<p>ಮೈಸೂರು: ‘ಸಾಮಾಜಿಕ ಜಾಲತಾಣಗಳು ಆವರಿಸಿಕೊಂಡಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೆಚ್ಚು ಅಂಟಿಕೊಳ್ಳದೆ ಸೃಜಶೀಲತೆ ಬೆಳೆಸಿಕೊಳ್ಳಬೇಕು. ಕಲಾತ್ಮಕ ಮತ್ತು ಶೖಕ್ಷಣಿಕ ಜೀವನವನ್ನು ವೃದ್ಧಿಸಿಕೊಳ್ಳಬೇಕು’ ಎಂದು ಮುಖಂಡ ಅಹಿಂದ ಜವರಪ್ಪ ಸಲಹೆ ನೀಡಿದರು.</p>.<p>ಪರಸ್ಪರ ಸಂಸ್ಥೆಯು ಶಾಶ್ವತ ಸೇವಾ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 3ನೇ ವರ್ಷದ ‘ಚಿಣ್ಣರ ಚೈತ್ರ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂತಹ ಶಿಬಿರಗಳು ಮಕ್ಕಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹೊರಹಾಕಲು ವೇದಿಕೆಯಾಗಲಿವೆ’ ಎಂದರು.</p>.<p>ಕಲಾವಿದ ಅಂಕಿತ್ ರಾಜ್, ‘ಮಕ್ಕಳು ಉತ್ತಮ ಆಲೋಚನೆಗಳಿಂದ ಅತ್ಯುತ್ತಮ ಕಾರ್ಯಗಳಲ್ಲಿ ತೊಡಗಿ ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ತಿಳಿಸಿದರು.</p>.<p>ನಿವೃತ್ತ ಪ್ರಾಂಶುಪಾಲ ಶಿ. ಕುಮಾರಸ್ವಾಮಿ, ಮುಖ್ಯಶಿಕ್ಷಕಿ ಪವಿತ್ರಾ ಎಚ್.ಪಿ., ತಾನ್ಯಾ ಚೌಧರಿ, ಪರಸ್ಪರ ಸಂಸ್ಥೆಯ ಸಂಸ್ಥಾಪಕ ಹಾಗೂ ಶಿಬಿರದ ನಿರ್ದೇಶಕ ರಮೇಶ್ ತಾಯೂರು, ಮದನ್ ತೊರೆಮಾವು ಪಾಲ್ಗೊಂಡಿದ್ದರು.</p>.<p>ಗಾಯಕ ವಿಶ್ವನಾಥ್ ಚಂಗಚಹಳ್ಳಿ ಮತ್ತು ಶಿವಕುಮಾರ್ ತಂಡದವರು ಗೀತಗಾಯನ ಪ್ರಸ್ತುತಪಡಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಭಿಷೇಕ್ ಪಾಳ್ಯಾಗಾರ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-791437306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಸಾಮಾಜಿಕ ಜಾಲತಾಣಗಳು ಆವರಿಸಿಕೊಂಡಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೆಚ್ಚು ಅಂಟಿಕೊಳ್ಳದೆ ಸೃಜಶೀಲತೆ ಬೆಳೆಸಿಕೊಳ್ಳಬೇಕು. ಕಲಾತ್ಮಕ ಮತ್ತು ಶೖಕ್ಷಣಿಕ ಜೀವನವನ್ನು ವೃದ್ಧಿಸಿಕೊಳ್ಳಬೇಕು’ ಎಂದು ಮುಖಂಡ ಅಹಿಂದ ಜವರಪ್ಪ ಸಲಹೆ ನೀಡಿದರು.</p>.<p>ಪರಸ್ಪರ ಸಂಸ್ಥೆಯು ಶಾಶ್ವತ ಸೇವಾ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 3ನೇ ವರ್ಷದ ‘ಚಿಣ್ಣರ ಚೈತ್ರ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂತಹ ಶಿಬಿರಗಳು ಮಕ್ಕಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹೊರಹಾಕಲು ವೇದಿಕೆಯಾಗಲಿವೆ’ ಎಂದರು.</p>.<p>ಕಲಾವಿದ ಅಂಕಿತ್ ರಾಜ್, ‘ಮಕ್ಕಳು ಉತ್ತಮ ಆಲೋಚನೆಗಳಿಂದ ಅತ್ಯುತ್ತಮ ಕಾರ್ಯಗಳಲ್ಲಿ ತೊಡಗಿ ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ತಿಳಿಸಿದರು.</p>.<p>ನಿವೃತ್ತ ಪ್ರಾಂಶುಪಾಲ ಶಿ. ಕುಮಾರಸ್ವಾಮಿ, ಮುಖ್ಯಶಿಕ್ಷಕಿ ಪವಿತ್ರಾ ಎಚ್.ಪಿ., ತಾನ್ಯಾ ಚೌಧರಿ, ಪರಸ್ಪರ ಸಂಸ್ಥೆಯ ಸಂಸ್ಥಾಪಕ ಹಾಗೂ ಶಿಬಿರದ ನಿರ್ದೇಶಕ ರಮೇಶ್ ತಾಯೂರು, ಮದನ್ ತೊರೆಮಾವು ಪಾಲ್ಗೊಂಡಿದ್ದರು.</p>.<p>ಗಾಯಕ ವಿಶ್ವನಾಥ್ ಚಂಗಚಹಳ್ಳಿ ಮತ್ತು ಶಿವಕುಮಾರ್ ತಂಡದವರು ಗೀತಗಾಯನ ಪ್ರಸ್ತುತಪಡಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಭಿಷೇಕ್ ಪಾಳ್ಯಾಗಾರ್ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-39-791437306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>