<p>ತಿ.ನರಸೀಪುರ: ‘ವಿದ್ಯಾರ್ಥಿಗಳು ಸೇವಾ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು’ ಎಂದು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಬೋಧಕ ಎಂ.ಕ್ರಾಂತಿರಾಜ್ ಒಡೆಯರ್ ಹೇಳಿದರು</p>.<p>ತಾಲ್ಲೂಕಿನ ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಶೈಕ್ಷಣಿಕ ಸಾಧನೆಗೆ ಹೆಚ್ಚು ಒತ್ತು ನೀಡುತ್ತಲೇ ಸಮಾಜಪರ ಆಲೋಚನೆಯನ್ನು ಹೊಂದಲು ಪ್ರಯತ್ನಿಸಬೇಕು’ ಎಂದರು.</p>.<p>ತಲಕಾಡು ನಾಡಕಚೇರಿಯ ಉಪ ತಹಶೀಲ್ದಾರ್ ಮಾತನಾಡಿ, ‘ಮಕ್ಕಳು ತಮ್ಮ ಭವಿಷ್ಯ ರೂಪಿಸಲು ಶ್ರಮಿಸುವ ಪೋಷಕರನ್ನು ಗೌರವಿಸಬೇಕು, ಚೆನ್ನಾಗಿ ನೋಡಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ವಸಂತರಾಜು, ‘ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಡಿಸಿಕೊಳ್ಳಬೇಕು. ಸರಿ ತಪ್ಪುಗಳ ವಿಮರ್ಶಿಸಿ, ಪ್ರತಿಕ್ರಿಯಿಸುವ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಶೇಖರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗಣ್ಣ ಅವರು ಕಾಲೇಜಿನ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿ ಪ್ರಸ್ತುತಪಡಿಸಿದರು.</p>.<p>ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಎಸ್.ರವಿಕುಮಾರ್, ಬೋಧಕರಾದ ಚಲುವರಾಜು ಆರ್, ಡಿ.ಹರೀಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-1095414871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ.ನರಸೀಪುರ: ‘ವಿದ್ಯಾರ್ಥಿಗಳು ಸೇವಾ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು’ ಎಂದು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಬೋಧಕ ಎಂ.ಕ್ರಾಂತಿರಾಜ್ ಒಡೆಯರ್ ಹೇಳಿದರು</p>.<p>ತಾಲ್ಲೂಕಿನ ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಶೈಕ್ಷಣಿಕ ಸಾಧನೆಗೆ ಹೆಚ್ಚು ಒತ್ತು ನೀಡುತ್ತಲೇ ಸಮಾಜಪರ ಆಲೋಚನೆಯನ್ನು ಹೊಂದಲು ಪ್ರಯತ್ನಿಸಬೇಕು’ ಎಂದರು.</p>.<p>ತಲಕಾಡು ನಾಡಕಚೇರಿಯ ಉಪ ತಹಶೀಲ್ದಾರ್ ಮಾತನಾಡಿ, ‘ಮಕ್ಕಳು ತಮ್ಮ ಭವಿಷ್ಯ ರೂಪಿಸಲು ಶ್ರಮಿಸುವ ಪೋಷಕರನ್ನು ಗೌರವಿಸಬೇಕು, ಚೆನ್ನಾಗಿ ನೋಡಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ವಸಂತರಾಜು, ‘ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಡಿಸಿಕೊಳ್ಳಬೇಕು. ಸರಿ ತಪ್ಪುಗಳ ವಿಮರ್ಶಿಸಿ, ಪ್ರತಿಕ್ರಿಯಿಸುವ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.</p>.<p>ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಶೇಖರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗಣ್ಣ ಅವರು ಕಾಲೇಜಿನ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿ ಪ್ರಸ್ತುತಪಡಿಸಿದರು.</p>.<p>ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಎಸ್.ರವಿಕುಮಾರ್, ಬೋಧಕರಾದ ಚಲುವರಾಜು ಆರ್, ಡಿ.ಹರೀಶ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-1095414871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>