<p>ಮೈಸೂರು: ‘ಶಿಕ್ಷಣ ಎಂಬುದು ಕೇವಲ ಬದುಕಿನ ದಾರಿಯಲ್ಲ, ಶೋಷಣೆಯ ಸರಪಳಿಯನ್ನು ಮುರಿಯುವ ಶಕ್ತಿಯುತ ಆಯುಧ’ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ. ಆನಂದ್ ಹೇಳಿದರು.</p>.<p>ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣವಿಲ್ಲದ ಜೀವನ ಶೋಷಣೆಯ ಮೂಲ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದರು. ದಲಿತ ಮತ್ತು ಶೋಷಿತ ಸಮುದಾಯಗಳ ಮನಸ್ಸನ್ನು ನಿಯಂತ್ರಿಸುವ ಯತ್ನಗಳಿಗೆ ನಾವು ಅವಕಾಶ ನೀಡಬಾರದು. ಇಂತಹ ಮಾನಸಿಕ ಬಂಧನಗಳಿಂದ ಹೊರಬರಲು ಜ್ಞಾನವೃದ್ಧಿಯೇ ಏಕೈಕ ಮಾರ್ಗ’ ಎಂದರು.</p>.<p>‘ಸರ್ಕಾರ ನೀಡುವ ಶೈಕ್ಷಣಿಕ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಹಾಗೂ ಕುತೂಹಲವನ್ನು ಬೆಳೆಸಿಕೊಂಡಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ’ ಎಂದರು.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಮಹದೇವ ಮೂರ್ತಿ, ಆಡಳಿತಾಧಿಕಾರಿ ಪ್ರೊ. ಎಚ್.ಎಸ್. ಜಯಂತ್ ಹಾಗೂ ಜ್ಞಾನವಾಹಿನಿ ಸಂಚಾಲಕ ಸಿ.ಡಿ. ಪರಶುರಾಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-39-306318667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಶಿಕ್ಷಣ ಎಂಬುದು ಕೇವಲ ಬದುಕಿನ ದಾರಿಯಲ್ಲ, ಶೋಷಣೆಯ ಸರಪಳಿಯನ್ನು ಮುರಿಯುವ ಶಕ್ತಿಯುತ ಆಯುಧ’ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ. ಆನಂದ್ ಹೇಳಿದರು.</p>.<p>ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಿಕ್ಷಣವಿಲ್ಲದ ಜೀವನ ಶೋಷಣೆಯ ಮೂಲ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದರು. ದಲಿತ ಮತ್ತು ಶೋಷಿತ ಸಮುದಾಯಗಳ ಮನಸ್ಸನ್ನು ನಿಯಂತ್ರಿಸುವ ಯತ್ನಗಳಿಗೆ ನಾವು ಅವಕಾಶ ನೀಡಬಾರದು. ಇಂತಹ ಮಾನಸಿಕ ಬಂಧನಗಳಿಂದ ಹೊರಬರಲು ಜ್ಞಾನವೃದ್ಧಿಯೇ ಏಕೈಕ ಮಾರ್ಗ’ ಎಂದರು.</p>.<p>‘ಸರ್ಕಾರ ನೀಡುವ ಶೈಕ್ಷಣಿಕ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಹಾಗೂ ಕುತೂಹಲವನ್ನು ಬೆಳೆಸಿಕೊಂಡಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ’ ಎಂದರು.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಮಹದೇವ ಮೂರ್ತಿ, ಆಡಳಿತಾಧಿಕಾರಿ ಪ್ರೊ. ಎಚ್.ಎಸ್. ಜಯಂತ್ ಹಾಗೂ ಜ್ಞಾನವಾಹಿನಿ ಸಂಚಾಲಕ ಸಿ.ಡಿ. ಪರಶುರಾಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-39-306318667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>