<p>ಮುಳಬಾಗಿಲು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಮತ್ತು ಕೋಲಾರ ಜಾಲಪ್ಪ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಉಚಿತ ರಕ್ತದಾನ ಶಿಬಿರ ನಡೆಯಿತು.</p>.<p>ಶಿಬಿರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ವ ಇಚ್ಛೆಯಿಂದ ಆಗಮಿಸಿ ರಕ್ತವನ್ನು ನೀಡಿದರು. ಬೆಳಗ್ಗೆ 10 ರಿಂದ 3 ಗಂಟೆಯವರೆಗೂ ನಡೆದ ಶಿಬಿರದಲ್ಲಿ ಒಟ್ಟು 34 ಯೂನಿಟ್ ರಕ್ತ ಸಂಗ್ರಹವಾಗಿದೆ ಎಂದು ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ ತಿಳಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಮನುಷ್ಯನ ಪ್ರಾಣ ಉಳಿಸುವ ಸಂಜೀವಿನಿಯಂತಿರುವ ರಕ್ತವನ್ನು ಅರ್ಹರು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಆರೋಗ್ಯ ಹಾಗೂ ಪ್ರಾಣ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.</p>.<p>ದೇಶದ ಆರೋಗ್ಯ ಹಾಗೂ ಅಪಾಯದಲ್ಲಿರುವ ಪ್ರಾಣಗಳನ್ನು ಉಳಿಸುವ ಶಕ್ತಿ ಯುವಕರ ಕೈಯಲ್ಲಿದೆ. ಹಾಗಾಗಿ ರಕ್ತವನ್ನು ನೀಡಲು ಸಶಕ್ತರಿರುವವರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ರಕ್ತದಾನ ಮಾಡಬೇಕು ಎಂದರು.</p>.<p>ಡಾ.ಕೃಷ್ಣಪ್ಪ, ಡಾ.ಟಿ.ಎಸ್.ಶ್ರೀನಿವಾಸ್, ಡಾ.ಎಂ.ಎನ್.ಮೂರ್ತಿ, ಆದಿನಾರಾಯಣ, ಡಾ.ಶ್ರೀಧರ್, ಎಲ್.ಸೀನಪ್ಪ, ಲಾರೆನ್ಸ್ ಪ್ರಸನ್ನ, ಯುವ ರೆಡ್ ಕ್ರಾಸ್ ಸಂಚಾಲಕಿ ಡಾ.ಎ.ಎಸ್.ವಸುಂಧರ, ಉಮಾ, ಶಶಿಕಲಾ, ದಿನೇಶ್, ವೆಂಕಟೇಶ್, ಮೋಹನ ರೆಡ್ಡಿ, ಭಾಗ್ಯಲಕ್ಷ್ಮಿ, ಸೌಮ್ಯಪ್ರಭ, ಪುಷ್ಪಲತಾ ರೆಡ್ಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-18-1504716298</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ ಮತ್ತು ಕೋಲಾರ ಜಾಲಪ್ಪ ಆಸ್ಪತ್ರೆ ಸಹಯೋಗದಲ್ಲಿ ಗುರುವಾರ ಉಚಿತ ರಕ್ತದಾನ ಶಿಬಿರ ನಡೆಯಿತು.</p>.<p>ಶಿಬಿರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ವ ಇಚ್ಛೆಯಿಂದ ಆಗಮಿಸಿ ರಕ್ತವನ್ನು ನೀಡಿದರು. ಬೆಳಗ್ಗೆ 10 ರಿಂದ 3 ಗಂಟೆಯವರೆಗೂ ನಡೆದ ಶಿಬಿರದಲ್ಲಿ ಒಟ್ಟು 34 ಯೂನಿಟ್ ರಕ್ತ ಸಂಗ್ರಹವಾಗಿದೆ ಎಂದು ಪ್ರಾಂಶುಪಾಲ ಡಾ.ಜಿ.ಮುನಿವೆಂಕಟಪ್ಪ ತಿಳಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಮನುಷ್ಯನ ಪ್ರಾಣ ಉಳಿಸುವ ಸಂಜೀವಿನಿಯಂತಿರುವ ರಕ್ತವನ್ನು ಅರ್ಹರು ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಆರೋಗ್ಯ ಹಾಗೂ ಪ್ರಾಣ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.</p>.<p>ದೇಶದ ಆರೋಗ್ಯ ಹಾಗೂ ಅಪಾಯದಲ್ಲಿರುವ ಪ್ರಾಣಗಳನ್ನು ಉಳಿಸುವ ಶಕ್ತಿ ಯುವಕರ ಕೈಯಲ್ಲಿದೆ. ಹಾಗಾಗಿ ರಕ್ತವನ್ನು ನೀಡಲು ಸಶಕ್ತರಿರುವವರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ರಕ್ತದಾನ ಮಾಡಬೇಕು ಎಂದರು.</p>.<p>ಡಾ.ಕೃಷ್ಣಪ್ಪ, ಡಾ.ಟಿ.ಎಸ್.ಶ್ರೀನಿವಾಸ್, ಡಾ.ಎಂ.ಎನ್.ಮೂರ್ತಿ, ಆದಿನಾರಾಯಣ, ಡಾ.ಶ್ರೀಧರ್, ಎಲ್.ಸೀನಪ್ಪ, ಲಾರೆನ್ಸ್ ಪ್ರಸನ್ನ, ಯುವ ರೆಡ್ ಕ್ರಾಸ್ ಸಂಚಾಲಕಿ ಡಾ.ಎ.ಎಸ್.ವಸುಂಧರ, ಉಮಾ, ಶಶಿಕಲಾ, ದಿನೇಶ್, ವೆಂಕಟೇಶ್, ಮೋಹನ ರೆಡ್ಡಿ, ಭಾಗ್ಯಲಕ್ಷ್ಮಿ, ಸೌಮ್ಯಪ್ರಭ, ಪುಷ್ಪಲತಾ ರೆಡ್ಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-18-1504716298</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>