<p>ಮೈಸೂರು: ‘ಅಂಬೇಡ್ಕರ್ ವಿಚಾರಧಾರೆ ದೇಶದ ದೊಡ್ಡ ಶಕ್ತಿಯಾಗಿದ್ದು, ಅವರ ಹೆಸರಿನಲ್ಲಿ ನಾವೆಲ್ಲರೂ ಸಂಘಟಿತರಾಗಿ ಭಾರತವನ್ನು ಭೀಮ ದೇಶವನ್ನಾಗಿ ಮಾಡಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ತಿಳಿಸಿದರು.</p>.<p>ಇಲ್ಲಿನ ವಿಜಯನಗರ 3ನೇ ಹಂತದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ನಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ಜ್ಞಾನೋತ್ಸವ’ ಉದ್ಘಾಟಿಸಿ ಮಾತನಾಡಿದರು.</p>.<p>‘ಅಂಬೇಡ್ಕರ್ ನೊಂದವರ ಅಸ್ಮಿತೆ. ಜ್ಞಾನವನ್ನು ದೇಶಕ್ಕಾಗಿ ಧಾರೆ ಎರೆದರು. ಸಮಾಜ ಕಲ್ಯಾಣ ಇಲಾಖೆಯು ಅಂಬೇಡ್ಕರ್ ತತ್ವಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸುತ್ತಿದೆ. ಜನರು ಅವರ ಆಶಯ ಈಡೇರಿಸಲು ಶ್ರಮಿಸಬೇಕು’ ಎಂದರು.</p>.<p>ಅಹಿಂದ ಮುಖಂಡ ಜವರಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜದಲ್ಲಿರುವ ಮೌಢ್ಯ, ಕಂದಾಚಾರಗಳನ್ನು ಧಿಕ್ಕರಿಸಿ ವೈಜ್ಞಾನಿಕವಾಗಿ ಚಿಂತನೆ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಬೇಕು’ ಎಂದು ಹೇಳಿದರು.</p>.<p>ಚಿಂತಕ ಸುರೇಶ್ ಗೌತಮ್, ಎ.ಎಸ್.ಜನಾರ್ಧನ್, ಅಬಕಾರಿ ಇನ್ಸ್ಪೆಕ್ಟರ್ ಪಿ.ರಾಘವೇಂದ್ರ, ನಿಲಯಪಾಲಕ ಪ್ರದೀಪ್ ಕೆ.ಎ.ಎಸ್, ಮಹೇಶ್ ಕೆ., ಕಾರ್ತಿಕ್, ಚಿಕ್ಕೀರಯ್ಯಾ, ರಾಜೇಶ್ವರಿ, ಚಂದ್ರಮ್ಮ, ಮಹೇಶ್, ಶಿವಮಲ್ಲಯ್ಯ, ಗುರುಪ್ರಸಾದ್, ಮಹಾಂತೇಶ್ ಮಾಟೋಳಿ, ಜಗದೀಶ್, ಮಹೇಶ್, ಚೇತನ್ದೊಡ್ಡಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-1171252856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಅಂಬೇಡ್ಕರ್ ವಿಚಾರಧಾರೆ ದೇಶದ ದೊಡ್ಡ ಶಕ್ತಿಯಾಗಿದ್ದು, ಅವರ ಹೆಸರಿನಲ್ಲಿ ನಾವೆಲ್ಲರೂ ಸಂಘಟಿತರಾಗಿ ಭಾರತವನ್ನು ಭೀಮ ದೇಶವನ್ನಾಗಿ ಮಾಡಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ತಿಳಿಸಿದರು.</p>.<p>ಇಲ್ಲಿನ ವಿಜಯನಗರ 3ನೇ ಹಂತದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ನಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ಜ್ಞಾನೋತ್ಸವ’ ಉದ್ಘಾಟಿಸಿ ಮಾತನಾಡಿದರು.</p>.<p>‘ಅಂಬೇಡ್ಕರ್ ನೊಂದವರ ಅಸ್ಮಿತೆ. ಜ್ಞಾನವನ್ನು ದೇಶಕ್ಕಾಗಿ ಧಾರೆ ಎರೆದರು. ಸಮಾಜ ಕಲ್ಯಾಣ ಇಲಾಖೆಯು ಅಂಬೇಡ್ಕರ್ ತತ್ವಗಳನ್ನು ಚಾಚೂ ತಪ್ಪದೆ ಅನುಷ್ಠಾನಗೊಳಿಸುತ್ತಿದೆ. ಜನರು ಅವರ ಆಶಯ ಈಡೇರಿಸಲು ಶ್ರಮಿಸಬೇಕು’ ಎಂದರು.</p>.<p>ಅಹಿಂದ ಮುಖಂಡ ಜವರಪ್ಪ ಮಾತನಾಡಿ, ‘ವಿದ್ಯಾರ್ಥಿಗಳು ಸಮಾಜದಲ್ಲಿರುವ ಮೌಢ್ಯ, ಕಂದಾಚಾರಗಳನ್ನು ಧಿಕ್ಕರಿಸಿ ವೈಜ್ಞಾನಿಕವಾಗಿ ಚಿಂತನೆ ಮಾಡಬೇಕು. ಸಮಾಜದಲ್ಲಿರುವ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಬೇಕು’ ಎಂದು ಹೇಳಿದರು.</p>.<p>ಚಿಂತಕ ಸುರೇಶ್ ಗೌತಮ್, ಎ.ಎಸ್.ಜನಾರ್ಧನ್, ಅಬಕಾರಿ ಇನ್ಸ್ಪೆಕ್ಟರ್ ಪಿ.ರಾಘವೇಂದ್ರ, ನಿಲಯಪಾಲಕ ಪ್ರದೀಪ್ ಕೆ.ಎ.ಎಸ್, ಮಹೇಶ್ ಕೆ., ಕಾರ್ತಿಕ್, ಚಿಕ್ಕೀರಯ್ಯಾ, ರಾಜೇಶ್ವರಿ, ಚಂದ್ರಮ್ಮ, ಮಹೇಶ್, ಶಿವಮಲ್ಲಯ್ಯ, ಗುರುಪ್ರಸಾದ್, ಮಹಾಂತೇಶ್ ಮಾಟೋಳಿ, ಜಗದೀಶ್, ಮಹೇಶ್, ಚೇತನ್ದೊಡ್ಡಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-1171252856</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>