<p>ತಿ. ನರಸೀಪುರ: ಸರ್ಕಾರಿ ಶಾಲೆಯ ಮಕ್ಕಳು ಸಾಂಪ್ರದಾಯಿಕ ಶಿಕ್ಷಣಕ್ಕೆ ಸೀಮಿತವಾಗದೆ, ಜಾಗತಿಕ ಮಟ್ಟದ ತಂತ್ರಜ್ಞಾನದ ಜ್ಞಾನವನ್ನು ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯ್ಕುಮಾರ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ನೂತನ ವೆಬ್ಸೈಟ್ ಹಾಗೂ ಸುಸಜ್ಜಿತ ಕ್ರೀಡಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ತುಂಬಲ ಸರ್ಕಾರಿ ಶಾಲೆಯಲ್ಲಿ ಎಐ, ರೋಬೋಟಿಕ್ಸ್ ಹಾಗೂ ಆಸ್ಟ್ರೋ ಸೈನ್ಸ್ ತರಗತಿಗಳನ್ನು ಆರಂಭಿಸಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಆಧುನಿಕ ತಂತ್ರಜ್ಞಾನದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>‘ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸುಸಜ್ಜಿತಗೊಳಿಸಲಾಗುತ್ತಿದೆ. ಶಾಲೆಯು ಪಾರದರ್ಶಕತೆ ಮತ್ತು ಡಿಜಿಟಲ್ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ದೈಹಿಕ ವಿಕಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದೆ. ಕ್ರೀಡಾ ಕೊಠಡಿಯನ್ನು ಮಕ್ಕಳು ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆಯು ಈ ಯೋಜನೆಗಳಿಗೆ ಸದಾ ಬೆಂಬಲ ನೀಡಲಿದ್ದು, ಶಿಕ್ಷಕರು, ಪೋಷಕರು ಮತ್ತು ಎಸ್ಡಿಎಂಸಿ ಮಂಡಳಿ ಒಟ್ಟಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಮೈಸೂರು ಜಿಲ್ಲಾ ಶಿಕ್ಷಣಾಧಿಕಾರಿ ನಿರೂಪ ಬೆಸ್ಲಿ, ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಜಿ. ಶೋಭಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಸಮಾಜ ಸೇವಕ ಲಯನ್ ಕುಮಾರ್, 'ಟ್ರೀವಿಂಗ್ ಮೈಂಡ್' ಸಂಸ್ಥೆಯ ಕೋ-ಆರ್ಡಿನೇಟರ್ ನಿಖಿಲ್ ಹಾಗೂ ಸಿ.ಆರ್.ಪಿ ಶ್ರೀಧರ್, ಎಸ್ಡಿಎಂಸಿ ಅಧ್ಯಕ್ಷ ಶಿವಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿದ್ದರಾಜು, ಎಸ್ಡಿಎಂಸಿ ಸದಸ್ಯರಾದ ನಂದೀಶ ಸಾಗರ, ಪಾಪಣ್ಣ, ಇಂದ್ರಮ್ಮ, ಸೌಮ್ಯ ನಾಗರಾಜು, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಚುಂಚೇಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-1759789989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ. ನರಸೀಪುರ: ಸರ್ಕಾರಿ ಶಾಲೆಯ ಮಕ್ಕಳು ಸಾಂಪ್ರದಾಯಿಕ ಶಿಕ್ಷಣಕ್ಕೆ ಸೀಮಿತವಾಗದೆ, ಜಾಗತಿಕ ಮಟ್ಟದ ತಂತ್ರಜ್ಞಾನದ ಜ್ಞಾನವನ್ನು ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯ್ಕುಮಾರ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ನೂತನ ವೆಬ್ಸೈಟ್ ಹಾಗೂ ಸುಸಜ್ಜಿತ ಕ್ರೀಡಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ತುಂಬಲ ಸರ್ಕಾರಿ ಶಾಲೆಯಲ್ಲಿ ಎಐ, ರೋಬೋಟಿಕ್ಸ್ ಹಾಗೂ ಆಸ್ಟ್ರೋ ಸೈನ್ಸ್ ತರಗತಿಗಳನ್ನು ಆರಂಭಿಸಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಆಧುನಿಕ ತಂತ್ರಜ್ಞಾನದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>‘ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸುಸಜ್ಜಿತಗೊಳಿಸಲಾಗುತ್ತಿದೆ. ಶಾಲೆಯು ಪಾರದರ್ಶಕತೆ ಮತ್ತು ಡಿಜಿಟಲ್ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ದೈಹಿಕ ವಿಕಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದೆ. ಕ್ರೀಡಾ ಕೊಠಡಿಯನ್ನು ಮಕ್ಕಳು ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆಯು ಈ ಯೋಜನೆಗಳಿಗೆ ಸದಾ ಬೆಂಬಲ ನೀಡಲಿದ್ದು, ಶಿಕ್ಷಕರು, ಪೋಷಕರು ಮತ್ತು ಎಸ್ಡಿಎಂಸಿ ಮಂಡಳಿ ಒಟ್ಟಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ಮಾಡಿದರು.</p>.<p>ಮೈಸೂರು ಜಿಲ್ಲಾ ಶಿಕ್ಷಣಾಧಿಕಾರಿ ನಿರೂಪ ಬೆಸ್ಲಿ, ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಜಿ. ಶೋಭಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಸಮಾಜ ಸೇವಕ ಲಯನ್ ಕುಮಾರ್, 'ಟ್ರೀವಿಂಗ್ ಮೈಂಡ್' ಸಂಸ್ಥೆಯ ಕೋ-ಆರ್ಡಿನೇಟರ್ ನಿಖಿಲ್ ಹಾಗೂ ಸಿ.ಆರ್.ಪಿ ಶ್ರೀಧರ್, ಎಸ್ಡಿಎಂಸಿ ಅಧ್ಯಕ್ಷ ಶಿವಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿದ್ದರಾಜು, ಎಸ್ಡಿಎಂಸಿ ಸದಸ್ಯರಾದ ನಂದೀಶ ಸಾಗರ, ಪಾಪಣ್ಣ, ಇಂದ್ರಮ್ಮ, ಸೌಮ್ಯ ನಾಗರಾಜು, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಚುಂಚೇಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-38-1759789989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>