<p>ಮೈಸೂರು: ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಮೇ 20ರಂದು ಹೊರಡಿಸಿದ್ದ ಕಚೇರಿ ಸೂಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.</p>.<p>‘ಮೇ 21ರಂದು ನಡೆಯುವ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಪ್ರಥಮ ವರ್ಷದ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಪ್ಪಿದ್ದಲ್ಲಿ ಸಿ–3 ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ’ ಎಂದು ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ಷಿ ಸುತ್ತೋಲೆ ಹೊರಡಿಸಿದ್ದರು.</p>.<p>‘ಯುಜಿಸಿ, ವಿಶ್ವವಿದ್ಯಾಲಯದ ನಿಯಮಾವಳಿಯಲ್ಲಿ ಅವಕಾಶವಿದೆಯೇ? ವಿದ್ಯಾರ್ಥಿಗಳನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಇದು ಸರ್ವಾಧಿಕಾರದ ಧೋರಣೆ’ ಎಂದು ಆಕ್ಷೇಪ ವ್ಯಕ್ತಪಡಿಸಿ ಲೇಖಕ ಹಾರೋಹಳ್ಳಿ ರವೀಂದ್ರ ‘ಫೇಸ್ಬುಕ್’ ಖಾತೆಯಲ್ಲಿ ಬರೆದುಕೊಂಡಿದ್ದು, ಅದಕ್ಕೆ ವಿದ್ಯಾರ್ಥಿಗಳು, ನಾಗರಿಕರು ಬೆಂಬಲಿಸಿದ್ದಾರೆ. ಸಂಸ್ಥೆಯ ನಡೆಯನ್ನು ಪ್ರಶ್ನಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-39-1424056016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಮೇ 20ರಂದು ಹೊರಡಿಸಿದ್ದ ಕಚೇರಿ ಸೂಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.</p>.<p>‘ಮೇ 21ರಂದು ನಡೆಯುವ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಪ್ರಥಮ ವರ್ಷದ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಪ್ಪಿದ್ದಲ್ಲಿ ಸಿ–3 ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ’ ಎಂದು ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ಷಿ ಸುತ್ತೋಲೆ ಹೊರಡಿಸಿದ್ದರು.</p>.<p>‘ಯುಜಿಸಿ, ವಿಶ್ವವಿದ್ಯಾಲಯದ ನಿಯಮಾವಳಿಯಲ್ಲಿ ಅವಕಾಶವಿದೆಯೇ? ವಿದ್ಯಾರ್ಥಿಗಳನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಇದು ಸರ್ವಾಧಿಕಾರದ ಧೋರಣೆ’ ಎಂದು ಆಕ್ಷೇಪ ವ್ಯಕ್ತಪಡಿಸಿ ಲೇಖಕ ಹಾರೋಹಳ್ಳಿ ರವೀಂದ್ರ ‘ಫೇಸ್ಬುಕ್’ ಖಾತೆಯಲ್ಲಿ ಬರೆದುಕೊಂಡಿದ್ದು, ಅದಕ್ಕೆ ವಿದ್ಯಾರ್ಥಿಗಳು, ನಾಗರಿಕರು ಬೆಂಬಲಿಸಿದ್ದಾರೆ. ಸಂಸ್ಥೆಯ ನಡೆಯನ್ನು ಪ್ರಶ್ನಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-39-1424056016</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>