<p>ಮೈಸೂರು: ‘ಕೃತಕ ಬುದ್ಧಿಮತ್ತೆಯು (ಎಐ) ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಪರಿವರ್ತಿಸುವ ಅಪಾರ ಸಾಮರ್ಥ್ಯ ಹೊಂದಿದೆ’ ಎಂದು ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಪ್ರೊ–ಚಾನ್ಸಲರ್ ಬಿ.ಸುರೇಶ್ ಹೇಳಿದರು.</p>.<p>ಇಲ್ಲಿನ ಜೆಎಸ್ಎಸ್ ತಾಂತ್ರಿಕ ಸಂಸ್ಥೆ ಆವರಣದಲ್ಲಿ ಜೆಎಸ್ಎಸ್ ವಿಜ್ಞಾನಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಹಾಗೂ ಕರ್ನಾಟಕದ ಮಾಜಿ ಕುಲಪತಿಗಳ ವೇದಿಕೆಯಿಂದ ಈಚೆಗೆ ನಡೆದ ‘ಕೃತಕ ಬುದ್ಧಿಮತ್ತೆಯ ಮೂಲಕ ಭಾರತದಲ್ಲಿ ಉನ್ನತ ಶಿಕ್ಷಣದ ಪುನರ್ಕಲ್ಪನೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಬೋಧನೆ, ಕಲಿಕಾ ವಿಧಾನಗಳ ಸುಧಾರಣೆ, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ, ವೈಯಕ್ತಿಕ ಕಲಿಕಾ ಅನುಭವ ಒದಗಿಸುವುದು ಹಾಗೂ ದತ್ತಾಂಶ ಆಧಾರಿತ ಶೈಕ್ಷಣಿಕ ನಿರ್ಧಾರಗಳಲ್ಲಿ ಎಐ ನೆರವಾಗುತ್ತದೆ. ಎಐ ಅನ್ನು ವಿಶ್ವವಿದ್ಯಾಲಯದ ನೀತಿಗಳು, ಆಡಳಿತ ವ್ಯವಸ್ಥೆ, ಪಠ್ಯಕ್ರಮ, ಸಂಶೋಧನೆ ಹಾಗೂ ನಿರ್ವಹಣೆಯೊಂದಿಗೆ ಸಂಯೋಜಿಸಬೇಕಿದೆ’ ಎಂದರು.</p>.<p>ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸಿದ 40ಕ್ಕೂ ಹೆಚ್ಚು ಮಾಜಿ ಕುಲಪತಿಗಳು, ಶಿಕ್ಷಣ ತಜ್ಞರು, ಶೈಕ್ಷಣಿಕ ನಾಯಕರು, ಕೈಗಾರಿಕಾ ವಲಯದ ಪರಿಣತರು, ಸಂಶೋಧಕರು ಹಾಗೂ ನೀತಿ ನಿರೂಪಕರು ಚರ್ಚೆ ನಡೆಸಿದರು.</p>.<p>ಕುಲಪತಿ ಎ.ಎನ್.ಸಂತೋಷ್ ಕುಮಾರ್, ಆರ್ಮ್ ಹೋಲ್ಡಿಂಗ್ ಸಂಸ್ಥೆ ಪ್ರತಿನಿಧಿ ಜಯಕುಮಾರ್ ಸಿಂಗಾರಂ ಹಾಗೂ ಅಧ್ಯಕ್ಷತೆ ವಹಿಸಿದ್ದ ವೇದಿಕೆ ಅಧ್ಯಕ್ಷ ಎಸ್.ಚಂದ್ರಶೇಖರ ಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-39-2101893186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕೃತಕ ಬುದ್ಧಿಮತ್ತೆಯು (ಎಐ) ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಪರಿವರ್ತಿಸುವ ಅಪಾರ ಸಾಮರ್ಥ್ಯ ಹೊಂದಿದೆ’ ಎಂದು ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಪ್ರೊ–ಚಾನ್ಸಲರ್ ಬಿ.ಸುರೇಶ್ ಹೇಳಿದರು.</p>.<p>ಇಲ್ಲಿನ ಜೆಎಸ್ಎಸ್ ತಾಂತ್ರಿಕ ಸಂಸ್ಥೆ ಆವರಣದಲ್ಲಿ ಜೆಎಸ್ಎಸ್ ವಿಜ್ಞಾನಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯಹಾಗೂ ಕರ್ನಾಟಕದ ಮಾಜಿ ಕುಲಪತಿಗಳ ವೇದಿಕೆಯಿಂದ ಈಚೆಗೆ ನಡೆದ ‘ಕೃತಕ ಬುದ್ಧಿಮತ್ತೆಯ ಮೂಲಕ ಭಾರತದಲ್ಲಿ ಉನ್ನತ ಶಿಕ್ಷಣದ ಪುನರ್ಕಲ್ಪನೆ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಬೋಧನೆ, ಕಲಿಕಾ ವಿಧಾನಗಳ ಸುಧಾರಣೆ, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆ, ವೈಯಕ್ತಿಕ ಕಲಿಕಾ ಅನುಭವ ಒದಗಿಸುವುದು ಹಾಗೂ ದತ್ತಾಂಶ ಆಧಾರಿತ ಶೈಕ್ಷಣಿಕ ನಿರ್ಧಾರಗಳಲ್ಲಿ ಎಐ ನೆರವಾಗುತ್ತದೆ. ಎಐ ಅನ್ನು ವಿಶ್ವವಿದ್ಯಾಲಯದ ನೀತಿಗಳು, ಆಡಳಿತ ವ್ಯವಸ್ಥೆ, ಪಠ್ಯಕ್ರಮ, ಸಂಶೋಧನೆ ಹಾಗೂ ನಿರ್ವಹಣೆಯೊಂದಿಗೆ ಸಂಯೋಜಿಸಬೇಕಿದೆ’ ಎಂದರು.</p>.<p>ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸಿದ 40ಕ್ಕೂ ಹೆಚ್ಚು ಮಾಜಿ ಕುಲಪತಿಗಳು, ಶಿಕ್ಷಣ ತಜ್ಞರು, ಶೈಕ್ಷಣಿಕ ನಾಯಕರು, ಕೈಗಾರಿಕಾ ವಲಯದ ಪರಿಣತರು, ಸಂಶೋಧಕರು ಹಾಗೂ ನೀತಿ ನಿರೂಪಕರು ಚರ್ಚೆ ನಡೆಸಿದರು.</p>.<p>ಕುಲಪತಿ ಎ.ಎನ್.ಸಂತೋಷ್ ಕುಮಾರ್, ಆರ್ಮ್ ಹೋಲ್ಡಿಂಗ್ ಸಂಸ್ಥೆ ಪ್ರತಿನಿಧಿ ಜಯಕುಮಾರ್ ಸಿಂಗಾರಂ ಹಾಗೂ ಅಧ್ಯಕ್ಷತೆ ವಹಿಸಿದ್ದ ವೇದಿಕೆ ಅಧ್ಯಕ್ಷ ಎಸ್.ಚಂದ್ರಶೇಖರ ಶೆಟ್ಟಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-39-2101893186</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>