<p>ಮುದ್ದೇಬಿಹಾಳ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಆಯೋಜಿಸಲಾಗಿರುವ ಪ್ರತಿಷ್ಠಿತ ‘ಯುವ ವಿಜ್ಞಾನಿ ಕಾರ್ಯಕ್ರಮ’ (ಯುವಿಕಾ–2026) ಕ್ಕೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರಂಥಿಕಾ ಕುಂಬಾರ ಆಯ್ಕೆಯಾಗಿದ್ದಾರೆ.</p>.<p>ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಯನ್ನು ಮೆಚ್ಚಿ ಪಟ್ಟಣದ ಶ್ರೀ ಪವಾಡ ಬಸವೇಶ್ವರ ಆಶ್ರಮದ ಆವರಣದಲ್ಲಿ ಭಾನುವಾರ ಸಂಜೆ ಕುಂಬಾರ ಸಮಾಜದ ವತಿಯಿಂದ ಸಿಹಿ ಹಂಚಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ವೇಳೆ ಮುಖ್ಯಶಿಕ್ಷಕ ಶಿವಾನಂದ ಕುಂಬಾರ ಮಾತನಾಡಿ, ‘ಪಟ್ಟಣ ಭಾಗದ ವಿದ್ಯಾರ್ಥಿನಿಯೊಬ್ಬಳು ರಾಷ್ಟ್ರಮಟ್ಟದ ಇಸ್ರೋ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಇದು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಲಿ’ ಎಂದು ಹಾರೈಸಿದರು.</p>.<p>ಸಮಾರಂಭದಲ್ಲಿ ಕುಂಬಾರ ಸಮಾಜದ ಹಿರಿಯರಾದ ಸಂಗಣ್ಣ ಕುಂಬಾರ, ಬಸವರಾಜ ಕುಂಬಾರ (ಗೋನಾಳ), ವಿದ್ಯಾರ್ಥಿನಿಯ ತಂದೆ ಮಂಜುನಾಥ ಕುಂಬಾರ, ರಾಜಶೇಖರ ಕುಂಬಾರ, ಪತ್ರಕರ್ತ ಬಸವರಾಜ ಕುಂಬಾರ, ಅಂಬಣ್ಣ ಕುಂಬಾರ, ಮಲ್ಲಣ್ಣ ಕುಂಬಾರ, ಶರಣಬಸಪ್ಪ ಕುಂಬಾರ, ಮುತ್ತು ಕುಂಬಾರ ಹಾಗೂ ವೀರೇಶ ಚಲವಾದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-26-832362147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದ್ದೇಬಿಹಾಳ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವತಿಯಿಂದ ಆಯೋಜಿಸಲಾಗಿರುವ ಪ್ರತಿಷ್ಠಿತ ‘ಯುವ ವಿಜ್ಞಾನಿ ಕಾರ್ಯಕ್ರಮ’ (ಯುವಿಕಾ–2026) ಕ್ಕೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರಂಥಿಕಾ ಕುಂಬಾರ ಆಯ್ಕೆಯಾಗಿದ್ದಾರೆ.</p>.<p>ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಯನ್ನು ಮೆಚ್ಚಿ ಪಟ್ಟಣದ ಶ್ರೀ ಪವಾಡ ಬಸವೇಶ್ವರ ಆಶ್ರಮದ ಆವರಣದಲ್ಲಿ ಭಾನುವಾರ ಸಂಜೆ ಕುಂಬಾರ ಸಮಾಜದ ವತಿಯಿಂದ ಸಿಹಿ ಹಂಚಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ವೇಳೆ ಮುಖ್ಯಶಿಕ್ಷಕ ಶಿವಾನಂದ ಕುಂಬಾರ ಮಾತನಾಡಿ, ‘ಪಟ್ಟಣ ಭಾಗದ ವಿದ್ಯಾರ್ಥಿನಿಯೊಬ್ಬಳು ರಾಷ್ಟ್ರಮಟ್ಟದ ಇಸ್ರೋ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಇದು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಲಿ’ ಎಂದು ಹಾರೈಸಿದರು.</p>.<p>ಸಮಾರಂಭದಲ್ಲಿ ಕುಂಬಾರ ಸಮಾಜದ ಹಿರಿಯರಾದ ಸಂಗಣ್ಣ ಕುಂಬಾರ, ಬಸವರಾಜ ಕುಂಬಾರ (ಗೋನಾಳ), ವಿದ್ಯಾರ್ಥಿನಿಯ ತಂದೆ ಮಂಜುನಾಥ ಕುಂಬಾರ, ರಾಜಶೇಖರ ಕುಂಬಾರ, ಪತ್ರಕರ್ತ ಬಸವರಾಜ ಕುಂಬಾರ, ಅಂಬಣ್ಣ ಕುಂಬಾರ, ಮಲ್ಲಣ್ಣ ಕುಂಬಾರ, ಶರಣಬಸಪ್ಪ ಕುಂಬಾರ, ಮುತ್ತು ಕುಂಬಾರ ಹಾಗೂ ವೀರೇಶ ಚಲವಾದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-26-832362147</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>