<p>ಮುಂಡರಗಿ: ‘ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದ್ದು, ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ. ಈ ಕಾರಣದಿಂದ ಶಿಕ್ಷಕರು ಸದಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಎಚ್.ಎಸ್.ಪಾಟೀಲ ಪ್ರತಿಷ್ಠಾನ ಅಧ್ಯಕ್ಷ ಆನಂದಗೌಡ ಪಾಟೀಲ ತಿಳಿಸಿದರು.</p>.<p>ಕಸಾಪ ಘಟಕವು ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಕವಿತೆಗಳ ವಾಚನ-ಗಾಯನ ಕುರಿತ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೃಜನಶೀಲ ಶಿಕ್ಷಕರನ್ನು ಒಳಗೊಂಡಿರುವ ಶಾಲೆಗಳ ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸುಲಭವಾಗಿ ಸಾಧನೆ ಮಾಡುತ್ತಾರೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.</p>.<p>ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿ, ಮಕ್ಕಳಲ್ಲಿ ಸಹಜವಾಗಿ ಹಲವಾರು ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಕ್ಕಳು ವಿಶೇಷ ಸಾಧನೆ ಮಾಡಬಲ್ಲರು. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, ಮಕ್ಕಳ ಸೃಜಲಶೀಲತೆಯನ್ನು ಗುರುತಿಸಲು ಹಾಗೂ ಅದನ್ನು ಉತ್ತೇಜಿಸಲು ಪ್ರತಿವರ್ಷ ಕಸಾಪ ವತಿಯಿಂದ ಮಕ್ಕಳ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಗ್ರಾಮದ ಮುಖಂಡ ಬಸವರಾಜ ತಿಗರಿ ಮಾತನಾಡಿದರು. ಮಂಜುನಾಥ ಮುಧೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ನಿರ್ದೇಶಕ ನಿಂಗು ಸೊಲಗಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ ದಂಡಿನ, ಸಹದೇವಪ್ಪ ಡಂಬಳ, ದ್ವಾರಕೀಶ ರೆಡ್ಡಿ, ಗುರುಬಸವರಾಜ.ಆರ್.ಬಿ., ಜಯಶ್ರೀ ಅಳವಂಡಿ, ಶಿವು ವಾಲಿಕಾರ, ಶಂಕರ ಕೂಕನೂರ, ಬಿ.ಎಚ್.ಹಲವಾಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-23-2076833961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದ್ದು, ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ. ಈ ಕಾರಣದಿಂದ ಶಿಕ್ಷಕರು ಸದಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಎಚ್.ಎಸ್.ಪಾಟೀಲ ಪ್ರತಿಷ್ಠಾನ ಅಧ್ಯಕ್ಷ ಆನಂದಗೌಡ ಪಾಟೀಲ ತಿಳಿಸಿದರು.</p>.<p>ಕಸಾಪ ಘಟಕವು ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಕವಿತೆಗಳ ವಾಚನ-ಗಾಯನ ಕುರಿತ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೃಜನಶೀಲ ಶಿಕ್ಷಕರನ್ನು ಒಳಗೊಂಡಿರುವ ಶಾಲೆಗಳ ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸುಲಭವಾಗಿ ಸಾಧನೆ ಮಾಡುತ್ತಾರೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.</p>.<p>ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿ, ಮಕ್ಕಳಲ್ಲಿ ಸಹಜವಾಗಿ ಹಲವಾರು ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಕ್ಕಳು ವಿಶೇಷ ಸಾಧನೆ ಮಾಡಬಲ್ಲರು. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, ಮಕ್ಕಳ ಸೃಜಲಶೀಲತೆಯನ್ನು ಗುರುತಿಸಲು ಹಾಗೂ ಅದನ್ನು ಉತ್ತೇಜಿಸಲು ಪ್ರತಿವರ್ಷ ಕಸಾಪ ವತಿಯಿಂದ ಮಕ್ಕಳ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಗ್ರಾಮದ ಮುಖಂಡ ಬಸವರಾಜ ತಿಗರಿ ಮಾತನಾಡಿದರು. ಮಂಜುನಾಥ ಮುಧೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ನಿರ್ದೇಶಕ ನಿಂಗು ಸೊಲಗಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ ದಂಡಿನ, ಸಹದೇವಪ್ಪ ಡಂಬಳ, ದ್ವಾರಕೀಶ ರೆಡ್ಡಿ, ಗುರುಬಸವರಾಜ.ಆರ್.ಬಿ., ಜಯಶ್ರೀ ಅಳವಂಡಿ, ಶಿವು ವಾಲಿಕಾರ, ಶಂಕರ ಕೂಕನೂರ, ಬಿ.ಎಚ್.ಹಲವಾಗಲಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-23-2076833961</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>