<p>ಮುಳಬಾಗಿಲು: ಜಿಲ್ಲಾಮಟ್ಟದಲ್ಲಿ ಕೋಲಾರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಮೇ 10ರಂದು ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ನಗರದಲ್ಲಿ ನಡೆಯಿತು.</p>.<p>ಈ ವೇಳೆ ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಎಸ್.ಕೃಷ್ಣಾರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಪ್ರೋತ್ಸಾಹಕ್ಕಾಗಿ ಈ ಬಾರಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚಿನ ಫಲಿತಾಂಶ ಪಡೆದಿರುವ ಜಿಲ್ಲೆಯ ಸಮುದಾಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಕೋಲಾರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆ.ಸಿ.ರೆಡ್ಡಿ ಅವರ ಪುತ್ಥಳಿ ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೆಜಿಎಫ್ನಲ್ಲಿ ಕೆ.ಸಿ.ರೆಡ್ಡಿ ಸ್ಮಾರಕ ಭವನ ನಿರ್ಮಾಣ ಮಾಡಲಾಗುವುದು. ಶಿಕ್ಷಣ ಹಾಗೂ ಸಂಘದ ಚಟುವಟಿಕೆಗಳಿಗಾಗಿ ಭೂಮಿ, ನಿವೇಶನ ಮಂಜೂರು ಮಾಡಿಸಲು ಶ್ರಮಿಸಲಾಗುವುದು ಎಂದರು.</p>.<p>ಹೇಮರಡ್ಡಿ ಮಲ್ಲಮ್ಮ ಕೇವಲ ಒಂದು ಸಮುದಾಯದ ವ್ಯಕ್ತಿಯಲ್ಲ. ಅವರು 15ನೇ ಶತಮಾನದ ಶ್ರೇಷ್ಠ ಶಿವಶರಣೆ. ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಲ್ಲಮ್ಮ ಅವರ ತ್ಯಾಗ ಮತ್ತು ಭಕ್ತಿಯ ಸಂದೇಶವನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.</p>.<p>ಹೇಮರೆಡ್ಡಿ ಜನ ಸಂಘದ ರಾಜ್ಯ ನಿರ್ದೇಶಕ ಪ್ರಭಾಕರ್ ರೆಡ್ಡಿ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ, ಶಾಮಲಮ್ಮ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-466918589</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ಜಿಲ್ಲಾಮಟ್ಟದಲ್ಲಿ ಕೋಲಾರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಮೇ 10ರಂದು ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ನಗರದಲ್ಲಿ ನಡೆಯಿತು.</p>.<p>ಈ ವೇಳೆ ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಎಸ್.ಕೃಷ್ಣಾರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಪ್ರೋತ್ಸಾಹಕ್ಕಾಗಿ ಈ ಬಾರಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.</p>.<p>ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚಿನ ಫಲಿತಾಂಶ ಪಡೆದಿರುವ ಜಿಲ್ಲೆಯ ಸಮುದಾಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಕೋಲಾರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆ.ಸಿ.ರೆಡ್ಡಿ ಅವರ ಪುತ್ಥಳಿ ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೆಜಿಎಫ್ನಲ್ಲಿ ಕೆ.ಸಿ.ರೆಡ್ಡಿ ಸ್ಮಾರಕ ಭವನ ನಿರ್ಮಾಣ ಮಾಡಲಾಗುವುದು. ಶಿಕ್ಷಣ ಹಾಗೂ ಸಂಘದ ಚಟುವಟಿಕೆಗಳಿಗಾಗಿ ಭೂಮಿ, ನಿವೇಶನ ಮಂಜೂರು ಮಾಡಿಸಲು ಶ್ರಮಿಸಲಾಗುವುದು ಎಂದರು.</p>.<p>ಹೇಮರಡ್ಡಿ ಮಲ್ಲಮ್ಮ ಕೇವಲ ಒಂದು ಸಮುದಾಯದ ವ್ಯಕ್ತಿಯಲ್ಲ. ಅವರು 15ನೇ ಶತಮಾನದ ಶ್ರೇಷ್ಠ ಶಿವಶರಣೆ. ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಲ್ಲಮ್ಮ ಅವರ ತ್ಯಾಗ ಮತ್ತು ಭಕ್ತಿಯ ಸಂದೇಶವನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.</p>.<p>ಹೇಮರೆಡ್ಡಿ ಜನ ಸಂಘದ ರಾಜ್ಯ ನಿರ್ದೇಶಕ ಪ್ರಭಾಕರ್ ರೆಡ್ಡಿ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ, ಶಾಮಲಮ್ಮ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-466918589</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>