<p>ಮುದಗಲ್: ಸಮೀಪದ ಜನತಾಪುರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ್ ಭೇಟಿ ನೀಡಿ, ಬೇಸಿಗೆ ಶಿಬಿರ ವೀಕ್ಷಿಸಿದರು.</p>.<p>ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮಕ್ಕಳ ಮನೋಲ್ಲಾಸ 15 ದಿನಗಳ ಉಚಿತ ಬೇಸಿಗೆ ಶಿಬಿರದ 2ನೇ ದಿನದ ಕಾರ್ಯಾಗಾರದಲ್ಲಿ ಉಪ ನಿರ್ದೇಶಕರು ಪಾಲ್ಗೊಂಡು ಮಕ್ಕಳೊಂದಿಗೆ ಚರ್ಚೆ ನಡೆಸಿದರು.</p>.<p>‘ಮಕ್ಕಳು ಚಟುವಟಿಕೆಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ಆಯೋಜನೆ ಮಾಡುವುದು ವಿರಳ. ಇಲ್ಲಿನ ಶಿಕ್ಷಕರು ಆಯೋಜನೆ ಮಾಡಿರುವ ವಿಷಯ ತಿಳಿದು, ನೋಡಲು ಬಂದಿರುವೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ತರಲು ಇಂತಹ ಶಿಬಿರಗಳು ಸಹಾಯಕ’ ಎಂದರು.</p>.<p>ಶಿಕ್ಷಕರಾದ ಮೌನೇಶ.ಎಂ, ಗೀತಾ, ಜ್ಯೋತಿ ಯರದಿಹಾಳ, ನೀಲಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-32-251720050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಸಮೀಪದ ಜನತಾಪುರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ್ ಭೇಟಿ ನೀಡಿ, ಬೇಸಿಗೆ ಶಿಬಿರ ವೀಕ್ಷಿಸಿದರು.</p>.<p>ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮಕ್ಕಳ ಮನೋಲ್ಲಾಸ 15 ದಿನಗಳ ಉಚಿತ ಬೇಸಿಗೆ ಶಿಬಿರದ 2ನೇ ದಿನದ ಕಾರ್ಯಾಗಾರದಲ್ಲಿ ಉಪ ನಿರ್ದೇಶಕರು ಪಾಲ್ಗೊಂಡು ಮಕ್ಕಳೊಂದಿಗೆ ಚರ್ಚೆ ನಡೆಸಿದರು.</p>.<p>‘ಮಕ್ಕಳು ಚಟುವಟಿಕೆಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ಆಯೋಜನೆ ಮಾಡುವುದು ವಿರಳ. ಇಲ್ಲಿನ ಶಿಕ್ಷಕರು ಆಯೋಜನೆ ಮಾಡಿರುವ ವಿಷಯ ತಿಳಿದು, ನೋಡಲು ಬಂದಿರುವೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ತರಲು ಇಂತಹ ಶಿಬಿರಗಳು ಸಹಾಯಕ’ ಎಂದರು.</p>.<p>ಶಿಕ್ಷಕರಾದ ಮೌನೇಶ.ಎಂ, ಗೀತಾ, ಜ್ಯೋತಿ ಯರದಿಹಾಳ, ನೀಲಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-32-251720050</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>