<p>ಮುದ್ದೇಬಿಹಾಳ: ಕನ್ನಡ ಕಡ್ಡಾಯವಾಗಿ ಅನ್ನದ ಭಾಷೆಯಾಗಲಿ, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬಂತೆ ಕನ್ನಡ ಭಾಷೆಯು ಶ್ರೀಮಂತವಾಗಲಿ, ನೆರೆಯ ರಾಜ್ಯಗಳ ಪ್ರಭಾವದಿಂದ ಕನ್ನಡ ಭಾಷಿಕರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನಾಚರಣೆ ಉದ್ದೇಶಿಸಿ ಮಾತನಾಡಿ, ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಾಡು-ನುಡಿ, ನೆಲ-ಜಲ ಹಾಗೂ ಸಂಸ್ಕೃತಿ ಪರಂಪರೆ ಉಳಿಸುವ ಬೆಳೆಸುವ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.</p>.<p>ನಗರ ಘಟಕದ ಅಧ್ಯಕ್ಷೆ ಜಯಶ್ರೀ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು.</p>.<p>ಸಾಹಿತ್ಯ ಪರಿಷತ್ತಿನ ಬಸವರಾಜ ನಾಲತವಾಡ, ಉದಯಕುಮಾರ ರಾಯಚೂರ ಮಾತನಾಡಿ, ಕನ್ನಡ ಸಂಸ್ಥಾಪನಾ ದಿನವನ್ನು ಸರ್ಕಾರವೇ ಆಚರಿಸಬೇಕೆಂದರು. ಪ್ರಾಸ್ತಾವಿಕವಾಗಿ ಬಸನಗೌಡ ಪಾಟೀಲ ಮಾತನಾಡಿದರು.</p>.<p>ಚಂದ್ರು ತಮದಡ್ಡಿ, ಸದಾಶಿವ ಮಠ,ಹುಸೇನ ಮುಲ್ಲಾ, ಸುರೇಶ ಶಿಂಧೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-26-1863731635</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದ್ದೇಬಿಹಾಳ: ಕನ್ನಡ ಕಡ್ಡಾಯವಾಗಿ ಅನ್ನದ ಭಾಷೆಯಾಗಲಿ, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬಂತೆ ಕನ್ನಡ ಭಾಷೆಯು ಶ್ರೀಮಂತವಾಗಲಿ, ನೆರೆಯ ರಾಜ್ಯಗಳ ಪ್ರಭಾವದಿಂದ ಕನ್ನಡ ಭಾಷಿಕರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ವಿಜಯಪುರ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನಾಚರಣೆ ಉದ್ದೇಶಿಸಿ ಮಾತನಾಡಿ, ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ನಾಡು-ನುಡಿ, ನೆಲ-ಜಲ ಹಾಗೂ ಸಂಸ್ಕೃತಿ ಪರಂಪರೆ ಉಳಿಸುವ ಬೆಳೆಸುವ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.</p>.<p>ನಗರ ಘಟಕದ ಅಧ್ಯಕ್ಷೆ ಜಯಶ್ರೀ ಹಿರೇಮಠ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು.</p>.<p>ಸಾಹಿತ್ಯ ಪರಿಷತ್ತಿನ ಬಸವರಾಜ ನಾಲತವಾಡ, ಉದಯಕುಮಾರ ರಾಯಚೂರ ಮಾತನಾಡಿ, ಕನ್ನಡ ಸಂಸ್ಥಾಪನಾ ದಿನವನ್ನು ಸರ್ಕಾರವೇ ಆಚರಿಸಬೇಕೆಂದರು. ಪ್ರಾಸ್ತಾವಿಕವಾಗಿ ಬಸನಗೌಡ ಪಾಟೀಲ ಮಾತನಾಡಿದರು.</p>.<p>ಚಂದ್ರು ತಮದಡ್ಡಿ, ಸದಾಶಿವ ಮಠ,ಹುಸೇನ ಮುಲ್ಲಾ, ಸುರೇಶ ಶಿಂಧೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-26-1863731635</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>