<p>ಮೈಸೂರು: ‘ವೃತ್ತಿಪರ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಾದ ‘ನೀಟ್’ ಈಗ ಗೊಂದಲದ ಗೂಡಾಗಿದೆ. ರಾಷ್ಟ್ರೀಯ ಮಟ್ಟದ ಪ್ರಮುಖ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜ್ಯಗಳು ಒಟ್ಟಾಗಿ ಧ್ವನಿ ಎತ್ತಬೇಕು’ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ವಿಧಾನಮಂಡಲ ವಿಶೇಷ ಅಧಿವೇಶನ ಕರೆದು ಕೇಂದ್ರದ ವೈಫಲ್ಯ ಕುರಿತು ಆಕ್ಷೇಪ ದಾಖಲಿಸಬೇಕು. ಅಲ್ಲದೆ ಈ ಹಿಂದಿನಂತೆಯೇ ರಾಜ್ಯ ವ್ಯಾಪ್ತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ವೈದ್ಯಕೀಯ ಸೇರಿ ಇತರೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅವಕಾಶ ನೀಡುವ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಂಡು ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ, ಡಿಸಿಎಂ ಮತ್ತು ಹಿರಿಯ ಸಚಿವರು, ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯವನ್ನು ರಾಷ್ಟ್ರಪತಿ ಅವರಿಗೆ ಮನವರಿಕೆ ಮಾಡಿಕೊಟ್ಟು, ‘ನೀಟ್’ ಬದಲು ಸಿಇಟಿ ಮೂಲಕ ವೈದ್ಯಕೀಯ ಕೋರ್ಸ್ ಪ್ರವೇಶ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಮರಳಿಸುವ ಅನಿವಾರ್ಯ ಈಗ ಸೃಷ್ಟಿಯಾಗಿದೆ’ ಎಂದು ಹೇಳಿದ್ದಾರೆ.</p>.<p>‘ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಮಿಳುನಾಡು, ಕೇರಳಂ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಮತ್ತು ಹಕ್ಕು ಕಾಪಾಡಿಕೊಳ್ಳಲು ಮುಂದಾಗಬೇಕು’ ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-39-1142382448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ವೃತ್ತಿಪರ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಾದ ‘ನೀಟ್’ ಈಗ ಗೊಂದಲದ ಗೂಡಾಗಿದೆ. ರಾಷ್ಟ್ರೀಯ ಮಟ್ಟದ ಪ್ರಮುಖ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜ್ಯಗಳು ಒಟ್ಟಾಗಿ ಧ್ವನಿ ಎತ್ತಬೇಕು’ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ವಿಧಾನಮಂಡಲ ವಿಶೇಷ ಅಧಿವೇಶನ ಕರೆದು ಕೇಂದ್ರದ ವೈಫಲ್ಯ ಕುರಿತು ಆಕ್ಷೇಪ ದಾಖಲಿಸಬೇಕು. ಅಲ್ಲದೆ ಈ ಹಿಂದಿನಂತೆಯೇ ರಾಜ್ಯ ವ್ಯಾಪ್ತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ವೈದ್ಯಕೀಯ ಸೇರಿ ಇತರೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅವಕಾಶ ನೀಡುವ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಂಡು ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಮುಖ್ಯಮಂತ್ರಿ, ಡಿಸಿಎಂ ಮತ್ತು ಹಿರಿಯ ಸಚಿವರು, ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯವನ್ನು ರಾಷ್ಟ್ರಪತಿ ಅವರಿಗೆ ಮನವರಿಕೆ ಮಾಡಿಕೊಟ್ಟು, ‘ನೀಟ್’ ಬದಲು ಸಿಇಟಿ ಮೂಲಕ ವೈದ್ಯಕೀಯ ಕೋರ್ಸ್ ಪ್ರವೇಶ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಮರಳಿಸುವ ಅನಿವಾರ್ಯ ಈಗ ಸೃಷ್ಟಿಯಾಗಿದೆ’ ಎಂದು ಹೇಳಿದ್ದಾರೆ.</p>.<p>‘ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಮಿಳುನಾಡು, ಕೇರಳಂ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಮತ್ತು ಹಕ್ಕು ಕಾಪಾಡಿಕೊಳ್ಳಲು ಮುಂದಾಗಬೇಕು’ ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-39-1142382448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>