<p>ಮೈಸೂರು: ‘ವಿದ್ಯಾರ್ಥಿಗಳು ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನ ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ ಆತ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟ’ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.</p>.<p>ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶನಿವಾರ ನಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪೋಷಕರು, ಶಿಕ್ಷಕರು ಮಾರ್ಗದರ್ಶನ ನೀಡಬಹುದು. ಆದರೆ, ನಿಮ್ಮ ಭವಿಷ್ಯವನ್ನು ನೀವೇ ಕಟ್ಟಿಕೊಳ್ಳಬೇಕು. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರೆಯಿರಿ. ನೀವು ವಿದ್ಯಾವಂತರಾಗದಿದ್ದರೆ, ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇಲ್ಲವಾದರೆ ಈ ಸಮಾಜದಲ್ಲಿ ಯಶಸ್ವಿಯಾಗಿ ಬದುಕಲು ಸಾದ್ಯವಾಗಲ್ಲ’ ಎಂದರು.</p>.<p>‘ಪತ್ರಕರ್ತರು ಸುದ್ದಿಮನೆಗೆ ಸೀಮಿತವಾಗದೆ ಮಕ್ಕಳ ಭವಿಷ್ಯದ ಕಡೆಗೂ ಗಮನ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರಜಾವಾಣಿ’ ಮೈಸೂರು ಬ್ಯುರೊ ಮುಖ್ಯಸ್ಥ ಕೆ. ನರಸಿಂಹಮೂರ್ತಿ, ಹಿರಿಯ ವರದಿಗಾರ ಕುಂದೂರು ಉಮೇಶ ಭಟ್ಟ, ಪತ್ರಕರ್ತರಾದ ಆರ್.ಕೃಷ್ಣಕುಮಾರ್, ಐತಿಚಂಡ ರಮೇಶ್ ಉತ್ತಪ್ಪ, ಎ.ಸಿ. ಪ್ರಭಾಕರ್, ಎಚ್.ಕೆ. ನಾಗೇಶ್, ಕೆ.ಟಿ. ಮಂಜುನಾಥ್, ಶಿವಕುಮಾರ್ ವಿ. ರಾವ್ ಅವರನ್ನು ಅಭಿನಂದಿಸಲಾಯಿತು.</p>.<p>ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಎಸ್ಎಸ್ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ, ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-620541517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ವಿದ್ಯಾರ್ಥಿಗಳು ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನ ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ ಆತ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟ’ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.</p>.<p>ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶನಿವಾರ ನಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಪೋಷಕರು, ಶಿಕ್ಷಕರು ಮಾರ್ಗದರ್ಶನ ನೀಡಬಹುದು. ಆದರೆ, ನಿಮ್ಮ ಭವಿಷ್ಯವನ್ನು ನೀವೇ ಕಟ್ಟಿಕೊಳ್ಳಬೇಕು. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರೆಯಿರಿ. ನೀವು ವಿದ್ಯಾವಂತರಾಗದಿದ್ದರೆ, ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇಲ್ಲವಾದರೆ ಈ ಸಮಾಜದಲ್ಲಿ ಯಶಸ್ವಿಯಾಗಿ ಬದುಕಲು ಸಾದ್ಯವಾಗಲ್ಲ’ ಎಂದರು.</p>.<p>‘ಪತ್ರಕರ್ತರು ಸುದ್ದಿಮನೆಗೆ ಸೀಮಿತವಾಗದೆ ಮಕ್ಕಳ ಭವಿಷ್ಯದ ಕಡೆಗೂ ಗಮನ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರಜಾವಾಣಿ’ ಮೈಸೂರು ಬ್ಯುರೊ ಮುಖ್ಯಸ್ಥ ಕೆ. ನರಸಿಂಹಮೂರ್ತಿ, ಹಿರಿಯ ವರದಿಗಾರ ಕುಂದೂರು ಉಮೇಶ ಭಟ್ಟ, ಪತ್ರಕರ್ತರಾದ ಆರ್.ಕೃಷ್ಣಕುಮಾರ್, ಐತಿಚಂಡ ರಮೇಶ್ ಉತ್ತಪ್ಪ, ಎ.ಸಿ. ಪ್ರಭಾಕರ್, ಎಚ್.ಕೆ. ನಾಗೇಶ್, ಕೆ.ಟಿ. ಮಂಜುನಾಥ್, ಶಿವಕುಮಾರ್ ವಿ. ರಾವ್ ಅವರನ್ನು ಅಭಿನಂದಿಸಲಾಯಿತು.</p>.<p>ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಎಸ್ಎಸ್ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ, ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-620541517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>