರಿಸರ ರಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.</p>.<p>ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3ರೊಳಗೆ, ಅಧ್ಯಕ್ಷರು, ಹಸಿರು ತೋರಣ ಗೆಳೆಯರ ಬಳಗ, 10ನೇ ಕ್ರಾಸ್, ಹುಡ್ಕೋ ಬಡಾವಣೆ, ಮುದ್ದೇಬಿಹಾಳ- 586212 ಈ ವಿಳಾಸಕ್ಕೆ ಸಲ್ಲಿಸಬೇಕು.</p>.<p>ಪರಿಸರ ಕ್ಷೇತ್ರದಲ್ಲಿ ಎಲೆಮರೆಯಂತೆ ಕಾರ್ಯ ನಿರ್ವಹಿಸುತ್ತಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರೂ ಶಿಫಾರಸು ಮಾಡಬಹುದು. ಜೂನ್ 7ರಂದು ವಿಶ್ವ ಪರಿಸರ ದಿನಾಚರಣೆಯಲ್ಲಿ ನೀಡಲಾಗುವುದು.</p>.<p>ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449431022, 94810 81588 ಸಂಪರ್ಕಿಸಬೇಕು ಎಂದು ಬಳಗದ ಅಧ್ಯಕ್ಷ ಅಮರೇಶ ಗೂಳಿ ಕಾರ್ಯದರ್ಶಿ ಬಸವರಾಜ ಬಿಜ್ಜೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-26-186343158</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>