<p>ಮೈಸೂರು: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಭಕ್ತಿಯಿಂದ ಗುರಿಯಿಟ್ಟುಕೊಂಡು ಸಾಧನೆ ಮಾಡುವ ಮುಖಾಂತರ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ರೇಖಾ ತಿಳಿಸಿದರು.</p>.<p>ಕುವೆಂಪುನಗರದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯೆಯ ಜೊತೆಗೆ ಸತತ ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ‘ ಎಂದು ಅವರು ಕಿವಿಮಾತು ಹೇಳಿದರು.</p>.<p>‘ಬಿಸಿಎಂ ಹಾಸ್ಟೆಲ್ನಲ್ಲಿ ಓದಿದ ರಾಘವೇಂದ್ರ ಇಂದು ಇಲ್ಲೇ ಅಧಿಕಾರಿಯಾಗಿದ್ದಾರೆ. ಮಂಡ್ಯದಲ್ಲಿ ಕುಮಾರ್ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ನೀವು ಸಹ ಅವರನ್ನು ಮಾದರಿಯಾಗಿಟ್ಟುಕೊಂಡು ಸಾಧನೆ ಮಾಡಬೇಕು’ ಎಂದರು.</p>.<p>ನಿಲಯ ಪಾಲಕ ಜಗದೀಶ್ ಕೋರಿ, ವಿಸ್ತರಣಾಧಿಕಾರಿ ಸುಜೇಂದ್ರಕುಮಾರ್, ನಿಲಯ ಪಾಲಕರಾದ ಮಹಾಲಕ್ಷ್ಮಿ, ನಾಗರತ್ನ, ನಾಗರಾಜ್, ರಮ್ಯಾ, ಅನುಪಮಾ, ರೇಖಾ, ಭಾಗ್ಯಲಕ್ಷ್ಮಿ, ಪರಮೇಶ್ವರಪ್ಪ, ಧನಂಜಯ, ತೇಜಸ್ವಿನಿ, ಅರ್ಪಿತಾ ಹಾಗೂ ಲೋಕೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-39-823782662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಭಕ್ತಿಯಿಂದ ಗುರಿಯಿಟ್ಟುಕೊಂಡು ಸಾಧನೆ ಮಾಡುವ ಮುಖಾಂತರ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ರೇಖಾ ತಿಳಿಸಿದರು.</p>.<p>ಕುವೆಂಪುನಗರದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯೆಯ ಜೊತೆಗೆ ಸತತ ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ‘ ಎಂದು ಅವರು ಕಿವಿಮಾತು ಹೇಳಿದರು.</p>.<p>‘ಬಿಸಿಎಂ ಹಾಸ್ಟೆಲ್ನಲ್ಲಿ ಓದಿದ ರಾಘವೇಂದ್ರ ಇಂದು ಇಲ್ಲೇ ಅಧಿಕಾರಿಯಾಗಿದ್ದಾರೆ. ಮಂಡ್ಯದಲ್ಲಿ ಕುಮಾರ್ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ನೀವು ಸಹ ಅವರನ್ನು ಮಾದರಿಯಾಗಿಟ್ಟುಕೊಂಡು ಸಾಧನೆ ಮಾಡಬೇಕು’ ಎಂದರು.</p>.<p>ನಿಲಯ ಪಾಲಕ ಜಗದೀಶ್ ಕೋರಿ, ವಿಸ್ತರಣಾಧಿಕಾರಿ ಸುಜೇಂದ್ರಕುಮಾರ್, ನಿಲಯ ಪಾಲಕರಾದ ಮಹಾಲಕ್ಷ್ಮಿ, ನಾಗರತ್ನ, ನಾಗರಾಜ್, ರಮ್ಯಾ, ಅನುಪಮಾ, ರೇಖಾ, ಭಾಗ್ಯಲಕ್ಷ್ಮಿ, ಪರಮೇಶ್ವರಪ್ಪ, ಧನಂಜಯ, ತೇಜಸ್ವಿನಿ, ಅರ್ಪಿತಾ ಹಾಗೂ ಲೋಕೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-39-823782662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>