<p>ಮುಂಡರಗಿ: ‘ಪದವಿ ಹಂತದ ಶಿಕ್ಷಣದಲ್ಲಿ ವಿಷಯಗಳ ಆಯ್ಕೆ ತುಂಬಾ ಮುಖ್ಯ. ಮುತುವರ್ಜಿ ವಹಿಸಬೇಕು’ ಎಂದು ವಿಶಾಲಾಕ್ಷಿ ಅಕ್ಕಿ ಸಲಹೆ ನೀಡಿದರು.</p>.<p>ಇಲ್ಲಿನ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಠ್ಯೇತರ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ವಿನಯ, ಸಂಸ್ಕಾರ, ಶಿಸ್ತು, ಸಂಯಮ ಸೇರಿದಂತೆ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರ, ವಿನಯತೆಯು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತವೆ’ ಎಂದು ತಿಳಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ವಿ. ಅರಳಿ ಮಾತನಾಡಿ, ‘ಇದು ಸ್ಪರ್ಧಾತ್ಮಕ ಯುಗ. ಎಲ್ಲದಕ್ಕೂ ಸ್ಪರ್ಧೆ ಎದುರಿಸಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಗುರಿ ತಲುಪುವವರೆಗೂ ಹೋರಾಡಬೇಕು. ಪಠ್ಯದೊಂದಿಗೆ ಎಲ್ಲ ವಿಷಯಗಳ ಜ್ಞಾನ ಪಡೆದುಕೊಳ್ಳುವುದು ಇಂದು ಅನಿವಾರ್ಯವಾಗಿದೆ’ ಎಂದು ಹೇಳಿದರು.</p>.<p>ಪ್ರಾಚಾರ್ಯೆ ಉಮಾ ಕೊಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆರ್.ಎಸ್. ಪಾಟೀಲ, ರುದ್ರಗೌಡ ಪಾಟೀಲ, ಅರುಣಕ್ಕ ಪಾಟೀಲ, ಹೇಮಂತಗೌಡ ಪಾಟೀಲ, ರಾಮು ಕಲಾಲ ಮಾತನಾಡಿದರು.</p>.<p>ಉಪನ್ಯಾಸಕರಾದ ಕಾವೇರಿ ಬೋಲಾ, ಜಗದೀಶ ಹುಲ್ಲೂರ, ಯಮುನ ನಾಯಕ, ಪ್ರಕಾಶ ಪೂಜಾರ, ಶ್ವೇತಾ ಇದ್ದರು.</p>.<p>ಉಪನ್ಯಾಸಕ ಎಂ.ಬಿ.ಬದನೆಕಾಯಿ ಸ್ವಾಗತಿಸಿದರು. ಸಂತೋಷ ಕಾಗನೂರ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-1773694868</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಡರಗಿ: ‘ಪದವಿ ಹಂತದ ಶಿಕ್ಷಣದಲ್ಲಿ ವಿಷಯಗಳ ಆಯ್ಕೆ ತುಂಬಾ ಮುಖ್ಯ. ಮುತುವರ್ಜಿ ವಹಿಸಬೇಕು’ ಎಂದು ವಿಶಾಲಾಕ್ಷಿ ಅಕ್ಕಿ ಸಲಹೆ ನೀಡಿದರು.</p>.<p>ಇಲ್ಲಿನ ಜಗದ್ಗುರು ತೋಂಟದಾರ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಠ್ಯೇತರ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ವಿನಯ, ಸಂಸ್ಕಾರ, ಶಿಸ್ತು, ಸಂಯಮ ಸೇರಿದಂತೆ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರ, ವಿನಯತೆಯು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತವೆ’ ಎಂದು ತಿಳಿಸಿದರು.</p>.<p>ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ವಿ. ಅರಳಿ ಮಾತನಾಡಿ, ‘ಇದು ಸ್ಪರ್ಧಾತ್ಮಕ ಯುಗ. ಎಲ್ಲದಕ್ಕೂ ಸ್ಪರ್ಧೆ ಎದುರಿಸಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಗುರಿ ತಲುಪುವವರೆಗೂ ಹೋರಾಡಬೇಕು. ಪಠ್ಯದೊಂದಿಗೆ ಎಲ್ಲ ವಿಷಯಗಳ ಜ್ಞಾನ ಪಡೆದುಕೊಳ್ಳುವುದು ಇಂದು ಅನಿವಾರ್ಯವಾಗಿದೆ’ ಎಂದು ಹೇಳಿದರು.</p>.<p>ಪ್ರಾಚಾರ್ಯೆ ಉಮಾ ಕೊಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆರ್.ಎಸ್. ಪಾಟೀಲ, ರುದ್ರಗೌಡ ಪಾಟೀಲ, ಅರುಣಕ್ಕ ಪಾಟೀಲ, ಹೇಮಂತಗೌಡ ಪಾಟೀಲ, ರಾಮು ಕಲಾಲ ಮಾತನಾಡಿದರು.</p>.<p>ಉಪನ್ಯಾಸಕರಾದ ಕಾವೇರಿ ಬೋಲಾ, ಜಗದೀಶ ಹುಲ್ಲೂರ, ಯಮುನ ನಾಯಕ, ಪ್ರಕಾಶ ಪೂಜಾರ, ಶ್ವೇತಾ ಇದ್ದರು.</p>.<p>ಉಪನ್ಯಾಸಕ ಎಂ.ಬಿ.ಬದನೆಕಾಯಿ ಸ್ವಾಗತಿಸಿದರು. ಸಂತೋಷ ಕಾಗನೂರ ಕಾರ್ಯಕ್ರಮ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-1773694868</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>