<p>ಮೈಸೂರು: ‘ಶಿಕ್ಷಕರು ಮಕ್ಕಳಿಗೆ ನೈಜ ಗುಣಮಟ್ಟದ ಶಿಕ್ಷಣ ನೀಡುವುದನ್ನು ಗುರಿಯಾಗಿಟ್ಟುಕೊಂಡು, ನಿರಂತರ ಕಲಿಕೆಯ ಮೂಲಕ ಉನ್ನತೀಕರಿಸಿಕೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು’ ಎಂದು ಅನ್ವಯಿಕ ಗಣಿತಜ್ಞ ಗುರುರಾಜ ಶ್ರೀಧರ ಸಲಹೆ ನೀಡಿದರು.</p>.<p>2026-27ರ ಶೈಕ್ಷಣಿಕ ವರ್ಷಾರಂಭದ ನಿಟ್ಟಿನಲ್ಲಿ ನೈಪುಣ್ಯ ಶಿಕ್ಷಣ ಸಂಸ್ಥೆಯ ದಟ್ಟಗಳ್ಳಿ ಸಿಬಿಎಸ್ಇ ಕ್ಯಾಂಪಸ್ ಹಾಗೂ ಆರ್.ಟಿ. ನಗರದ ಐಸಿಎಸ್ಇ ಕ್ಯಾಂಪಸ್ನ ಶಿಕ್ಷಕರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಪ್ರಾಥಮಿಕ ಶಿಕ್ಷಣ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಎಷ್ಟೇ ತಂತ್ರಜ್ಞಾನಗಳು ಬಂದರೂ ಸಾಂಪ್ರದಾಯಿಕ ಶಿಕ್ಷಣವನ್ನು ಹೊರತುಪಡಿಸಿ ಪ್ರಾಥಮಿಕ ಶಿಕ್ಷಣವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p>.<p>‘ಅವಶ್ಯವಿರುವಷ್ಟೇ ತಂತ್ರಜ್ಞಾನ ಬಳಸಿಕೊಂಡು, ಸಾಂಪ್ರದಾಯಿಕ ಶಿಕ್ಷಣ ಮುಂದಿಟ್ಟುಕೊಂಡು, ಭವಿಷ್ಯತ್ತಿನಲ್ಲಿ ಮಕ್ಕಳು ಎದುರಿಸಬೇಕಾದ ಸವಾಲುಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣವನ್ನು ರೂಪಿಸಬೇಕಿದೆ’ ಎಂದು ಹೇಳಿದರು.</p>.<p>ನೈಪುಣ್ಯ ಸಂಸ್ಥೆಯ ಅಧ್ಯಕ್ಷ ಆರ್. ರಘು, ಪ್ರಾಂಶುಪಾಲ ಗುರುಪ್ರಸಾದ್, ಶಿಕ್ಷಣ ಸಂಯೋಜಕಿ ಶ್ವೇತಾ ಕೆ.ಎಸ್. ಮತ್ತು ಶಿಕ್ಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-39-1381450859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಶಿಕ್ಷಕರು ಮಕ್ಕಳಿಗೆ ನೈಜ ಗುಣಮಟ್ಟದ ಶಿಕ್ಷಣ ನೀಡುವುದನ್ನು ಗುರಿಯಾಗಿಟ್ಟುಕೊಂಡು, ನಿರಂತರ ಕಲಿಕೆಯ ಮೂಲಕ ಉನ್ನತೀಕರಿಸಿಕೊಳ್ಳಬೇಕು. ಆ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು’ ಎಂದು ಅನ್ವಯಿಕ ಗಣಿತಜ್ಞ ಗುರುರಾಜ ಶ್ರೀಧರ ಸಲಹೆ ನೀಡಿದರು.</p>.<p>2026-27ರ ಶೈಕ್ಷಣಿಕ ವರ್ಷಾರಂಭದ ನಿಟ್ಟಿನಲ್ಲಿ ನೈಪುಣ್ಯ ಶಿಕ್ಷಣ ಸಂಸ್ಥೆಯ ದಟ್ಟಗಳ್ಳಿ ಸಿಬಿಎಸ್ಇ ಕ್ಯಾಂಪಸ್ ಹಾಗೂ ಆರ್.ಟಿ. ನಗರದ ಐಸಿಎಸ್ಇ ಕ್ಯಾಂಪಸ್ನ ಶಿಕ್ಷಕರಿಗೆ ಹಮ್ಮಿಕೊಂಡಿರುವ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಪ್ರಾಥಮಿಕ ಶಿಕ್ಷಣ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಎಷ್ಟೇ ತಂತ್ರಜ್ಞಾನಗಳು ಬಂದರೂ ಸಾಂಪ್ರದಾಯಿಕ ಶಿಕ್ಷಣವನ್ನು ಹೊರತುಪಡಿಸಿ ಪ್ರಾಥಮಿಕ ಶಿಕ್ಷಣವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದರು.</p>.<p>‘ಅವಶ್ಯವಿರುವಷ್ಟೇ ತಂತ್ರಜ್ಞಾನ ಬಳಸಿಕೊಂಡು, ಸಾಂಪ್ರದಾಯಿಕ ಶಿಕ್ಷಣ ಮುಂದಿಟ್ಟುಕೊಂಡು, ಭವಿಷ್ಯತ್ತಿನಲ್ಲಿ ಮಕ್ಕಳು ಎದುರಿಸಬೇಕಾದ ಸವಾಲುಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಕ್ಷಣವನ್ನು ರೂಪಿಸಬೇಕಿದೆ’ ಎಂದು ಹೇಳಿದರು.</p>.<p>ನೈಪುಣ್ಯ ಸಂಸ್ಥೆಯ ಅಧ್ಯಕ್ಷ ಆರ್. ರಘು, ಪ್ರಾಂಶುಪಾಲ ಗುರುಪ್ರಸಾದ್, ಶಿಕ್ಷಣ ಸಂಯೋಜಕಿ ಶ್ವೇತಾ ಕೆ.ಎಸ್. ಮತ್ತು ಶಿಕ್ಷಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-39-1381450859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>