<p>ಮೈಸೂರು: ಸಂಶೋಧನೆಗಳಿಂದ ಹೊಸ ಉದ್ಯಮ ಹಾಗೂ ಉದ್ಯೋಗ ಅವಕಾಶಗಳ ಸೃಷ್ಟಿ ಸಾಧ್ಯವಿದೆ ಎಂದು ಸಿಎಫ್ಟಿಆರ್ಐ ನಿರ್ದೇಶಕ ಗಿರಿಧರ್ ಪರ್ವತಂ ಅಭಿಪ್ರಾಯಪಟ್ಟರು.</p>.<p>ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದವಿಲಾಸ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ಸ್ನಾತಕೋತ್ತರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಅಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಹೊಸ ಸಂಶೋಧನೆಗಳಿಂದ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ದೇಶದ ಉತ್ಪಾದನಾ ಸಾಮರ್ಥ್ಯವೂ ವೃದ್ಧಿಯಾಗುತ್ತದೆ’ ಎಂದರು.</p>.<p>‘ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ದೇಶದ ಒಂದು ಮೌಲ್ಯಯುತ ಆಸ್ತಿಯನ್ನಾಗಿ ರೂಪಿಸಲು ಸಾಧ್ಯವಿದೆ’ ಎಂದು ಹೇಳಿದರು.</p>.<p>‘ಬೆಳವಣಿಗೆಯ ಹೆಸರಿನಲ್ಲಿ ರಾಸಾಯನಿಕ ಮತ್ತು ಔಷಧಗಳನ್ನು ಹೆಚ್ಚಾಗಿ ಬಳಸಿ ಪರಿಸರವನ್ನು ಹಾಳು ಮಾಡುವುದಲ್ಲದೆ, ಅದರಿಂದ ಬೆಳೆಯುವ ತರಕಾರಿ, ಧಾನ್ಯಗಳನ್ನು ತಿಂದು ನಾವು ಕೂಡ ರೋಗ ಪೀಡಿತರಾಗುತ್ತಿದ್ದೇವೆ. ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ’ ಎಂದರು.</p>.<p>‘ಜೀವ ವೈವಿಧ್ಯತೆಯ ಜತೆಗೆ ಪರಿಸರದ ಸಂಪನ್ಮೂಲಗಳು ನಾಶವಾಗುತ್ತಿವೆ. ಅವುಗಳನ್ನು ಪುನರ್ ಬಳಕೆ ಮಾಡಬಹುದಾದ ಸಂಪನ್ಮೂಲಗಳನ್ನು ಹೆಚ್ಚು ಬಳಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಶಾರದವಿಲಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಂ. ಸುಬ್ರಾಯ, ಆಡಳಿತ ಮಂಡಳಿ ಸದಸ್ಯ ಎಸ್.ಎಲ್. ರಾಮಚಂದ್ರ, ಪ್ರಾಂಶುಪಾಲೆ ಎಂ. ದೇವಿಕಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-39-1500929191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಸಂಶೋಧನೆಗಳಿಂದ ಹೊಸ ಉದ್ಯಮ ಹಾಗೂ ಉದ್ಯೋಗ ಅವಕಾಶಗಳ ಸೃಷ್ಟಿ ಸಾಧ್ಯವಿದೆ ಎಂದು ಸಿಎಫ್ಟಿಆರ್ಐ ನಿರ್ದೇಶಕ ಗಿರಿಧರ್ ಪರ್ವತಂ ಅಭಿಪ್ರಾಯಪಟ್ಟರು.</p>.<p>ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದವಿಲಾಸ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ಸ್ನಾತಕೋತ್ತರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಅಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಹೊಸ ಸಂಶೋಧನೆಗಳಿಂದ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ದೇಶದ ಉತ್ಪಾದನಾ ಸಾಮರ್ಥ್ಯವೂ ವೃದ್ಧಿಯಾಗುತ್ತದೆ’ ಎಂದರು.</p>.<p>‘ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ದೇಶದ ಒಂದು ಮೌಲ್ಯಯುತ ಆಸ್ತಿಯನ್ನಾಗಿ ರೂಪಿಸಲು ಸಾಧ್ಯವಿದೆ’ ಎಂದು ಹೇಳಿದರು.</p>.<p>‘ಬೆಳವಣಿಗೆಯ ಹೆಸರಿನಲ್ಲಿ ರಾಸಾಯನಿಕ ಮತ್ತು ಔಷಧಗಳನ್ನು ಹೆಚ್ಚಾಗಿ ಬಳಸಿ ಪರಿಸರವನ್ನು ಹಾಳು ಮಾಡುವುದಲ್ಲದೆ, ಅದರಿಂದ ಬೆಳೆಯುವ ತರಕಾರಿ, ಧಾನ್ಯಗಳನ್ನು ತಿಂದು ನಾವು ಕೂಡ ರೋಗ ಪೀಡಿತರಾಗುತ್ತಿದ್ದೇವೆ. ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ’ ಎಂದರು.</p>.<p>‘ಜೀವ ವೈವಿಧ್ಯತೆಯ ಜತೆಗೆ ಪರಿಸರದ ಸಂಪನ್ಮೂಲಗಳು ನಾಶವಾಗುತ್ತಿವೆ. ಅವುಗಳನ್ನು ಪುನರ್ ಬಳಕೆ ಮಾಡಬಹುದಾದ ಸಂಪನ್ಮೂಲಗಳನ್ನು ಹೆಚ್ಚು ಬಳಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>ಶಾರದವಿಲಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಂ. ಸುಬ್ರಾಯ, ಆಡಳಿತ ಮಂಡಳಿ ಸದಸ್ಯ ಎಸ್.ಎಲ್. ರಾಮಚಂದ್ರ, ಪ್ರಾಂಶುಪಾಲೆ ಎಂ. ದೇವಿಕಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-39-1500929191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>