<p>ಮೈಸೂರು: ‘ಶೈಕ್ಷಣಿಕ ಅವಧಿಯು ಜ್ಞಾನಕ್ಕಷ್ಟೇ ಸೀಮಿತ ಆಗಬಾರದು. ಅದು ಪರಿಣಾಮಕಾರಿ ಯೋಚನೆ, ನಾಯಕತ್ವ, ಹೊಸತನ ಹುಡುಕುವ ಸಮಯವಾಗಿ ಬಳಕೆಯಾಗಬೇಕು’ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಬಿ.ಎನ್.ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ತಂತ್ರಜ್ಞಾನದ ಕ್ಷಿಪ್ರಗತಿಯ ಬದಲಾವಣೆಗೆ ಶಿಕ್ಷಣ ವಿಧಾನವು ರೂಪಾಂತರಗೊಳ್ಳಬೇಕಾದ ಕಾಲದಲ್ಲಿ ನಾವು ಇದ್ದೇವೆ. ಹಿರಿಯ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಅನುಭವ ಒಂದುಗೂಡಿದಾಗ ಈ ಸವಾಲು ಮೀರಿ ನಿಲ್ಲಲು ಸಾಧ್ಯ. ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚಿಸಲು ಆದ್ಯತೆ ನೀಡುತ್ತಿದೆ’ ಎಂದರು.</p>.<p>‘ಬಲವಾದ ಹಿರಿಯ ವಿದ್ಯಾರ್ಥಿಗಳ ಒಕ್ಕೂಟವು ಸಂಸ್ಥೆಯ ಬೆನ್ನೆಲುಬು ಇದ್ದಂತೆ. ಬೆಳ್ಳಿ ಹಬ್ಬದ ನೆಪದಲ್ಲಿ ಬಿ.ಎನ್. ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಒಂದುಗೂಡಿರುವುದು ಹೆಮ್ಮೆಯ ವಿಚಾರ. ಸಂಸ್ಥೆಯ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಬ್ರಿಗೇಡ್ ಗ್ರೂಪ್ನ ಅಧ್ಯಕ್ಷ ಎಂ.ಆರ್.ಜೈಶಂಕರ್ ಮಾತನಾಡಿ, ‘ಮಾನಸ ಗಂಗೋತ್ರಿ ಆವರಣದ ವಾತಾವರಣವು ಕಲಿಕೆಗೆ ಪೂರಕವಾಗಿ ಇತ್ತು. ಈ ಸಂಸ್ಥೆ ಅನೇಕ ಅವಕಾಶ ನೀಡಿದೆ. ಉದ್ಯಮ ವಲಯದ ಯಶಸ್ಸಿಗೆ ಇಲ್ಲಿನ ಶಿಕ್ಷಕರ ಮಾರ್ಗದರ್ಶನವೂ ಇದೆ’ ಎಂದರು.</p>.<p>ನಿವೃತ್ತಿ ಹೊಂದುತ್ತಿರುವ ಬಿ.ಎನ್.ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯ ಪ್ರೊ.ಡಿ.ಆನಂದ್ ಅವರನ್ನು ಸನ್ಮಾನಿಸಲಾಯಿತು.</p>.<p>ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ.ಎಸ್.ಜೆ.ಮಂಜುನಾಥ್, ಪ್ರೊ.ಬಿ.ಶಿವರಾಜ್, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ, ಸಂಸ್ಥೆಯ ಅಧ್ಯಕ್ಷ ಪ್ರೊ.ಆರ್.ಮಹೇಶ್, ಸುಭಾಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-574068367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಶೈಕ್ಷಣಿಕ ಅವಧಿಯು ಜ್ಞಾನಕ್ಕಷ್ಟೇ ಸೀಮಿತ ಆಗಬಾರದು. ಅದು ಪರಿಣಾಮಕಾರಿ ಯೋಚನೆ, ನಾಯಕತ್ವ, ಹೊಸತನ ಹುಡುಕುವ ಸಮಯವಾಗಿ ಬಳಕೆಯಾಗಬೇಕು’ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಬಿ.ಎನ್.ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>‘ತಂತ್ರಜ್ಞಾನದ ಕ್ಷಿಪ್ರಗತಿಯ ಬದಲಾವಣೆಗೆ ಶಿಕ್ಷಣ ವಿಧಾನವು ರೂಪಾಂತರಗೊಳ್ಳಬೇಕಾದ ಕಾಲದಲ್ಲಿ ನಾವು ಇದ್ದೇವೆ. ಹಿರಿಯ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಅನುಭವ ಒಂದುಗೂಡಿದಾಗ ಈ ಸವಾಲು ಮೀರಿ ನಿಲ್ಲಲು ಸಾಧ್ಯ. ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಕೌಶಲ ಹೆಚ್ಚಿಸಲು ಆದ್ಯತೆ ನೀಡುತ್ತಿದೆ’ ಎಂದರು.</p>.<p>‘ಬಲವಾದ ಹಿರಿಯ ವಿದ್ಯಾರ್ಥಿಗಳ ಒಕ್ಕೂಟವು ಸಂಸ್ಥೆಯ ಬೆನ್ನೆಲುಬು ಇದ್ದಂತೆ. ಬೆಳ್ಳಿ ಹಬ್ಬದ ನೆಪದಲ್ಲಿ ಬಿ.ಎನ್. ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಒಂದುಗೂಡಿರುವುದು ಹೆಮ್ಮೆಯ ವಿಚಾರ. ಸಂಸ್ಥೆಯ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಬ್ರಿಗೇಡ್ ಗ್ರೂಪ್ನ ಅಧ್ಯಕ್ಷ ಎಂ.ಆರ್.ಜೈಶಂಕರ್ ಮಾತನಾಡಿ, ‘ಮಾನಸ ಗಂಗೋತ್ರಿ ಆವರಣದ ವಾತಾವರಣವು ಕಲಿಕೆಗೆ ಪೂರಕವಾಗಿ ಇತ್ತು. ಈ ಸಂಸ್ಥೆ ಅನೇಕ ಅವಕಾಶ ನೀಡಿದೆ. ಉದ್ಯಮ ವಲಯದ ಯಶಸ್ಸಿಗೆ ಇಲ್ಲಿನ ಶಿಕ್ಷಕರ ಮಾರ್ಗದರ್ಶನವೂ ಇದೆ’ ಎಂದರು.</p>.<p>ನಿವೃತ್ತಿ ಹೊಂದುತ್ತಿರುವ ಬಿ.ಎನ್.ಬಹದ್ದೂರ್ ನಿರ್ವಹಣಾ ವಿಜ್ಞಾನ ಸಂಸ್ಥೆಯ ಪ್ರೊ.ಡಿ.ಆನಂದ್ ಅವರನ್ನು ಸನ್ಮಾನಿಸಲಾಯಿತು.</p>.<p>ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರೊ.ಎಸ್.ಜೆ.ಮಂಜುನಾಥ್, ಪ್ರೊ.ಬಿ.ಶಿವರಾಜ್, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ, ಸಂಸ್ಥೆಯ ಅಧ್ಯಕ್ಷ ಪ್ರೊ.ಆರ್.ಮಹೇಶ್, ಸುಭಾಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-574068367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>