<p>ಮೈಸೂರು: ‘ಶಿಕ್ಷಣದಿಂದ ಸ್ವಾರ್ಥ ಮನೋಭಾವ ದೂರಾಗಿ ನಾವು, ನಮ್ಮದು, ನಮ್ಮ ಸಮಾಜ ಎಂಬ ಭಾವನಾತ್ಮಕ ಬದುಕು ನೆಲೆಯೂರಬೇಕು’ ಎಂದು ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಮಾನಂದವಾಡಿ ರಸ್ತೆಯಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ (ಎನ್ಐಇ) ಕಾಲೇಜಿನ ಸಭಾಂಗಣದಲ್ಲಿ ಗುರುವಾರ ‘ಟೆಕ್ನಿಕ್ಸ್-2026’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ ಇಂದಿನ ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವುದೇ ಸವಾಲು. ದೈಹಿಕ ಆರೋಗ್ಯಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಪೂರಕ’ ಎಂದರು.</p>.<p>ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ‘ ವಿದ್ಯಾರ್ಥಿಗಳು ವಿನಯದಿಂದ ಬದುಕಿದರೆ ವಿದ್ಯೆ ನಮ್ಮನ್ನು ಎತ್ತರಕ್ಕೆ ಕರೆದೊಯ್ಯುತ್ತದೆ. ವಿದ್ಯೆ ನಮ್ಮ ಸಂಗಾತಿ ಇದ್ದಂತೆ’ ಎಂದರು.</p>.<p>ಶಾಸಕ ಜಿ.ಡಿ. ಹರೀಶ್ ಗೌಡ, ಇಸ್ಕಾನ್ ಕಾರ್ಯಕಾರಿ ಸಮಿತಿ ಸದಸ್ಯ ಸೌಮ್ಯರೂಪ ಕೃಷ್ಣ ದಾಸ್ ವಾತನಾಡಿದರು. ಸಿಐಎಸ್ಸಿಒನ ಸ್ವಪ್ನಾ ಜಾಧವ್, ಅನ್ನೊವ ಸಲ್ಯೂಷನ್ ಇಂಡಿಯಾದ ಉಪಾಧ್ಯಕ್ಷ ಎಂ.ಕಿರಣ್, ಎನ್ಐಇ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಎಂ.ಎಸ್.ರಂಗನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1557701302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಶಿಕ್ಷಣದಿಂದ ಸ್ವಾರ್ಥ ಮನೋಭಾವ ದೂರಾಗಿ ನಾವು, ನಮ್ಮದು, ನಮ್ಮ ಸಮಾಜ ಎಂಬ ಭಾವನಾತ್ಮಕ ಬದುಕು ನೆಲೆಯೂರಬೇಕು’ ಎಂದು ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ಮಾನಂದವಾಡಿ ರಸ್ತೆಯಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ (ಎನ್ಐಇ) ಕಾಲೇಜಿನ ಸಭಾಂಗಣದಲ್ಲಿ ಗುರುವಾರ ‘ಟೆಕ್ನಿಕ್ಸ್-2026’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ ಇಂದಿನ ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದುವುದೇ ಸವಾಲು. ದೈಹಿಕ ಆರೋಗ್ಯಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಪೂರಕ’ ಎಂದರು.</p>.<p>ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ‘ ವಿದ್ಯಾರ್ಥಿಗಳು ವಿನಯದಿಂದ ಬದುಕಿದರೆ ವಿದ್ಯೆ ನಮ್ಮನ್ನು ಎತ್ತರಕ್ಕೆ ಕರೆದೊಯ್ಯುತ್ತದೆ. ವಿದ್ಯೆ ನಮ್ಮ ಸಂಗಾತಿ ಇದ್ದಂತೆ’ ಎಂದರು.</p>.<p>ಶಾಸಕ ಜಿ.ಡಿ. ಹರೀಶ್ ಗೌಡ, ಇಸ್ಕಾನ್ ಕಾರ್ಯಕಾರಿ ಸಮಿತಿ ಸದಸ್ಯ ಸೌಮ್ಯರೂಪ ಕೃಷ್ಣ ದಾಸ್ ವಾತನಾಡಿದರು. ಸಿಐಎಸ್ಸಿಒನ ಸ್ವಪ್ನಾ ಜಾಧವ್, ಅನ್ನೊವ ಸಲ್ಯೂಷನ್ ಇಂಡಿಯಾದ ಉಪಾಧ್ಯಕ್ಷ ಎಂ.ಕಿರಣ್, ಎನ್ಐಇ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಎಂ.ಎಸ್.ರಂಗನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-39-1557701302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>