<p>ಮೈಸೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.</p>.<p>ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ದೇವದಾಸಿಯರು, ಅಂಗವೈಕಲ್ಯ ಹೊಂದಿರುವವರು ಮಕ್ಕಳು, ಕೋವಿಡ್-19 ಮೊದಲಾದವುಗಳಿಂದ ತಂದೆ-ತಾಯಿ ಕಳೆದುಕೊಂಡವರು, ಮಾಜಿ ಸೈನಿಕರ ಮಕ್ಕಳು, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲದಿಂದ ಆತ್ಮಹತ್ಯೆಗೆ ಮಾಡಿಕೊಂಡವರ ಮಕ್ಕಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-1431607694</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.</p>.<p>ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ದೇವದಾಸಿಯರು, ಅಂಗವೈಕಲ್ಯ ಹೊಂದಿರುವವರು ಮಕ್ಕಳು, ಕೋವಿಡ್-19 ಮೊದಲಾದವುಗಳಿಂದ ತಂದೆ-ತಾಯಿ ಕಳೆದುಕೊಂಡವರು, ಮಾಜಿ ಸೈನಿಕರ ಮಕ್ಕಳು, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲದಿಂದ ಆತ್ಮಹತ್ಯೆಗೆ ಮಾಡಿಕೊಂಡವರ ಮಕ್ಕಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-1431607694</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>