<p>ಮೈಸೂರು: ‘ವಿದ್ಯಾರ್ಥಿನಿಯರು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು’ ಎಂದು ಧ್ವನಿ ಫೌಂಡೇಷನ್ ಸಂಸ್ಥಾಪಕಿ ಶ್ವೇತಾ ಮಡಪ್ಪಾಡಿ ತಿಳಿಸಿದರು.</p>.<p>ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಯೂತ್ ರೆಡ್ಕ್ರಾಸ್ ಹಾಗೂ ಮಹಿಳಾ ಸಬಲೀಕರಣ ಕೋಶದಿಂದ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರೆಯುತ್ತದೆ. ಆಕೆಯ ಮೇಲಿನ ಶೋಷಣೆಯೂ ಕಡಿಮೆಯಾಗುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ವಹಣಾ ಅಧ್ಯಯನ ವಿಭಾಗದ ಸಂಯೋಜಕಿ ಹೇಮಾ ಪಾಟೀಲ್, ‘ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿವೆ.ಹೆಣ್ಣುಮಕ್ಕಳು ಕಾನೂನು ಅರಿವು ಪಡೆದುಕೊಂಡರೆ, ಅವನ್ನು ಕಾನೂನಾತ್ಮಕವಾಗಿ ಎದುರಿಸಬಹುದು’ ಎಂದರು.</p>.<p>ಲೆಕ್ಕ ಪರಿಶೋಧಕಿ ಜಿ.ಎ. ಅಕ್ಷರಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ಕಾಲೇಜಿನ ಪ್ರಾಂಶುಪಾಲ ರೇಚಣ್ಣ, ಯೂತ್ ರೆಡ್ಕ್ರಾಸ್ ಸಂಚಾಲಕಿ ಪಿ. ವಸುಮತಿ ಮತ್ತು ಮಹಿಳಾ ಸಬಲೀಕರಣ ಕೋಶದ ಸಂಚಾಲಕಿ ಎನ್. ನಾಗಲಾಂಬಿಕೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-924638289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ವಿದ್ಯಾರ್ಥಿನಿಯರು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು’ ಎಂದು ಧ್ವನಿ ಫೌಂಡೇಷನ್ ಸಂಸ್ಥಾಪಕಿ ಶ್ವೇತಾ ಮಡಪ್ಪಾಡಿ ತಿಳಿಸಿದರು.</p>.<p>ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಯೂತ್ ರೆಡ್ಕ್ರಾಸ್ ಹಾಗೂ ಮಹಿಳಾ ಸಬಲೀಕರಣ ಕೋಶದಿಂದ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರೆಯುತ್ತದೆ. ಆಕೆಯ ಮೇಲಿನ ಶೋಷಣೆಯೂ ಕಡಿಮೆಯಾಗುತ್ತದೆ’ ಎಂದರು.</p>.<p>ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ವಹಣಾ ಅಧ್ಯಯನ ವಿಭಾಗದ ಸಂಯೋಜಕಿ ಹೇಮಾ ಪಾಟೀಲ್, ‘ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿವೆ.ಹೆಣ್ಣುಮಕ್ಕಳು ಕಾನೂನು ಅರಿವು ಪಡೆದುಕೊಂಡರೆ, ಅವನ್ನು ಕಾನೂನಾತ್ಮಕವಾಗಿ ಎದುರಿಸಬಹುದು’ ಎಂದರು.</p>.<p>ಲೆಕ್ಕ ಪರಿಶೋಧಕಿ ಜಿ.ಎ. ಅಕ್ಷರಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ಕಾಲೇಜಿನ ಪ್ರಾಂಶುಪಾಲ ರೇಚಣ್ಣ, ಯೂತ್ ರೆಡ್ಕ್ರಾಸ್ ಸಂಚಾಲಕಿ ಪಿ. ವಸುಮತಿ ಮತ್ತು ಮಹಿಳಾ ಸಬಲೀಕರಣ ಕೋಶದ ಸಂಚಾಲಕಿ ಎನ್. ನಾಗಲಾಂಬಿಕೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-39-924638289</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>